AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಿಚಿತ ವಾಹನ ಹತ್ತಲೇಬೇಡಿ, ಕಾರಿನೊಳಗೆ 9ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ

ನೀನು ಎಲ್ಲಿಗೆ ಹೋಗ್ಬೇಕು, ಅಲ್ಲಿಗೆ ಬಿಡ್ತೀನಿ ಬಾ ಎಂದು 9ನೇ ತರಗತಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು, ಕಾರೊಳಗೆ ಆಕೆ ಮೇಲಕೆ ಅತ್ಯಾಚಾರವೆಸಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಶುಕ್ರವಾರ ಸಂಜೆ ಬಾಲಕಿ ತನ್ನ ಅಕ್ಕನ ಮನೆಗೆ ಹೋಗಿ ನಂತರ ಗಣೇಶ ಪೂಜೆಯ ವಿಸರ್ಜನಾ ಮೆರವಣಿಗೆಯನ್ನು ವೀಕ್ಷಿಸಲು ದರಿಂಗ್‌ಬಾಡಿ ಮಾರುಕಟ್ಟೆಗೆ ಹೋಗಿ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ.

ಅಪರಿಚಿತ ವಾಹನ ಹತ್ತಲೇಬೇಡಿ, ಕಾರಿನೊಳಗೆ 9ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ
ಕ್ರೈಂ
ನಯನಾ ರಾಜೀವ್
|

Updated on: Sep 08, 2025 | 10:01 AM

Share

ಒಡಿಶಾ, ಸೆಪ್ಟೆಂಬರ್ 08: ನೀನು ಎಲ್ಲಿಗೆ ಹೋಗ್ಬೇಕು, ಅಲ್ಲಿಗೆ ಬಿಡ್ತೀನಿ ಬಾ ಎಂದು 9ನೇ ತರಗತಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು, ಕಾರೊಳಗೆ ಆಕೆ ಮೇಲಕೆ ಅತ್ಯಾಚಾರವೆಸಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಶುಕ್ರವಾರ ಸಂಜೆ ಬಾಲಕಿ ತನ್ನ ಅಕ್ಕನ ಮನೆಗೆ ಹೋಗಿ ನಂತರ ಗಣೇಶ ಪೂಜೆಯ ವಿಸರ್ಜನಾ ಮೆರವಣಿಗೆಯನ್ನು ವೀಕ್ಷಿಸಲು ದರಿಂಗ್‌ಬಾಡಿ ಮಾರುಕಟ್ಟೆಗೆ ಹೋಗಿ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ.

ಆಕೆ ಮನೆಗೆ ವಾಪಸ್ ಹೊರಟಿದ್ದಳು, ಅಪರಿಚಿತ ವಾಹನವೊಂದು ಬಂದು ಪಕ್ಕಕ್ಕೆ ನಿಂತಿತು, ಅದರಲ್ಲಿದ್ದ ವ್ಯಕ್ತಿ ನೀನು ಎಲ್ಲಿಗೆ ಹೋಗಬೇಕು, ಅಲ್ಲಿಗೆ ಬಿಡ್ತೀನಿ ಬಾ ಎಂದು ಕರೆದೊಯ್ದು, ಅತ್ಯಾಚಾರವೆಸಗಿದ್ದಾನೆ ಎಂದು ದರಿಂಗ್‌ಬಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಉಲ್ಲೇಖಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ತನಿಖೆ ಆರಂಭಿಸಿದ್ದಾರೆ.

ಆರೋಪಿ ವಿವಾಹಿತನಾಗಿದ್ದು, ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಕಂಧಮಲ್ ಎಸ್ಪಿ ಹರೀಶ ಬಿ.ಸಿ. ಈ ವಿಷಯ ತನಿಖೆ ಹಂತದಲ್ಲಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವ ಎಂದು ಹೇಳಿದರು.

ಮತ್ತಷ್ಟು ಓದಿ:  ಆರೋಪಿ ಮನೆಗೆ ಅತ್ಯಾಚಾರ ಸಂತ್ರಸ್ತೆಯ ಕಳುಹಿಸಿದ ಅಧಿಕಾರಿಗಳು, ಮತ್ತೆ ಆಕೆಯ ಮೇಲೆ ಅತ್ಯಾಚಾರ

ಹೀಗೆ ಯಾವ ಹೆಣ್ಣುಮಕ್ಕಳು ಕೂಡ ಅಪರಿಚಿತ ವಾಹನ ಹತ್ತುವ ಮುನ್ನ ತುಂಬಾ ಎಚ್ಚರಿಕೆಯಿಂದಿರಬೇಕು, ಯಾರೋ ಲಿಫ್ಟ್ಕೊಡುತ್ತೇನೆ ಎಂದು ಹೇಳಿದರೆ ಒಪ್ಪಿ ಹತ್ತಬಾರದು.

ಹುಟ್ಟುಹಬ್ಬದ ದಿನವೇ ಯುವತಿ ಮೇಲೆ ಅತ್ಯಾಚಾರ

ಹುಟ್ಟುಹಬ್ಬದಂದೇ 20 ವರ್ಷದ ಯುವತಿ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಅಪರಾಧದ ನಂತರ ನಾಪತ್ತೆಯಾಗಿದ್ದ ಇಬ್ಬರು ಆರೋಪಿಗಳನ್ನು ಚಂದನ್ ಮಲಿಕ್ ಮತ್ತು ದೀಪ್ ಎಂದು ಗುರುತಿಸಲಾಗಿದೆ. ದೀಪ್ ಸರ್ಕಾರಿ ಉದ್ಯೋಗಿ ಎಂದು ವರದಿಯಾಗಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಯುವತಿಗೆ ಚಂದನ್​​ ಜತೆ ಸ್ನೇಹವಿತ್ತು. ಹುಟ್ಟು ಹಬ್ಬದ ಪಾರ್ಟಿ ಮಾಡುವ ನೆಪದಲ್ಲಿ ಚಂದನ್ ದೀಪ್ ಮನೆಗೆ ಆಕೆಯನ್ನು ಕರೆದೊಯ್ದಿದ್ದ. ಅಲ್ಲಿ ಅವರು ಊಟ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ