AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಸೋರ್ ರೈಲು ಅಪಘಾತ ಪ್ರಕರಣ: 3 ರೈಲ್ವೆ ಅಧಿಕಾರಿಗಳನ್ನು ಬಂಧಿಸಿದ ಸಿಬಿಐ

ಬಂಧಿತ ರೈಲ್ವೆ ನೌಕರರನ್ನು ಅರುಣ್ ಕುಮಾರ್ ಮಹಂತ (ಹಿರಿಯ ಸೆಕ್ಷನ್ ಇಂಜಿನಿಯರ್), ಮೊಹಮ್ಮದ್ ಅಮೀರ್ ಖಾನ್ (ಸೆಕ್ಷನ್ ಇಂಜಿನಿಯರ್) ಮತ್ತು ಪಪ್ಪು ಕುಮಾರ್ (ತಂತ್ರಜ್ಞ) ಎಂದು ಗುರುತಿಸಲಾಗಿದೆ.

ಬಾಲಸೋರ್ ರೈಲು ಅಪಘಾತ ಪ್ರಕರಣ: 3 ರೈಲ್ವೆ ಅಧಿಕಾರಿಗಳನ್ನು ಬಂಧಿಸಿದ ಸಿಬಿಐ
ಬಾಲಸೋರ್ ರೈಲು ಅಪಘಾತ
ರಶ್ಮಿ ಕಲ್ಲಕಟ್ಟ
|

Updated on: Jul 07, 2023 | 8:33 PM

Share

ದೆಹಲಿ: ಜೂನ್ 2 ರಂದು ಒಡಿಶಾದ (Odisha) ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತ ಪ್ರಕರಣಕ್ಕೆ (Balasore train crash) ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಶುಕ್ರವಾರ ಮೂವರು ರೈಲ್ವೆ ಅಧಿಕಾರಿಗಳನ್ನು ಬಂಧಿಸಿದೆ. ಈ ರೈಲ್ವೆ ಅಧಿಕಾರಿಗಳ ಕೃತ್ಯಗಳು ರೈಲು ಅಪಘಾತಕ್ಕೆ ಕಾರಣವಾಯಿತು ಎಂಬ ಆರೋಪದಲ್ಲಿ ಇವರನ್ನು ಬಂಧಿಸಲಾಗಿದ ಎಂದು ಈ ಬಗ್ಗೆ ತಿಳಿದಿರುವವರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಬಂಧಿತ ರೈಲ್ವೆ ನೌಕರರನ್ನು ಅರುಣ್ ಕುಮಾರ್ ಮಹಂತ (ಹಿರಿಯ ಸೆಕ್ಷನ್ ಇಂಜಿನಿಯರ್), ಮೊಹಮ್ಮದ್ ಅಮೀರ್ ಖಾನ್ (ಸೆಕ್ಷನ್ ಇಂಜಿನಿಯರ್) ಮತ್ತು ಪಪ್ಪು ಕುಮಾರ್ (ತಂತ್ರಜ್ಞ) ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 ಮತ್ತು 201 (ಸಾಕ್ಷ್ಯ ನಾಶ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ತಿಂಗಳ ಅವಧಿಯ ತನಿಖೆಯ ನಂತರ ಸಿಬಿಐ ಎರಡು ಕಠಿಣ ಸೆಕ್ಷನ್‌ಗಳನ್ನು ಸೇರಿಸಿದೆ. ಒಡಿಶಾ ಪೊಲೀಸರು ಮೊದಲು ದಾಖಲಿಸಿದ ಪ್ರಕರಣದ ಆಧಾರದ ಮೇಲೆ ಕಳೆದ ತಿಂಗಳು ದಾಖಲಿಸಿದ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್) ಅನ್ವಯಿಸಲಾಗಿಲ್ಲ.

ಇದನ್ನೂ ಓದಿ: ಮೋದಿ ಉಪನಾಮ ಪ್ರಕರಣದಲ್ಲಿ ಸಾವರ್ಕರ್ ವಿಷಯ ಪ್ರಸ್ತಾಪಿಸಿದ ಗುಜರಾತ್ ಹೈಕೋರ್ಟ್; ಕಾಂಗ್ರೆಸ್ ಕಿಡಿ

ಮೂವರು ಆರೋಪಿಗಳು ನಿರ್ವಹಿಸಿದ ನಿಖರವಾದ ಪಾತ್ರವನ್ನು ಸಂಸ್ಥೆ ವಿವರಿಸಿಲ್ಲ ಆದರೆ ಹಿರಿಯ ಅಧಿಕಾರಿಯೊಬ್ಬರು “ಘಟನೆಗೆ ಕಾರಣವಾದ ಅವರ ಕ್ರಮಕ್ಕಾಗಿ” ಮೂವರನ್ನು ಬಂಧಿಸಲಾಯಿತು ಎಂದಿದ್ದಾರೆ. ಒಡಿಶಾದಲ್ಲಿ ಸಂಭವಿಸಿದ ಅಪಘಾತದಲ್ಲಿ  ಕನಿಷ್ಠ 293 ಜನರು ಸಾವಿಗೀಡಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?