AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Bus Accident: ಆಯತಪ್ಪಿ ಸೇತುವೆಯಿಂದ ಕೆಳಗೆ ಹಾರಿದ ಬಸ್​, ಇಬ್ಬರು ಸಾವು, ಹಲವರಿಗೆ ಗಾಯ

ಒಡಿಶಾದಲ್ಲಿ ಪ್ರವಾಸಕ್ಕೆ ಹೊರಟಿದ್ದ ಬಸ್ ಆಯತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ದೆಂಕನಲ್​ನಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮೃತಪಟ್ಟು 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

Odisha Bus Accident: ಆಯತಪ್ಪಿ ಸೇತುವೆಯಿಂದ ಕೆಳಗೆ ಹಾರಿದ ಬಸ್​, ಇಬ್ಬರು ಸಾವು, ಹಲವರಿಗೆ ಗಾಯ
ಶಾಲಾ ಬಸ್, ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jan 23, 2023 | 7:43 PM

Share

ಧೆಂಕನಲ್: ಒಡಿಶಾದ (Odisha) ಧೆಂಕನಲ್ ಜಿಲ್ಲೆಯ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಂಚುಬಾಟಿ ಬಳಿ ಸೋಮವಾರ ನಸುಕಿನಲ್ಲಿ ಪ್ರವಾಸಿ ಬಸ್ಸೊಂದು ಸೇತುವೆಯಿಂದ ಕೆಳಗೆ ಬಿದ್ದಿದ್ದು ಈ. ಅಪಘಾತದಲ್ಲಿ (Accident) ಇಬ್ಬರು ಸಾವಿಗೀಡಾಗಿದ್ದಾರೆ. ಏತನ್ಮಧ್ಯೆ, 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಪ್ರಾಥಮಿಕ ವರದಿಗಳ ಪ್ರಕಾರ ನೀಲಮಾಧಬ್ ಎಂಬ ಹೆಸರಿನ ಟೂರಿಸ್ಟ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ರೈಲಿಂಗ್‌ಗೆ ಡಿಕ್ಕಿ ಹೊಡೆದ ನಂತರ ಕೆಳಗೆ ಬಿದ್ದಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ.. ಮೃತರನ್ನು ರೇಣುಬಾಲಾ ಜೆನಾ ಮತ್ತು ಬಿಜಯಲಕ್ಷ್ಮಿ ಸ್ವೈನ್ ಎಂದು ಗುರುತಿಸಲಾಗಿದೆ. ಅವರು ಕೇಂದ್ರಪಾರ ಜಿಲ್ಲೆಯ ಇಚ್ಚಾಪುರ ಗ್ರಾಮದ ನಿವಾಸಿಗಳಾಗಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದರು.. ಸ್ಥಳೀಯ ಗ್ರಾಮಸ್ಥರು ಸಹ ರಕ್ಷಣಾ ಕಾರ್ಯಾಚರಣೆಯಲ್ಲಿ ಪೊಲೀಸರಿಗೆ ಸಹಾಯ ಮಾಡಿದರು. ಗಾಯಗೊಂಡವರನ್ನು ಧೆಂಕನಲ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: KL Rahul Athiya Shetty Wedding: ಖಂಡಾಲಾದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಕೆಎಲ್ ರಾಹುಲ್- ಅಥಿಯಾ ಶೆಟ್ಟಿ!

ಗಾಯಗೊಂಡಿರುವ 15 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ.. ಅಪಘಾತ ಸಂಭವಿಸಿದಾಗ ವಾಹನದಲ್ಲಿ ಒಟ್ಟು 43 ಮಂದಿ ಪ್ರಯಾಣಿಸುತ್ತಿದ್ದರು. ಇಚ್ಚಾಪುರ ಗ್ರಾಮದಿಂದ ಬೋಲಂಗೀರ್ ಮತ್ತು ಸಂಬಲ್‌ಪುರಕ್ಕೆ ಇವರು ಪಿಕ್ನಿಕ್ ತೆರಳಿದ್ದರು. ಬಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು ಅಪಘಾತದ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:44 am, Mon, 23 January 23

Follow Us
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ