Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ಒಡಿಶಾ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ-ಕಾಂಗ್ರೆಸ್ ಶಾಸಕರು ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಬಿಜೆಪಿಯ ಹಿರಿಯ ಶಾಸಕರೊಬ್ಬರು ಕಾಂಗ್ರೆಸ್ ಶಾಸಕರ ಕಡೆಗೆ ತೆರಳಿ ಅವರ ಕಾಲರ್ ಹಿಡಿದಿದ್ದಾರೆ ಎಂದು ಆರೋಪಿಸಲಾಗಿದೆ. ವಿರೋಧ ಪಕ್ಷದ ಪ್ರತಿಭಟನೆಗಳ ನಡುವೆ ಸ್ಪೀಕರ್ ಪಾಧಿ ಸುಮಾರು 30 ನಿಮಿಷಗಳ ಕಾಲ ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಿದರು.

ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ
Odisha Assembly
Follow us
ಸುಷ್ಮಾ ಚಕ್ರೆ
|

Updated on: Mar 11, 2025 | 3:29 PM

ಭುವನೇಶ್ವರ (ಮಾರ್ಚ್ 11): ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ಒಡಿಶಾ ವಿಧಾನಸಭೆಯಲ್ಲಿ (Odisha Assembly) ಗೊಂದಲದ ವಾತಾವರಣ ನಿರ್ಮಾಣವಾಯಿತು. ಒಡಿಶಾದ ನಗರಾಭಿವೃದ್ಧಿ ಸಚಿವ ಕೆ.ಸಿ. ಮಹಾಪಾತ್ರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದಾಗ ನಗರಾಭಿವೃದ್ಧಿ ಸಚಿವ ಕೆ.ಸಿ. ಮಹಾಪಾತ್ರ ಅವರ ಮುಂದೆ ನಿಂತಿದ್ದ ಕಾಂಗ್ರೆಸ್ ಶಾಸಕ ತಾರಾಪ್ರಸಾದ್ ಬಹಿನಿಪತಿ ಅವರ ಕಡೆಗೆ ಬಿಜೆಪಿಯ ಹಿರಿಯ ಶಾಸಕ ಜಯನಾರಾಯಣ್ ಮಿಶ್ರಾ ಧಾವಿಸಿದಾಗ ಸದನದಲ್ಲಿ ಉದ್ವಿಗ್ನತೆ ಉಂಟಾಯಿತು.

“ಜಯನಾರಾಯಣ್ ಮಿಶ್ರಾ ನನ್ನ ಶರ್ಟ್ ಕಾಲರ್ ಹಿಡಿದು ನನ್ನನ್ನು ತಳ್ಳಿದರು. ಸದನವು ಆದೇಶದಲ್ಲಿಲ್ಲದಿದ್ದಾಗ ಉತ್ತರ ನೀಡಬಾರದು ಎಂದು ನಾನು ಸಚಿವ ಮಹಾಪಾತ್ರ ಅವರನ್ನು ಕೇಳುತ್ತಿದ್ದೆ. ನಾನು ಅವರ ಮುಂದೆ ಕೈಗಳನ್ನು ಮುಗಿದು ಕೇಳಿದೆ. ಆದರೆ, ಮಿಶ್ರಾ ಇದ್ದಕ್ಕಿದ್ದಂತೆ ನನ್ನ ಬಳಿಗೆ ಬಂದು ನನ್ನ ಕಾಲರ್ ಹಿಡಿದುಕೊಂಡರು” ಎಂದು ಕಾಂಗ್ರೆಸ್ ಶಾಸಕ ತಾರಾಪ್ರಸಾದ್ ಬಹಿನಿಪತಿ ಸದನದ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಒಡಿಶಾ: ಹೆತ್ತವರು, ಸಹೋದರಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈದ ಯುವಕ

ಇದನ್ನೂ ಓದಿ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
Image
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಬಿಜೆಡಿ ಸದಸ್ಯರು ಸಹ ಸದನದ ಬಾವಿಯಲ್ಲಿ ಇಳಿದರು. ಆದರೆ ಹೋರಾಟದಲ್ಲಿ ಭಾಗವಹಿಸಲಿಲ್ಲ. ವಿರೋಧ ಪಕ್ಷದ ಬಿಜೆಡಿ ಮತ್ತು ಕಾಂಗ್ರೆಸ್ ಸದಸ್ಯರು ಪ್ರತ್ಯೇಕ ವಿಷಯಗಳ ಕುರಿತು ಪ್ರತಿಭಟನೆ ನಡೆಸಿದ್ದಾರೆ. ವಿರೋಧ ಪಕ್ಷದ ಪ್ರತಿಭಟನೆಗಳ ನಡುವೆ ಸ್ಪೀಕರ್ ಪಾಧಿ ಸುಮಾರು 30 ನಿಮಿಷಗಳ ಕಾಲ ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಿದರು. ಸ್ಪೀಕರ್ ಸುರಮಾ ಪಾಧಿ ಅವರು ಮಧ್ಯಾಹ್ನದವರೆಗೆ ಕಲಾಪವನ್ನು ಮುಂದೂಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಅಯ್ಯೋ ಕರ್ಮವೇ..ನಿಂತ ಕಾರಿನ ನಾಲ್ಕು ಟೈರ್ ಬಿಚ್ಚಿಕೊಂಡು ಹೋದ ಖದೀಮರು!
ಅಯ್ಯೋ ಕರ್ಮವೇ..ನಿಂತ ಕಾರಿನ ನಾಲ್ಕು ಟೈರ್ ಬಿಚ್ಚಿಕೊಂಡು ಹೋದ ಖದೀಮರು!