AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೇಂದ್ರ ಸರ್ಕಾರವೇ ಕೊವಿಡ್​ 19 ಲಸಿಕೆ ಖರೀದಿಸಿ ಪೂರೈಕೆ ಮಾಡಲಿ..’-ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಒಡಿಶಾ ಸಿಎಂ

ನವೀನ್ ಪಟ್ನಾಯಕ್​ ಪತ್ರ ನನಗೆ ಸಿಕ್ಕಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಹೇಳಿದ್ದಾರೆ. ಅವರಷ್ಟೇ ಅಲ್ಲ, ಈ ವಿಚಾರವಾಗಿ ದೆಹಲಿ ಮತ್ತು ಕೇರಳದ ಮುಖ್ಯಮಂತ್ರಿಗಳೂ ನನ್ನನ್ನು ಸಂಪರ್ಕಿಸಿದ್ದಾರೆ ಎಂದು ತಿಳಿಸಿದ್ದಾರೆ.

‘ಕೇಂದ್ರ ಸರ್ಕಾರವೇ ಕೊವಿಡ್​ 19 ಲಸಿಕೆ ಖರೀದಿಸಿ ಪೂರೈಕೆ ಮಾಡಲಿ..’-ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಒಡಿಶಾ ಸಿಎಂ
ಮುಖ್ಯಮಂತ್ರಿ ನವೀನ್​ ಪಟ್ನಾಯಕ್​
TV9 Web
| Edited By: |

Updated on: Jun 03, 2021 | 4:15 PM

Share

ಕೇಂದ್ರ ಸರ್ಕಾರ ಎಲ್ಲ ಸಾರ್ವಜನಿಕರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡಬೇಕು ಎಂಬ ಆಗ್ರಹಪೂರ್ವಕ ನಿರ್ಣಯನ್ನು ನಿನ್ನೆ ಕೇರಳ ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ. ಅದರ ಬೆನ್ನೆಲ್ಲೇ ಹೆಚ್ಚೆಚ್ಚು ರಾಜ್ಯಗಳಿಂದ ಈ ಬೇಡಿಕೆ ಕೇಳಿಬರುತ್ತಿದೆ. ಲಸಿಕೆಯ ತೀವ್ರ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್​ ನಿನ್ನೆ ವಿಧಾನಸಭೆಯಲ್ಲಿ ಈ ನಿರ್ಣಯವನ್ನು ಮಂಡಿಸಿದ್ದರು. ಅದಾದ ಬಳಿಕ ಸರ್ವಾನುಮತದಿಂದ ಅದನ್ನು ಅಂಗೀಕರಿಸಲಾಗಿದೆ.

ಕೊರೊನಾ ಸಾಂಕ್ರಾಮಿಕವನ್ನು ತಡೆಗಟ್ಟಲು ಇರುವ ಸೂಕ್ತ ಕ್ರಮವೆಂದರೆ ಕೇಂದ್ರ ಸರ್ಕಾರ ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡುವುದಾಗಿದೆ. ಆದರೆ ಕೇಂದ್ರ ಅದನ್ನು ಬಿಟ್ಟು, ರಾಜ್ಯಗಳು ಲಸಿಕೆ ಖರೀದಿಸಿ ಜನರಿಗೆ ಕೊಡಬೇಕು ಎಂದು ಹೇಳುತ್ತಿದೆ. ಇದು ನಿಜಕ್ಕೂ ಆಕ್ಷೇಪಣೀಯ ವಿಚಾರ ಎಂದು ವೀಣಾ ಹೇಳಿದ್ದಾರೆ. ಇನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಅವರು ಮಂಗಳವಾರ 11 ಬಿಜೆಪಿಯೇತರ ಅಧಿಕಾರ ಇರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಉಚಿತವಾಗಿ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಎಂದು ಹೇಳಿದ್ದಾರೆ.

ಹಾಗೇ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್​ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಇದೇ ವಿಚಾರವನ್ನು ಹೇಳಿದ್ದಾರೆ. ಕೇಂದ್ರ ಸರ್ಕಾರ ಲಸೀಕೆ ಖರೀದಿಯನ್ನು ಕೇಂದ್ರೀಕೃತಗೊಳಿಸಬೇಕು. ಹಲವು ರಾಜ್ಯಸರ್ಕಾರಗಳು ಜಾಗತಿಕ ಟೆಂಡರ್ ಕರೆದಿದ್ದಾರೆ. ಆದರೆ ಜಾಗತಿಕ ಕಂಪನಿಗಳು ಕೇಂದ್ರ ಸರ್ಕಾರದ ಅನುಮತಿ ಮತ್ತು ಭರವಸೆಗಾಗಿ ಕಾಯುತ್ತವೆ. ರಾಜ್ಯಸರ್ಕಾರಗಳೊಂದಿಗೆ ಲಸಿಕೆ ಒಪ್ಪಂದಕ್ಕೆ ಬರುತ್ತಿಲ್ಲ. ಹೀಗಾಗಿ ಲಸಿಕೆ ಖರೀದಿ ವಿಚಾರದಲ್ಲಿ ಕೇಂದ್ರವೇ ಮುಂದಾಗಬೇಕು. ಈ ಬಗ್ಗೆ ಎಲ್ಲ ರಾಜ್ಯಸರ್ಕಾರಗಳೂ ಸೇರಿ ಕೇಂದ್ರಕ್ಕೆ ಮನದಟ್ಟು ಮಾಡಿಕೊಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನವೀನ್ ಪಟ್ನಾಯಕ್​ ಪತ್ರ ನನಗೆ ಸಿಕ್ಕಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಹೇಳಿದ್ದಾರೆ. ಅವರಷ್ಟೇ ಅಲ್ಲ, ಈ ವಿಚಾರವಾಗಿ ದೆಹಲಿ ಮತ್ತು ಕೇರಳದ ಮುಖ್ಯಮಂತ್ರಿಗಳೂ ನನ್ನನ್ನು ಸಂಪರ್ಕಿಸಿದ್ದಾರೆ. ಕೇಂದ್ರ ಸರ್ಕಾರವೇ ಲಸಿಕೆ ಖರೀದಿಸಿ, ಪೂರೈಸಬೇಕು ಎಂಬುದೇ ನಮ್ಮೆಲ್ಲರ ಆಗ್ರಹ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಹಾಗೇ, ಬಿಜೆಪಿ ಸರ್ಕಾರದ ವಿರುದ್ಧ ತೀರ ಅಸಮಾಧಾನವನ್ನೂ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಉಚಿತವಾಗಿ ಕೊರೊನಾ ಲಸಿಕೆ ಪೂರೈಸಲಿ; ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!