AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರದ ಸಂಗೀತ ಪ್ಲೇ ಮಾಡಬೇಡಿ ಎಂದ ಸೇನಾಧಿಕಾರಿಯ ಕಾರಿಗೆ ಬೆಂಕಿ, ಲಕ್ನೋದ ಹೋಟೆಲ್​​ಗೆ ಬೀಗಮುದ್ರೆ

ಗೋಮ್ತಿನಗರದಲ್ಲಿರುವ ಮೇಜರ್ ಅಭಿಜಿತ್ ಸಿಂಗ್ ಅವರ ಮನೆಯ ಸಮೀಪ ಈ ಹೋಟೆಲ್ ಇದೆ. ಭಾನುವಾರ ರಾತ್ರಿ ಅವರು ಹೋಟೆಲ್ ಸಿಬ್ಬಂದಿಗೆ ಸಂಗೀತ ನಿಲ್ಲಿಸುವಂತೆ ಕೇಳಿದರು. ಆದರೆ ಅವರು ನಿರಾಕರಿಸಿದರು

ಅಬ್ಬರದ ಸಂಗೀತ ಪ್ಲೇ ಮಾಡಬೇಡಿ ಎಂದ ಸೇನಾಧಿಕಾರಿಯ ಕಾರಿಗೆ ಬೆಂಕಿ, ಲಕ್ನೋದ ಹೋಟೆಲ್​​ಗೆ ಬೀಗಮುದ್ರೆ
ಸೀಲ್ ಮಾಡಿದ ಹೋಟೆಲ್Image Credit source: NDTV
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 10, 2023 | 4:54 PM

Share

ಲಖನೌ: ಉತ್ತರ ಪ್ರದೇಶದ (Uttar Pradesh) ರಾಜಧಾನಿ ಲಕ್ನೋದಲ್ಲಿ (Lucknow) ತಡರಾತ್ರಿಯಲ್ಲಿ ಜೋರಾಗಿ ಸಂಗೀತ ಪ್ಲೇ ಮಾಡಿದ್ದನ್ನು ವಿರೋಧಿಸಿದ ಸೇನಾ ಮೇಜರ್ ಕಾರಿಗೆ ಬೆಂಕಿ ಹಚ್ಚಿದ ನಂತರ ಹೋಟೆಲ್​​ನ್ನು ಮಂಗಳವಾರ ಸೀಲ್ ಮಾಡಲಾಗಿದೆ. ಹೋಟೆಲ್ ಮಿಲಾನೊ ಮತ್ತು ಕೆಫೆಯನ್ನು ಅಕ್ರಮವಾಗಿ ನಡೆಸಲಾಗುತ್ತಿದ್ದು, ನಿರ್ವಾಹಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಲಕ್ನೋ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ. ಐದು ಜನರನ್ನು ಬಂಧಿಸಲಾಗಿದೆ ಮತ್ತು ಪೊಲೀಸರು ಪ್ರಮುಖ ಆರೋಪಿ ಹೋಟೆಲ್‌ನ ಮ್ಯಾನೇಜರ್‌ಗಾಗಿ ಹುಡುಕುತ್ತಿದ್ದಾರೆ.

ಗೋಮ್ತಿನಗರದಲ್ಲಿರುವ ಮೇಜರ್ ಅಭಿಜಿತ್ ಸಿಂಗ್ ಅವರ ಮನೆಯ ಸಮೀಪ ಈ ಹೋಟೆಲ್ ಇದೆ. ಭಾನುವಾರ ರಾತ್ರಿ ಅವರು ಹೋಟೆಲ್ ಸಿಬ್ಬಂದಿಗೆ ಸಂಗೀತ ನಿಲ್ಲಿಸುವಂತೆ ಕೇಳಿದರು. ಆದರೆ ಅವರು ನಿರಾಕರಿಸಿದರು, ಇದು ವಾಗ್ವಾದಕ್ಕೆ ಕಾರಣವಾಯಿತು. ಪೊಲೀಸರ ಮಧ್ಯಪ್ರವೇಶದ ನಂತರ ಸಂಗೀತವನ್ನು ನಿಲ್ಲಿಸಲಾಯಿತು.

ಇದನ್ನೂ ಓದಿ: ಚುನಾವಣೆ ನಮ್ಮ ಹಕ್ಕು ಆದರೆ ಅದಕ್ಕಾಗಿ ಬೇಡುವುದಿಲ್ಲ: ಒಮರ್ ಅಬ್ದುಲ್ಲಾ

ಸಂಗೀತವನ್ನು ನಿಲ್ಲಿಸಿದ ನಂತರ ಅವರು ಮಲಗಿದ್ದರು. ಸೋಮವಾರ ಬೆಳಗಿನ ಜಾವ 3.30ರ ಸುಮಾರಿಗೆ ತಮ್ಮ ಕಾರು ಹೊತ್ತಿ ಉರಿಯುತ್ತಿರುವುದನ್ನು ನೋಡಿದ್ದಾರೆ. ಬೆಂಕಿ ನಂದಿಸುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ