AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದ ನವವಧು ಕಿಡ್ನಾಪ್​ ಪ್ರಕರಣಕ್ಕೆ ಹೊಸ ತಿರುವು; ಪ್ರಿಯಕರನ ಜೊತೆ ಸೇರಿ ಮಾಡಿದ ಪ್ಲಾನ್ ಅಂತಿಂಥದ್ದಲ್ಲ!

ಇಂದು ಒಡಿಶಾದಲ್ಲಿ ವಿಚಿತ್ರ ಘಟನೆಯೊಂದು ನಡೆದಿತ್ತು. ಮದುವೆಯಾಗಿ ಗಂಡನ ಮನೆಗೆ ಹೋಗುತ್ತಿದ್ದ ನವವಧು ಇದ್ದ ಕಾರಿಗೆ ಅಡ್ಡಹಾಕಿದ್ದ ಅಪರಿಚಿತರು ಆಕೆಯನ್ನು ಅಪಹರಣ ಮಾಡಿದ್ದರು. ಈ ಬಗ್ಗೆ ಪೊಲೀಸ್ ಕೇಸ್ ಕೂಡ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮದುವೆಯಾದ ಒಂದೆರಡು ಗಂಟೆಗಳಲ್ಲೇ ಕಿಡ್ನಾಪ್ ಆಗಿದ್ದ ಆ ಮದುಮಗಳದ್ದೇ ಈ ಪ್ಲಾನ್ ಎಂಬುದು ಪೊಲೀಸ್ ತನಿಖೆ ವೇಳೆ ಗೊತ್ತಾಗಿದೆ. ನಿಜಕ್ಕೂ ಇಂದು ಆಗಿದ್ದೇನು? ಎಂಬುದರ ಮಾಹಿತಿ ಇಲ್ಲಿದೆ.

ಒಡಿಶಾದ ನವವಧು ಕಿಡ್ನಾಪ್​ ಪ್ರಕರಣಕ್ಕೆ ಹೊಸ ತಿರುವು; ಪ್ರಿಯಕರನ ಜೊತೆ ಸೇರಿ ಮಾಡಿದ ಪ್ಲಾನ್ ಅಂತಿಂಥದ್ದಲ್ಲ!
Odisha Kidnap Case
ಸುಷ್ಮಾ ಚಕ್ರೆ
|

Updated on: Feb 23, 2026 | 10:58 PM

Share

ಭುವನೇಶ್ವರ, ಫೆಬ್ರವರಿ 23: ಒಡಿಶಾದ ಸುವರ್ಣಪುರ ಜಿಲ್ಲೆಯಲ್ಲಿ ಇಂದು ಮದುಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಕಾರಿಗೆ ಅಡ್ಡಹಾಕಿದ ಅಪರಿಚಿತರು ನವವಧುವನ್ನು ಕಿಡ್ನಾಪ್ (Kidnap) ಮಾಡಿದ್ದು ಪೊಲೀಸರಿಗೆ ತಲೆನೋವಿನ ಕೇಸಾಗಿತ್ತು. ಇದೀಗ ತನಿಖೆಯ ಬಳಿಕ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದು, ನವವಿವಾಹಿತ ವಧು ತನ್ನ ಪ್ರಿಯಕರನೊಂದಿಗೆ ಸೇರಿ ತನ್ನನ್ನು ತಾನೇ ‘ಅಪಹರಣ’ ಮಾಡುವ ನಾಟಕವನ್ನು ಆಡಿದ್ದಾಳೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಬೋಲಂಗೀರ್ ಜಿಲ್ಲೆಯ ಹರಿಬಂಧು ಪಟೇಲ್ ಅಲಿಯಾಸ್ ರಿಂಕು ಎಂಬ ಯುವಕನು ಬೌಧ್ ಜಿಲ್ಲೆಯ ರಶ್ಮಿ ಎಂಬ ಯುವತಿಯನ್ನು ಮದುವೆಯಾಗಿದ್ದನು. ಅವರ ದಿಬ್ಬಣದ ಕಾರು ಹುಡುಗನ ಮನೆಯತ್ತ ಹೋಗುವಾಗ ಆಕೆಯನ್ನು ಕಿಡ್ನಾಪ್ ಮಾಡಲಾಗಿತ್ತು. ಮದುವೆಯ ನಂತರ ದಂಪತಿಗಳು ಕಾರಿನಲ್ಲಿ ವರನ ಮನೆಗೆ ಹಿಂತಿರುಗುತ್ತಿದ್ದಾಗ, ತರ್ಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅವರ ಕಾರನ್ನು ಮತ್ತೊಂದು ಬಿಳಿ ಕಾರು ಅಡ್ಡಗಟ್ಟಿತ್ತು. ಬಳಿಕ ಆ ವಧುವನ್ನು ಕಿಡ್ನಾಪ್ ಮಾಡಲಾಗಿತ್ತು.

ಇದನ್ನೂ ಓದಿ: ಮಾಜಿ ಪ್ರಿಯಕರನ ಪತ್ನಿಗೆ ಎಚ್‌ಐವಿ ಸೋಂಕಿತ ಇಂಜೆಕ್ಷನ್ ಚುಚ್ಚಿದ ಮಹಿಳೆ, ಕಾರಣ ಕೇಳಿದ್ರೆ ಶಾಕ್​​ ಆಗ್ತೀರಾ!

ತನ್ನ ಹೆಂಡತಿಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ವರ ಹರಿಬಂಧು ಪಟೇಲ್ ನೀಡಿದ ದೂರಿನ ಪ್ರಕಾರ, ಗನ್ ಹಿಡಿದುಕೊಂಡಿದ್ದ ವಧುವಿನ ಮಾಜಿ ಪ್ರಿಯಕರ ಮತ್ತು ಆತನ ಸಹಚರರು ಬಲವಂತವಾಗಿ ಆಕೆಯನ್ನು ಕಾರಿನೊಳಗೆ ಹಾಕಿಕೊಂಡು ಹೋಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಪೊಲೀಸರು ತನಿಖೆ ನಡೆಸಿದಾಗ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ತಾಂತ್ರಿಕ ತನಿಖೆ ಮತ್ತು ವಿಚಾರಣೆಯ ಸಂದರ್ಭದಲ್ಲಿ, ಈ ಸಂಪೂರ್ಣ ಅಪಹರಣದ ಪ್ಲಾನ್ ಅನ್ನು ವಧು ರಶ್ಮಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ರೂಪಿಸಿದ್ದಳು ಎಂಬುದು ಬಯಲಾಗಿದೆ.

ಇದನ್ನೂ ಓದಿ: 6 ವರ್ಷದಿಂದ ಒಂದೇ ರೂಮಿನಲ್ಲಿದ್ದು ಈಗ ನಾನು ಬೇಡ ಅಂತಿದ್ದಾಳೆ: ನ್ಯಾಯಕ್ಕಾಗಿ ಪಟ್ಟು ಹಿಡಿದ ಪ್ರಿಯಕರ

ವಧು ಸ್ವಇಚ್ಛೆಯಿಂದಲೇ ತನ್ನ ಪ್ರಿಯಕರನೊಂದಿಗೆ ಹೋಗಿದ್ದಾಳೆ, ಅಲ್ಲಿ ಯಾವುದೇ ಅಪಹರಣ ನಡೆದಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮದುವೆಯಾದ ಕೆಲವೇ ಗಂಟೆಗಳ ನಂತರ, ವಧು ತನ್ನ ಪ್ರಿಯಕರನಿಗೆ ಕರೆ ಮಾಡಿ ಈ ಸಿನಿಮೀಯ ಅಪಹರಣವನ್ನು ಪ್ಲಾನ್ ಮಾಡಿದ್ದಳು. ಪೊಲೀಸ್ ತನಿಖೆಯ ವೇಳೆ ಈ ಅಪಹರಣವು ವಧು ರಶ್ಮಿ ಅವರೇ ತನ್ನ ಪ್ರಿಯಕರನೊಂದಿಗೆ ಸೇರಿ ನಡೆಸಿದ ಹೈಡ್ರಾಮಾ ಎಂಬುದು ಬೆಳಕಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?