AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್​​ಗಿಂತಲೂ ಓ ಮಿತ್ರೋನ್​ ಭಯಂಕರ ಅಪಾಯಕಾರಿ, ರೂಪಾಂತರಗಳೂ ಡೇಂಜರ್​; ಅಪಹಾಸ್ಯ ಮಾಡಿದ ಶಶಿ ತರೂರ್​

ಜನವರಿ 29ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದ ಶಶಿ ತರೂರ್​,  ನೀವೆಲ್ಲ ಸೇರಿ ಈ ದೇಶಕ್ಕೆ ಎಷ್ಟು ಹಾನಿ ಮಾಡಿದ್ದೀರಿ ಎಂಬ ಬಗ್ಗೆ ನಿಮಗೆ ಅರಿವು ಇಲ್ಲ ಎಂದಿದ್ದರು.

ಒಮಿಕ್ರಾನ್​​ಗಿಂತಲೂ ಓ ಮಿತ್ರೋನ್​ ಭಯಂಕರ ಅಪಾಯಕಾರಿ, ರೂಪಾಂತರಗಳೂ ಡೇಂಜರ್​; ಅಪಹಾಸ್ಯ ಮಾಡಿದ ಶಶಿ ತರೂರ್​
ಶಶಿ ತರೂರ್​
TV9 Web
| Updated By: Lakshmi Hegde|

Updated on:Jan 31, 2022 | 1:17 PM

Share

ಪ್ರಧಾನಿ ನರೇಂದ್ರ ಮೋದಿ (PM Modi) ಭಾಷಣ ಮಾಡುವ ಸಂದರ್ಭದಲ್ಲಿ, ದೇಶವನ್ನು ಉದ್ದೇಶಿಸಿ ಮಾತನಾಡುವಾಗ ನಾಗರಿಕರನ್ನು ಮಿತ್ರೋನ್​ ಎಂದು ಉಲ್ಲೇಖಿಸುತ್ತಾರೆ. ಇದೀಗ ಅದೇ ಶಬ್ದದ ಬಗ್ಗೆ ಕಾಂಗ್ರೆಸ್ ನಾಯಕ, ಸಂಸದ ಶಶಿ ತರೂರ್ (Congress MP Shashi Tharoor) ​ ವ್ಯಂಗ್ಯವಾಡಿದ್ದಾರೆ. ಒಮಿಕ್ರಾನ್ (Omicron)​ ಸೋಂಕಿಗಿಂತಲೂ ‘ಓ ಮಿತ್ರೋನ್​’ (O Mitron) ಎಂಬುದು ಇನ್ನಷ್ಟು ಅಪಾಯಕಾರಿ ಎಂದು ಅಪಹಾಸ್ಯ ಮಾಡಿದ್ದಾರೆ. ಟ್ವೀಟ್​ ಮಾಡಿರುವ ಶಶಿ ತರೂರ್​, ಓ ಮಿತ್ರೋನ್​ ಎಂಬುದು ಒಮಿಕ್ರಾನ್​​ಗಿಂತಲೂ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಓ ಮಿತ್ರೋನ್​ ಪರಿಣಾಮಗಳನ್ನು ಪ್ರತಿದಿನ ನಾವು ನೋಡುತ್ತಿದ್ದೇವೆ. ಹೆಚ್ಚುತ್ತಿರುವ ಧ್ರುವೀಕರಣ, ದ್ವೇಷ ಮತ್ತು ಧರ್ಮಾಂಧತೆ, ಸಂವಿಧಾನದ ಮೇಲೆ ಆಗುತ್ತಿರುವ ದಮನಕಾರಿ ಆಕ್ರಮಣಗಳು, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನಗಳಲ್ಲಿ ಓ ಮಿತ್ರಾನ್​ ತೊಡಗಿಕೊಂಡಿದೆ. ಈ ವೈರಸ್​​ಗೆ ಸೌಮ್ಯ ಲಕ್ಷಣವುಳ್ಳ ರೂಪಾಂತರ ಇಲ್ಲವೇ ಇಲ್ಲ ಎಂದು ಶಶಿ ತರೂರ್​ ಹೇಳಿದ್ದಾರೆ.  

ಶಶಿ ತರೂರ್​ ತಮ್ಮ ಇಂಗ್ಲಿಷ್​ ಮತ್ತು ವಿಭಿನ್ನ ಟ್ವೀಟ್​ಗಳ ಮೂಲಕವೇ ಹೆಸರಾದವರು. ಕಳೆದ ಕೆಲವು ದಿನಗಳಿಂದಲೂ ಭಾರತೀಯ ಜನತಾ ಪಾರ್ಟಿ ವಿರುದ್ಧ ಮಾತನಾಡುತ್ತಿದ್ದು, ಅದರ ನಾಯಕರನ್ನು ಸೂಕ್ಷ್ಮವಾಗಿಯೇ ಕೆಣಕುತ್ತಿದ್ದಾರೆ. ಜನವರಿ 29ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದ ಶಶಿ ತರೂರ್​,  ನೀವೆಲ್ಲ ಸೇರಿ ಈ ದೇಶಕ್ಕೆ ಎಷ್ಟು ಹಾನಿ ಮಾಡಿದ್ದೀರಿ ಎಂಬ ಬಗ್ಗೆ ನಿಮಗೆ ಅರಿವು ಇಲ್ಲ. ಇಡೀ ದೇಶವನ್ನು ಸ್ಮಶಾನದಂತೆ ಮಾಡಿದ್ದೀರಿ ಎಂದು ಕ್ಯಾಪ್ಷನ್​ ಬರೆದಿದ್ದರು.  ಅದಕ್ಕೂ ಮೊದಲು ಜನವರಿ 26ರಂದು ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದ ಶಶಿ ತರೂರ್​, ಕಾಂಗ್ರೆಸ್​ ಮುಕ್ತ ಭಾರತ ನಿರ್ಮಾಣ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಆದರೆ ಬಿಜೆಪಿಯೀಗ ಕಾಂಗ್ರೆಸ್​ಯುಕ್ತ ಪಕ್ಷವಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ‘ಬಿಗ್​ ಬಾಸ್​ 15’ ಗೆದ್ದ ಸುಂದರಿ ತೇಜಸ್ವಿ ಪ್ರಕಾಶ್; ಇಲ್ಲಿವೆ ಖ್ಯಾತ ನಟಿಯ ಮನಮೋಹಕ ಫೋಟೋಗಳು

Published On - 1:17 pm, Mon, 31 January 22

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ