AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಪತ್ತೆ, 10 ವಿದ್ಯಾರ್ಥಿಗಳು ಅಸ್ವಸ್ಥ

ಒಡಿಶಾದ ಭದ್ರಕ್ ಜಿಲ್ಲೆಯ ಎಖಾ ಪ್ರಾಥಮಿಕ ಶಾಲೆಯಲ್ಲಿ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸತ್ತ ಹಲ್ಲಿಯಿಂದ ಕಲುಷಿತಗೊಂಡ ಮಧ್ಯಾಹ್ನದ ಊಟವನ್ನು ಸೇವಿಸಿ ಅಸ್ವಸ್ಥರಾಗಿದ್ದಾರೆ.

ಒಡಿಶಾ: ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಪತ್ತೆ, 10 ವಿದ್ಯಾರ್ಥಿಗಳು ಅಸ್ವಸ್ಥ
ಒಡಿಶಾ ಶಾಲೆImage Credit source: India Today
ನಯನಾ ರಾಜೀವ್
|

Updated on: Mar 10, 2024 | 9:34 AM

Share

ಒಡಿಶಾದ ಭದ್ರಕ್ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿದ ನಂತರ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಶನಿವಾರ ಬೆಳಗ್ಗೆ ಎಖಾ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ಸೇವಿಸಿದ ಬಳಿಕ ವಾಂತಿ, ಅಸ್ವಸ್ಥತೆ ಕಾಣಿಸಿಕೊಂಡಿದೆ. ಅಧಿಕಾರಿಗಳು ತಕ್ಷಣ ಆಹಾರದಲ್ಲಿ ಸತ್ತ ಹಲ್ಲಿಯನ್ನು ಕಂಡಿದ್ದಾರೆ, ತಕ್ಷಣ ಊಟದ ಸೇವೆಯನ್ನು ಸ್ಥಗಿತಗೊಳಿಸಿದರು.

ಆದರೆ, ಈ 10 ವಿದ್ಯಾರ್ಥಿಗಳು ಈಗಾಗಲೇ ಕಲುಷಿತ ಆಹಾರವನ್ನು ಸೇವಿಸಿದ್ದಾರೆ, ಅದನ್ನು ಶಾಲೆಯ ಕೇಂದ್ರ ಅಡುಗೆ ವ್ಯವಸ್ಥೆಯಿಂದ ತಯಾರಿಸಿ ವಿತರಿಸಲಾಗಿತ್ತು. ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ವೈದ್ಯಕೀಯ ಸೇವೆ ಒದಗಿಸಲಾಗಿದೆ. ಘಟನೆಯ ನಂತರ ರಾಜ್ಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಶಾಲೆಗೆ ಆಗಮಿಸಿ ಆವರಣವನ್ನು ಪರಿಶೀಲಿಸಿದರು.

ಮಧ್ಯಾಹ್ನದ ಊಟದಲ್ಲಿ ಹಲ್ಲಿ ಪತ್ತೆಯಾದ ಬಗ್ಗೆ ಮಾಹಿತಿ ಪಡೆದ ನಂತರ, ನಾವು ತಕ್ಷಣ ಶಾಲೆಗೆ ಬಂದೆವು, ಕೆಲವು ದಿನಗಳ ಹಿಂದೆ, ನಮಗೂ ಇದೇ ರೀತಿಯ ಪ್ರಕರಣದ ಬಗ್ಗೆ ಮಾಹಿತಿ ಬಂದಿತ್ತು, ಇದು ಏಕೆ ಸಂಭವಿಸಿತು ಮತ್ತು ಯಾರು ಎಂಬುದರ ಕುರಿತು ಸೋಮವಾರ ವಿಚಾರಣೆ ನಡೆಸಲಾಗುವುದು ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಚಕ್ರಧರ ಮಲ್ಲಿಕ್ ತಿಳಿಸಿದರು.

ಮತ್ತಷ್ಟು ಓದಿ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ಹೊಟ್ಟೆನೋವು, ವಾಂತಿಭೇದಿ: 27ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಮಾರ್ಚ್ 4 ರಂದು ನಡೆದ ಮತ್ತೊಂದು ಘಟನೆಯಲ್ಲಿ, ಅದೇ ಜಿಲ್ಲೆಯ ಇನ್ನೊಂದು ಶಾಲೆಯಲ್ಲಿ ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ