AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಕುರಿತ ಒಬಾಮಾರ ಕಾಮೆಂಟ್​ಗೆ ಶಿವ ಸೇನಾ ತೀವ್ರ ಆಕ್ಷೇಪಣೆ | Obama has no right to make comments on Indian politicians: Shiv Sena

ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಇಷ್ಟರಲ್ಲೇ ಬಿಡುಗಡೆಯಾಗಲಿರುವ ಆತ್ಮಚರಿತ್ರೆ ‘ಎ ಪ್ರಾಮಿಸ್ಡ್ ಲ್ಯಾಂಡ್’ನಲ್ಲಿ ಭಾರತದ ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಜೀವ್ ಗಾಂಧಿ ಕುರಿತು ಮಾಡಿರುವ ಕಾಮೆಂಟ್​ಗಳ ಬಗ್ಗೆ ಮಹಾರಾಷ್ಟ್ರದ ಆಡಳಿತಾರೂಢ ಶಿವ ಸೇನಾ ಪಕ್ಷವು ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದೆ. ಒಬಾಮಾ ತಮ್ಮ ಪುಸ್ತಕದಲ್ಲಿ ರಾಹುಲ್ ಬಗ್ಗೆ ಬರೆಯುವಾಗ, ‘‘ಧೃತಿಗೆಟ್ಟ, ಅಪ್ರಬುದ್ಧ; ತನ್ನ ಹೋಮ್​ವರ್ಕ್ ಮಾಡಿದ್ದರೂ, ವಿಷಯದ ಮೇಲೆ ಹಿಡಿತ ಸಾಧಿಸಲಾಗದೆ ಟೀಚರನ್ನು ಇಂಪ್ರೆಸ್ ಮಾಡಲು ಪ್ರಯತ್ನಿಸುವ ವಿದ್ಯಾರ್ಥಿಯಂತೆ ಭಾಸವಾಗುತ್ತಾರೆ,’’ ಎಂದಿದ್ದಾರೆ. ಅವರ ಈ […]

ರಾಹುಲ್ ಕುರಿತ ಒಬಾಮಾರ ಕಾಮೆಂಟ್​ಗೆ ಶಿವ ಸೇನಾ ತೀವ್ರ ಆಕ್ಷೇಪಣೆ | Obama has no right to make comments on Indian politicians: Shiv Sena
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 14, 2020 | 5:29 PM

Share

ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಇಷ್ಟರಲ್ಲೇ ಬಿಡುಗಡೆಯಾಗಲಿರುವ ಆತ್ಮಚರಿತ್ರೆ ‘ಎ ಪ್ರಾಮಿಸ್ಡ್ ಲ್ಯಾಂಡ್’ನಲ್ಲಿ ಭಾರತದ ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಜೀವ್ ಗಾಂಧಿ ಕುರಿತು ಮಾಡಿರುವ ಕಾಮೆಂಟ್​ಗಳ ಬಗ್ಗೆ ಮಹಾರಾಷ್ಟ್ರದ ಆಡಳಿತಾರೂಢ ಶಿವ ಸೇನಾ ಪಕ್ಷವು ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದೆ.

ಒಬಾಮಾ ತಮ್ಮ ಪುಸ್ತಕದಲ್ಲಿ ರಾಹುಲ್ ಬಗ್ಗೆ ಬರೆಯುವಾಗ, ‘‘ಧೃತಿಗೆಟ್ಟ, ಅಪ್ರಬುದ್ಧ; ತನ್ನ ಹೋಮ್​ವರ್ಕ್ ಮಾಡಿದ್ದರೂ, ವಿಷಯದ ಮೇಲೆ ಹಿಡಿತ ಸಾಧಿಸಲಾಗದೆ ಟೀಚರನ್ನು ಇಂಪ್ರೆಸ್ ಮಾಡಲು ಪ್ರಯತ್ನಿಸುವ ವಿದ್ಯಾರ್ಥಿಯಂತೆ ಭಾಸವಾಗುತ್ತಾರೆ,’’ ಎಂದಿದ್ದಾರೆ.

ಅವರ ಈ ಕಾಮೆಂಟನ್ನು ಗಂಭೀರವಾಗಿ ಪರಿಗಣಿಸಿರುವ ಶಿವ ಸೇನಾ, ಒಬ್ಬ ವಿದೇಶೀ ರಾಜಕಾರಣಿ ಕುರಿತು ಹಾಗೆ ಕಾಮೆಂಟ್ ಮಾಡುವ ಅಧಿಕಾರ ಒಬಾಮಾ ಅವರಿಗಿಲ್ಲವೆಂದು ಹೇಳಿದೆ. ಪಕ್ಷದ ಹಿರಿಯ ನಾಯಕ ಸಂಜಯ ರಾವತ್ ಅವರು ತಮ್ಮ ಟ್ವೀಟ್​ನಲ್ಲಿ, ಒಬಾಮಾರನ್ನು ತರಾಟೆಗೆ ತೆಗೆದುಕೊಂಡಿದ್ದು ಅವರ ಕಾಂಗ್ರೆಸ್ ನಾಯಕನ ಬಗ್ಗೆ ಅವರು ವ್ಯಕ್ತಪಡಿಸಿರುವ ಅಭಿಪ್ರಾಯ ಕೀಳು ಅಭಿರುಚಿಯದ್ದಾಗಿದೆ ಎಂದು ಹೇಳಿದ್ದಾರೆ.

‘‘ವಿದೇಶೀ ರಾಜಕಾರಣಿಯೊಬ್ಬ, ಭಾರತದ ರಾಜಕೀಯ ನಾಯಕರ ಬಗ್ಗೆ ಅಂಥ ಅಭಿಪ್ರಾಯವನ್ನು ವ್ಯಕ್ತಪಡಿಸುವುದು ಸರಿಯಲ್ಲ. ನಂತರ ಅವರು ಮಾಡಿರುವ ರಾಜಕೀಯ ವಿಶ್ಲೇಷಣೆ ಕೀಳು ಅಭಿರುಚಿಯದ್ದಾಗಿದೆ. ನಾವು, ‘ಟ್ರಂಪ್ ಒಬ್ಬ ಹುಚ್ಚ’ ಅಂತ ಹೇಳಲಾರೆವು. ನಮ್ಮ ದೇಶದ ಬಗ್ಗೆ ಒಬಾಮಾಗೇನು ಗೊತ್ತಿದೆ,’’ ಎಂದು ರಾವುತ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಸೇರಿದಂತೆ ವಿಶ್ವದ ಹಲವಾರು ನಾಯಕರನ್ನು ಕುರಿತು ಒಬಾಮಾ ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ. ಒಬಾಮಾ, ಮಹಿಳಾ ನಾಯಕರ ಸೌಂದರ್ಯದ ಬಗ್ಗೆ ಯಾರೊಬ್ಬರೂ ಮಾತಾಡುತ್ತಿಲ್ಲ ಎಂದು ಬರೆಯುವಾಗ ಸೋನಿಯಾ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ. ಹಾಗೆಯೇ, ಮನಮೋಹನ್ ಸಿಂಗ್ ಅವರ ‘ಅಗಾಧವಾದ ಅಖಂಡತೆಯನ್ನು’ ಕೊಂಡಾಡಿದ್ದಾರೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​