AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್​​ ಗಾಂಧಿ, ಪ್ರಜ್ವಲ್​​​​ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಪ್ರಜ್ವಲ್​​​ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​​ ನಾಯಕ ರಾಹುಲ್​​​ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡಬೇಕು ಎಂದು ಹೇಳಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್​​ ಗಾಂಧಿ, ಪ್ರಜ್ವಲ್​​​​ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ
Digi Tech Desk
| Edited By: |

Updated on:May 04, 2024 | 12:32 PM

Share

ದೆಹಲಿ, ಮೇ.4: ಪ್ರಜ್ವಲ್​​ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ (Rahul Gandhi) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಪತ್ರ ಬರೆದಿದ್ದಾರೆ. ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಈ ಪ್ರಕರಣದದಲ್ಲಿ ಯಾರೇ ಆರೋಪಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್​​ ಗಾಂಧಿ ಅವರು ಈ ಪತ್ರದಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್​​ ಶಾ ಅವರ ಬಗ್ಗೆಯೂ ಕಿಡಿಕಾರಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಅಮಿತ್​​ ಶಾ ಅವರಿಗೆ ದೇವರಾಜೇಗೌಡ ಮಾಹಿತಿ ನೀಡಿದ್ದರು, ಅವರಿಗೆ ಟಿಕೆಟ್​​​ ನೀಡಿರುವುದು ಆಘಾತದ ವಿಷಯವಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ ಅವರ ಪರವಾಗಿ ಪ್ರಚಾರ ಮಾಡಿದ್ದು ಮತ್ತೊಂದು ಶಾಕ್ ನನಗೆ ಎಂದು ಹೇಳಿದ್ದಾರೆ.

ಪ್ರಜ್ವಲ್​​​ಗೆ ಭಾರತದಿಂದ ಪರಾರಿಯಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರು ಹರಿಯಾಣ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಮೌನ ವಹಿಸಿದ್ದಾರೆ. ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿಯ ಬಂಧನ

ಇನ್ನು ಕರ್ನಾಟಕ ರಾಜ್ಯ ಸರ್ಕಾರ ಎಸ್​​​ಐಟಿ ರಚನೆ ಮಾಡಿದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ ಭಾರತಕ್ಕೆ ಕರೆ ತರುವ ಮನವಿ‌ ಮಾಡಲಾಗಿದೆ. ಸಂತ್ರಸ್ತರಿಗೆ ರಕ್ಷಣೆ ನೀಡಬೇಕಾಗಿದೆ ಎಂದು ರಾಹುಲ್​​​ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯ ಮಾಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:17 pm, Sat, 4 May 24

Follow Us
ಪುಟ್ಟ ಮಗಳ ಜೀವ ಉಳಿಸಿ ಪ್ರಾಣಬಿಟ್ಟ ಫುಟ್ಬಾಲ್ ಆಟಗಾರನ ಪತ್ನಿ
ಪುಟ್ಟ ಮಗಳ ಜೀವ ಉಳಿಸಿ ಪ್ರಾಣಬಿಟ್ಟ ಫುಟ್ಬಾಲ್ ಆಟಗಾರನ ಪತ್ನಿ
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ