AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರದ ಸಂಗೀತ ಪ್ಲೇ ಮಾಡಬೇಡಿ ಎಂದ ಸೇನಾಧಿಕಾರಿಯ ಕಾರಿಗೆ ಬೆಂಕಿ, ಲಕ್ನೋದ ಹೋಟೆಲ್​​ಗೆ ಬೀಗಮುದ್ರೆ

ಗೋಮ್ತಿನಗರದಲ್ಲಿರುವ ಮೇಜರ್ ಅಭಿಜಿತ್ ಸಿಂಗ್ ಅವರ ಮನೆಯ ಸಮೀಪ ಈ ಹೋಟೆಲ್ ಇದೆ. ಭಾನುವಾರ ರಾತ್ರಿ ಅವರು ಹೋಟೆಲ್ ಸಿಬ್ಬಂದಿಗೆ ಸಂಗೀತ ನಿಲ್ಲಿಸುವಂತೆ ಕೇಳಿದರು. ಆದರೆ ಅವರು ನಿರಾಕರಿಸಿದರು

ಅಬ್ಬರದ ಸಂಗೀತ ಪ್ಲೇ ಮಾಡಬೇಡಿ ಎಂದ ಸೇನಾಧಿಕಾರಿಯ ಕಾರಿಗೆ ಬೆಂಕಿ, ಲಕ್ನೋದ ಹೋಟೆಲ್​​ಗೆ ಬೀಗಮುದ್ರೆ
ಸೀಲ್ ಮಾಡಿದ ಹೋಟೆಲ್Image Credit source: NDTV
TV9 Web
| Edited By: |

Updated on: Jan 10, 2023 | 4:54 PM

Share

ಲಖನೌ: ಉತ್ತರ ಪ್ರದೇಶದ (Uttar Pradesh) ರಾಜಧಾನಿ ಲಕ್ನೋದಲ್ಲಿ (Lucknow) ತಡರಾತ್ರಿಯಲ್ಲಿ ಜೋರಾಗಿ ಸಂಗೀತ ಪ್ಲೇ ಮಾಡಿದ್ದನ್ನು ವಿರೋಧಿಸಿದ ಸೇನಾ ಮೇಜರ್ ಕಾರಿಗೆ ಬೆಂಕಿ ಹಚ್ಚಿದ ನಂತರ ಹೋಟೆಲ್​​ನ್ನು ಮಂಗಳವಾರ ಸೀಲ್ ಮಾಡಲಾಗಿದೆ. ಹೋಟೆಲ್ ಮಿಲಾನೊ ಮತ್ತು ಕೆಫೆಯನ್ನು ಅಕ್ರಮವಾಗಿ ನಡೆಸಲಾಗುತ್ತಿದ್ದು, ನಿರ್ವಾಹಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಲಕ್ನೋ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ. ಐದು ಜನರನ್ನು ಬಂಧಿಸಲಾಗಿದೆ ಮತ್ತು ಪೊಲೀಸರು ಪ್ರಮುಖ ಆರೋಪಿ ಹೋಟೆಲ್‌ನ ಮ್ಯಾನೇಜರ್‌ಗಾಗಿ ಹುಡುಕುತ್ತಿದ್ದಾರೆ.

ಗೋಮ್ತಿನಗರದಲ್ಲಿರುವ ಮೇಜರ್ ಅಭಿಜಿತ್ ಸಿಂಗ್ ಅವರ ಮನೆಯ ಸಮೀಪ ಈ ಹೋಟೆಲ್ ಇದೆ. ಭಾನುವಾರ ರಾತ್ರಿ ಅವರು ಹೋಟೆಲ್ ಸಿಬ್ಬಂದಿಗೆ ಸಂಗೀತ ನಿಲ್ಲಿಸುವಂತೆ ಕೇಳಿದರು. ಆದರೆ ಅವರು ನಿರಾಕರಿಸಿದರು, ಇದು ವಾಗ್ವಾದಕ್ಕೆ ಕಾರಣವಾಯಿತು. ಪೊಲೀಸರ ಮಧ್ಯಪ್ರವೇಶದ ನಂತರ ಸಂಗೀತವನ್ನು ನಿಲ್ಲಿಸಲಾಯಿತು.

ಇದನ್ನೂ ಓದಿ: ಚುನಾವಣೆ ನಮ್ಮ ಹಕ್ಕು ಆದರೆ ಅದಕ್ಕಾಗಿ ಬೇಡುವುದಿಲ್ಲ: ಒಮರ್ ಅಬ್ದುಲ್ಲಾ

ಸಂಗೀತವನ್ನು ನಿಲ್ಲಿಸಿದ ನಂತರ ಅವರು ಮಲಗಿದ್ದರು. ಸೋಮವಾರ ಬೆಳಗಿನ ಜಾವ 3.30ರ ಸುಮಾರಿಗೆ ತಮ್ಮ ಕಾರು ಹೊತ್ತಿ ಉರಿಯುತ್ತಿರುವುದನ್ನು ನೋಡಿದ್ದಾರೆ. ಬೆಂಕಿ ನಂದಿಸುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್