AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ದೀಪಾವಳಿಗೆ.. ಒಡಿಶಾದಲ್ಲಿ ಪಟಾಕಿ ಬ್ಯಾನ್​, ಯಾಕೆ?

ಕೊವಿಡ್ ಸಾಂಕ್ರಾಮಿಕ ಪರಿಸ್ಥಿತಿ ಮತ್ತು ಚಳಿಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಟಾಕಿಗಳನ್ನು ಸಿಡಿಸುವುದರಿಂದ ಉಂಟಾಗುವ ಹಾನಿಕಾರಕ ಪರಿಣಾಮಗಳನ್ನು ಪರಿಗಣಿಸಿ, ಒಡಿಶಾ ಸರ್ಕಾರ ಸಾರ್ವಜನಿಕ ಹಿತದೃಷ್ಟಿಯಿಂದ ನವೆಂಬರ್ 10 ರಿಂದ 30 ರವರೆಗೆ ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ. ವಯಸ್ಕರು, ಮಕ್ಕಳು, ಕೊಮೊರ್ಬಿಡಿಟಿ ಹೊಂದಿರುವ ವ್ಯಕ್ತಿಗಳು ಮತ್ತು ಇತರರು ಚಳಿಗಾಲದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಾರೆ ಎಂದು ಗಮನಿಸಲಾಗಿದೆ. ಇದಲ್ಲದೆ, ವಾಯುಮಾಲಿನ್ಯ ಹಾಗೂ ಗಾಳಿಯಲ್ಲಿರುವ ಪಾರ್ಟಿಕ್ಯುಲೇಟ್​ ಮ್ಯಾಟರ್​​ (ಎಸ್‌ಪಿಎಂ) ಉಸಿರಾಟದ ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ ಎಂದು ಹೇಳಲಾಗಿದೆ. ಪಟಾಕಿಗಳನ್ನು ಸುಡುವುದರಿಂದ […]

ಈ ಬಾರಿ ದೀಪಾವಳಿಗೆ.. ಒಡಿಶಾದಲ್ಲಿ ಪಟಾಕಿ ಬ್ಯಾನ್​, ಯಾಕೆ?
ಪೃಥ್ವಿಶಂಕರ
| Edited By: |

Updated on: Nov 04, 2020 | 6:58 PM

Share

ಕೊವಿಡ್ ಸಾಂಕ್ರಾಮಿಕ ಪರಿಸ್ಥಿತಿ ಮತ್ತು ಚಳಿಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಟಾಕಿಗಳನ್ನು ಸಿಡಿಸುವುದರಿಂದ ಉಂಟಾಗುವ ಹಾನಿಕಾರಕ ಪರಿಣಾಮಗಳನ್ನು ಪರಿಗಣಿಸಿ, ಒಡಿಶಾ ಸರ್ಕಾರ ಸಾರ್ವಜನಿಕ ಹಿತದೃಷ್ಟಿಯಿಂದ ನವೆಂಬರ್ 10 ರಿಂದ 30 ರವರೆಗೆ ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ.

ವಯಸ್ಕರು, ಮಕ್ಕಳು, ಕೊಮೊರ್ಬಿಡಿಟಿ ಹೊಂದಿರುವ ವ್ಯಕ್ತಿಗಳು ಮತ್ತು ಇತರರು ಚಳಿಗಾಲದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಾರೆ ಎಂದು ಗಮನಿಸಲಾಗಿದೆ. ಇದಲ್ಲದೆ, ವಾಯುಮಾಲಿನ್ಯ ಹಾಗೂ ಗಾಳಿಯಲ್ಲಿರುವ ಪಾರ್ಟಿಕ್ಯುಲೇಟ್​ ಮ್ಯಾಟರ್​​ (ಎಸ್‌ಪಿಎಂ) ಉಸಿರಾಟದ ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ ಎಂದು ಹೇಳಲಾಗಿದೆ.

ಪಟಾಕಿಗಳನ್ನು ಸುಡುವುದರಿಂದ ಉಸಿರಾಟದ ಮೇಲೆ ತೀವ್ರ ಪರಿಣಾಮ ಬೀರುವ ನೈಟ್ರಸ್ ಆಕ್ಸೈಡ್, ಸಲ್ಫರ್ ಡೈಆಕ್ಸೈಡ್, ಕಾರ್ಬನ್ ಮಾನಾಕ್ಸೈಡ್ ಮುಂತಾದ ಹಾನಿಕಾರಕ ಅನಿಲಗಳು ಬಿಡುಗಡೆಯಾಗುತ್ತವೆ. ಅಂತಹ ಮಾಲಿನ್ಯಕಾರಕಗಳು ಸೋಂಕಿತರ ಆರೋಗ್ಯಸ್ಥಿತಿಯನ್ನು ಮತ್ತಷ್ಟು ಹದಗೆಡಿಸುತ್ತದೆ.

ಹಾಗಾಗಿ, ಸಾರ್ವಜನಿಕ ಹಿತಾಸಕ್ತಿಯಿಂದ ಮೇಲೆ ತಿಳಿಸಿದ ಅವಧಿಯಲ್ಲಿ ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ ಎಂದು ಒಡಿಶಾ ಸರ್ಕಾರ ತಿಳಿಸಿದೆ. ದೀಪಾವಳಿ ದೀಪಗಳ ಹಬ್ಬ. ಸಾಂಪ್ರದಾಯಿಕ ರೀತಿಯಲ್ಲಿ ಮಣ್ಣಿನ ದೀಪಗಳು, ಮೇಣದ ಬತ್ತಿ ಮತ್ತು ಇತರೆ ಸಾಂಪ್ರದಾಯಿಕ ಬೆಳಕಿನ ವಸ್ತುಗಳನ್ನು ಬೆಳಗಿಸುವ ಮೂಲಕ ಆಚರಿಸಬಹುದು ಎಂದು ಸಹ ತಿಳಿಸಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ