AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಬಿಸಿ ಅತ್ಯಾಚಾರವೆಸಗಿ ಬಿಟ್ಟು ಹೋದ ಪ್ರಿಯಕರ, ಸಹಾಯ ಮಾಡುವುದಾಗಿ ಕರೆದೊಯ್ದು ಅತ್ಯಾಚಾರವೆಸಗಿ ಕೊಂದ ಅಪರಿಚಿತ

ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಕರೆದೊಯ್ದು ಪ್ರಿಯಕರ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಜಗತ್ಸಿಂಗ್​ಪುರದಲ್ಲಿ ನಡೆದಿದೆ. ನಂತರ ಅಪರಿಚಿತ ವ್ಯಕ್ತಿಯೊಬ್ಬ ಸಹಾಯ ಮಾಡುವುದಾಗಿ ಕರೆದೊಯ್ದು ಮತ್ತೆ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಫೆಬ್ರವರಿ 22ರಂದು ಯುವತಿ ಗೆಳೆಯನಿಗಾಗಿ ಮನೆಬಿಟ್ಟು ಬಂದಿದ್ದಳು, ಮದುವೆಯಾಗುವ ಆಸೆ ತೋರಿಸಿ ದೇವಸ್ಥಾನದಲ್ಲಿ ಭೇಟಿಯಾಗೋಣ ಎಂದು ಆಹ್ವಾನಿಸಿದ್ದ, ಅಲ್ಲಿಂದ ಆಕೆ ಗೆಳೆಯನೊಂದಿಗೆ ಓಡಿ ಹೋಗಲು ನಿರ್ಧರಿಸಿದ್ದಳು. ಬದಲಾಗಿ, ಆತ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ, ನಂತರ ಬಸ್ ನಿಲ್ದಾಣದ ಬಳಿ ಬಿಟ್ಟು ಹೋಗಿದ್ದಾನೆಂದು ಆರೋಪಿಸಲಾಗಿದೆ.

ನಂಬಿಸಿ ಅತ್ಯಾಚಾರವೆಸಗಿ ಬಿಟ್ಟು ಹೋದ ಪ್ರಿಯಕರ, ಸಹಾಯ ಮಾಡುವುದಾಗಿ ಕರೆದೊಯ್ದು ಅತ್ಯಾಚಾರವೆಸಗಿ ಕೊಂದ ಅಪರಿಚಿತ
ಕ್ರೈಂImage Credit source: Shutterstock
ನಯನಾ ರಾಜೀವ್
|

Updated on: Mar 01, 2026 | 11:28 AM

Share

ಒಡಿಶಾ, ಮಾರ್ಚ್​ 01: ಮದುವೆ(Marriage)ಯಾಗುವುದಾಗಿ ನಂಬಿಸಿ ಯುವತಿಯನ್ನು ಕರೆದೊಯ್ದು ಪ್ರಿಯಕರ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಜಗತ್ಸಿಂಗ್​ಪುರದಲ್ಲಿ ನಡೆದಿದೆ. ನಂತರ ಅಪರಿಚಿತ ವ್ಯಕ್ತಿಯೊಬ್ಬ ಸಹಾಯ ಮಾಡುವುದಾಗಿ ಕರೆದೊಯ್ದು ಮತ್ತೆ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಫೆಬ್ರವರಿ 22ರಂದು ಯುವತಿ ಗೆಳೆಯನಿಗಾಗಿ ಮನೆಬಿಟ್ಟು ಬಂದಿದ್ದಳು, ಮದುವೆಯಾಗುವ ಆಸೆ ತೋರಿಸಿ ದೇವಸ್ಥಾನದಲ್ಲಿ ಭೇಟಿಯಾಗೋಣ ಎಂದು ಆಹ್ವಾನಿಸಿದ್ದ, ಅಲ್ಲಿಂದ ಆಕೆ ಗೆಳೆಯನೊಂದಿಗೆ ಓಡಿ ಹೋಗಲು ನಿರ್ಧರಿಸಿದ್ದಳು. ಬದಲಾಗಿ, ಆತ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ, ನಂತರ ಬಸ್ ನಿಲ್ದಾಣದ ಬಳಿ ಬಿಟ್ಟು ಹೋಗಿದ್ದಾನೆಂದು ಆರೋಪಿಸಲಾಗಿದೆ.

ಸಂತ್ರಸ್ತೆ ಬಸ್ ನಿಲ್ದಾಣದಲ್ಲಿ ಕುಳಿತಿರುವಾಗ ಬೈಕ್​ನಲ್ಲಿ ಬಂದ ಜಾರ್ಖಂಡ್ ಮೂಲದ ಮತ್ತೊಬ್ಬ ವ್ಯಕ್ತಿ ಆಕೆಯ ಬಳಿಗೆ ಬಂದು ಸಹಾಯ ಮಾಡಲು ಮುಂದಾದ, ಆದರೆ ಆತ ಆಕೆಯನ್ನು ಪಾರದೀಪ್ ಪಟ್ಟಣದಲ್ಲಿರುವ ತನ್ನ ಬಾಡಿಗೆ ಮನೆಯ ಮೇಲ್ಛಾವಣಿಗೆ ಕರೆದೊಯ್ದ, ಅಲ್ಲಿ ಮತ್ತೆ ಅತ್ಯಾಚಾರವೆಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಂಕಿತ್ ಕುಮಾರ್ ವರ್ಮಾ ಪಿಟಿಐಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮದುವೆ ಮಂಟಪಕ್ಕೇ ನುಗ್ಗಿ ಮಾಜಿ ಪ್ರಿಯಕರನಿಗೆ ಶಾಕ್​​ಕೊಟ್ಟ ಯುವತಿ: ಫುಲ್​​ ಹೈಡ್ರಾಮಾ

ನಂತರ ಆರೋಪಿಯು ಆಕೆಯನ್ನು ಕಟ್ಟಡದ ಛಾವಣಿಯಿಂದ ತಳ್ಳಿದ್ದಾನೆ, ಇದರಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ. ಮರುದಿನ ಬೆಳಗ್ಗೆ ಆಕೆಯ ಶವವನ್ನು ವಶಪಡಿಸಿಕೊಳ್ಳಲಾಯಿತು ಎಂದು ಅಧಿಕಾರಿ ಹೇಳಿದರು. ಫೆಬ್ರವರಿ 22 ರ ಸಂಜೆ ಸಂತ್ರಸ್ತೆ ಮನೆಗೆ ಮರಳದ ಕಾರಣ ಆಕೆಯ ಸಹೋದರ ನಾಪತ್ತೆ ದೂರು ದಾಖಲಿಸಿದ್ದರು. ಫೆಬ್ರವರಿ 23 ರಂದು ಮೃತದೇಹ ಪತ್ತೆಯಾಗಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಲಾಗಿತ್ತು.

ತರುವಾಯ, ಫೆಬ್ರವರಿ 25 ರಂದು, ಸಹೋದರನು ತನ್ನ ಸಹೋದರಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಮತ್ತೊಂದು ದೂರು ದಾಖಲಿಸಿದನು, ನಂತರ ವಿವರವಾದ ತನಿಖೆಯನ್ನು ಪ್ರಾರಂಭಿಸಲಾಯಿತು.

ಇಬ್ಬರೂ ಆರೋಪಿಗಳನ್ನು ಬಂಧಿಸಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ವಿವಿಧ ನಿಬಂಧನೆಗಳ ಅಡಿಯಲ್ಲಿ ಅಪಹರಣ, ಅತ್ಯಾಚಾರ ಮತ್ತು ಕೊಲೆ ಆರೋಪಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಜು ಜನತಾದಳ (ಬಿಜೆಡಿ) ಅಧ್ಯಕ್ಷ ಮತ್ತು ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಘಟನೆಯನ್ನು ಖಂಡಿಸಿ, ಸಂತ್ರಸ್ತೆಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು ಮತ್ತು ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಮಹಿಳಾ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯ ಕುರಿತು ಸರ್ಕಾರ ದೀರ್ಘ ಭಾಷಣಗಳನ್ನು ನೀಡುತ್ತಿದ್ದರೂ, ಮೂಲ ವಾಸ್ತವವು ಅತ್ಯಂತ ಆತಂಕಕಾರಿಯಾಗಿದೆ. ಹಗಲು ಹೊತ್ತಿನಲ್ಲಿಯೂ ಭಯದ ವಾತಾವರಣವಿದೆ ಎಂದಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us