AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್​​ಗಿಂತಲೂ ಓ ಮಿತ್ರೋನ್​ ಭಯಂಕರ ಅಪಾಯಕಾರಿ, ರೂಪಾಂತರಗಳೂ ಡೇಂಜರ್​; ಅಪಹಾಸ್ಯ ಮಾಡಿದ ಶಶಿ ತರೂರ್​

ಜನವರಿ 29ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದ ಶಶಿ ತರೂರ್​,  ನೀವೆಲ್ಲ ಸೇರಿ ಈ ದೇಶಕ್ಕೆ ಎಷ್ಟು ಹಾನಿ ಮಾಡಿದ್ದೀರಿ ಎಂಬ ಬಗ್ಗೆ ನಿಮಗೆ ಅರಿವು ಇಲ್ಲ ಎಂದಿದ್ದರು.

ಒಮಿಕ್ರಾನ್​​ಗಿಂತಲೂ ಓ ಮಿತ್ರೋನ್​ ಭಯಂಕರ ಅಪಾಯಕಾರಿ, ರೂಪಾಂತರಗಳೂ ಡೇಂಜರ್​; ಅಪಹಾಸ್ಯ ಮಾಡಿದ ಶಶಿ ತರೂರ್​
ಶಶಿ ತರೂರ್​
TV9 Web
| Edited By: |

Updated on:Jan 31, 2022 | 1:17 PM

Share

ಪ್ರಧಾನಿ ನರೇಂದ್ರ ಮೋದಿ (PM Modi) ಭಾಷಣ ಮಾಡುವ ಸಂದರ್ಭದಲ್ಲಿ, ದೇಶವನ್ನು ಉದ್ದೇಶಿಸಿ ಮಾತನಾಡುವಾಗ ನಾಗರಿಕರನ್ನು ಮಿತ್ರೋನ್​ ಎಂದು ಉಲ್ಲೇಖಿಸುತ್ತಾರೆ. ಇದೀಗ ಅದೇ ಶಬ್ದದ ಬಗ್ಗೆ ಕಾಂಗ್ರೆಸ್ ನಾಯಕ, ಸಂಸದ ಶಶಿ ತರೂರ್ (Congress MP Shashi Tharoor) ​ ವ್ಯಂಗ್ಯವಾಡಿದ್ದಾರೆ. ಒಮಿಕ್ರಾನ್ (Omicron)​ ಸೋಂಕಿಗಿಂತಲೂ ‘ಓ ಮಿತ್ರೋನ್​’ (O Mitron) ಎಂಬುದು ಇನ್ನಷ್ಟು ಅಪಾಯಕಾರಿ ಎಂದು ಅಪಹಾಸ್ಯ ಮಾಡಿದ್ದಾರೆ. ಟ್ವೀಟ್​ ಮಾಡಿರುವ ಶಶಿ ತರೂರ್​, ಓ ಮಿತ್ರೋನ್​ ಎಂಬುದು ಒಮಿಕ್ರಾನ್​​ಗಿಂತಲೂ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಓ ಮಿತ್ರೋನ್​ ಪರಿಣಾಮಗಳನ್ನು ಪ್ರತಿದಿನ ನಾವು ನೋಡುತ್ತಿದ್ದೇವೆ. ಹೆಚ್ಚುತ್ತಿರುವ ಧ್ರುವೀಕರಣ, ದ್ವೇಷ ಮತ್ತು ಧರ್ಮಾಂಧತೆ, ಸಂವಿಧಾನದ ಮೇಲೆ ಆಗುತ್ತಿರುವ ದಮನಕಾರಿ ಆಕ್ರಮಣಗಳು, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನಗಳಲ್ಲಿ ಓ ಮಿತ್ರಾನ್​ ತೊಡಗಿಕೊಂಡಿದೆ. ಈ ವೈರಸ್​​ಗೆ ಸೌಮ್ಯ ಲಕ್ಷಣವುಳ್ಳ ರೂಪಾಂತರ ಇಲ್ಲವೇ ಇಲ್ಲ ಎಂದು ಶಶಿ ತರೂರ್​ ಹೇಳಿದ್ದಾರೆ.  

ಶಶಿ ತರೂರ್​ ತಮ್ಮ ಇಂಗ್ಲಿಷ್​ ಮತ್ತು ವಿಭಿನ್ನ ಟ್ವೀಟ್​ಗಳ ಮೂಲಕವೇ ಹೆಸರಾದವರು. ಕಳೆದ ಕೆಲವು ದಿನಗಳಿಂದಲೂ ಭಾರತೀಯ ಜನತಾ ಪಾರ್ಟಿ ವಿರುದ್ಧ ಮಾತನಾಡುತ್ತಿದ್ದು, ಅದರ ನಾಯಕರನ್ನು ಸೂಕ್ಷ್ಮವಾಗಿಯೇ ಕೆಣಕುತ್ತಿದ್ದಾರೆ. ಜನವರಿ 29ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದ ಶಶಿ ತರೂರ್​,  ನೀವೆಲ್ಲ ಸೇರಿ ಈ ದೇಶಕ್ಕೆ ಎಷ್ಟು ಹಾನಿ ಮಾಡಿದ್ದೀರಿ ಎಂಬ ಬಗ್ಗೆ ನಿಮಗೆ ಅರಿವು ಇಲ್ಲ. ಇಡೀ ದೇಶವನ್ನು ಸ್ಮಶಾನದಂತೆ ಮಾಡಿದ್ದೀರಿ ಎಂದು ಕ್ಯಾಪ್ಷನ್​ ಬರೆದಿದ್ದರು.  ಅದಕ್ಕೂ ಮೊದಲು ಜನವರಿ 26ರಂದು ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದ ಶಶಿ ತರೂರ್​, ಕಾಂಗ್ರೆಸ್​ ಮುಕ್ತ ಭಾರತ ನಿರ್ಮಾಣ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಆದರೆ ಬಿಜೆಪಿಯೀಗ ಕಾಂಗ್ರೆಸ್​ಯುಕ್ತ ಪಕ್ಷವಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ‘ಬಿಗ್​ ಬಾಸ್​ 15’ ಗೆದ್ದ ಸುಂದರಿ ತೇಜಸ್ವಿ ಪ್ರಕಾಶ್; ಇಲ್ಲಿವೆ ಖ್ಯಾತ ನಟಿಯ ಮನಮೋಹಕ ಫೋಟೋಗಳು

Published On - 1:17 pm, Mon, 31 January 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ