AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು ಬೇರೆ ಜಾತಿಯವನನ್ನು ಮದುವೆಯಾಗಿದ್ದಕ್ಕೆ ಕುಟುಂಬಕ್ಕೆ ಇದೆಂಥಾ ಶಿಕ್ಷೆ

ಮಗಳು ಬೇರೆ ಜಾತಿಯ ಹುಡುಗನನ್ನು ಮದುವೆ(Marriage)ಯಾಗಿದ್ದಕ್ಕೆ ಊರಿನ ಜನ ಇಡೀ ಕುಟುಂಬಕ್ಕೆ ಶಿಕ್ಷೆ ಕೊಟ್ಟಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದಲ್ಲಿ ಅಂತರ್ಜಾತಿ ವಿವಾಹವೊಂದು ನಡೆದಿದೆ. ಒಬ್ಬ ಹುಡುಗಿ ಬೇರೆ ಹಳ್ಳಿಯ ಪರಿಶಿಷ್ಟ ಜಾತಿಯ ಹುಡುಗನನ್ನು ಮದುವೆಯಾಗಿದ್ದಾಳೆ. ಇದರಿಂದಾಗಿ ಕೋಪಗೊಂಡ ಹಳ್ಳಿಯ ಜನ ಆಕೆಯ ಕುಟುಂಬದ 40 ಮಂದಿಯ ತಲೆ ಬೋಳಿಸಿದ್ದಾರೆ.

ಮಗಳು ಬೇರೆ ಜಾತಿಯವನನ್ನು ಮದುವೆಯಾಗಿದ್ದಕ್ಕೆ ಕುಟುಂಬಕ್ಕೆ ಇದೆಂಥಾ ಶಿಕ್ಷೆ
ಒಡಿಶಾ ಜನ
ನಯನಾ ರಾಜೀವ್
|

Updated on: Jun 22, 2025 | 12:13 PM

Share

ಒಡಿಶಾ, ಜೂನ್ 22: ಮಗಳು ಬೇರೆ ಜಾತಿಯ ಹುಡುಗನನ್ನು ಮದುವೆ(Marriage)ಯಾಗಿದ್ದಕ್ಕೆ ಊರಿನ ಜನ ಇಡೀ ಕುಟುಂಬಕ್ಕೆ ಶಿಕ್ಷೆ ಕೊಟ್ಟಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದಲ್ಲಿ ಅಂತರ್ಜಾತಿ ವಿವಾಹವೊಂದು ನಡೆದಿದೆ. ಒಬ್ಬ ಹುಡುಗಿ ಬೇರೆ ಹಳ್ಳಿಯ ಪರಿಶಿಷ್ಟ ಜಾತಿಯ ಹುಡುಗನನ್ನು ಮದುವೆಯಾಗಿದ್ದಾಳೆ. ಇದರಿಂದಾಗಿ ಕೋಪಗೊಂಡ ಹಳ್ಳಿಯ ಜನ ಆಕೆಯ ಕುಟುಂಬದ 40 ಮಂದಿಯ ತಲೆ ಬೋಳಿಸಿದ್ದಾರೆ.

ಒಡಿಶಾದ ರಾಯಗಢದ ಕಾಶಿಪುರ ಬ್ಲಾಕ್‌ನ ಬೈಗಂಗುಡ ಗ್ರಾಮದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಯುವತಿಯ ಕುಟುಂಬವು ಶುದ್ಧೀಕರಣ ಮಾಡಲು ಪ್ರಾಣಿ ಬಲಿಯನ್ನು ಕೂಡ ನೀಡಬೇಕಾಯಿತು. ಈ ಅಂತರ್ಜಾತಿ ವಿವಾಹದಿಂದಾಗಿ, ಗ್ರಾಮಸ್ಥರು ಹುಡುಗಿಯ ಕುಟುಂಬವನ್ನು ಬಹಿಷ್ಕರಿಸಿದ್ದಾರೆ. ಗ್ರಾಮಸ್ಥರು ಹುಡುಗಿಯ ಕುಟುಂಬದ ಮೇಲೆ ಒತ್ತಡ ಹೇರಿ, ಪ್ರಾಯಶ್ಚಿತ್ತವಾಗಿ ಪ್ರಾಣಿಗಳನ್ನು ಬಲಿ ನೀಡಿ ನಂತರ ಮುಂಡನ್ ಸಂಸ್ಕಾರ ಮಾಡುವಂತೆ ಒತ್ತಡ ಹೇರಲಾಯಿತು.

ಯುವತಿಯ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ತಲೆ ಬೋಳಿಸಿಕೊಂಡು, ಮೇಕೆ, ಹಂದಿ ಮತ್ತು ಕೋಳಿಗಳನ್ನು ಬಲಿ ನೀಡಿ ಗ್ರಾಮಸ್ಥರಿಗೆ ಔತಣವನ್ನು ಏರ್ಪಡಿಸಿದ್ದರು. ಗ್ರಾಮದ ಯಾರೋ ಒಬ್ಬರು ಈ ಆಚರಣೆಯನ್ನು ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: ದೇವನಹಳ್ಳಿ ಬಳಿ ನಡೆಯುತ್ತಿದ್ದ ಬಾಲ್ಯವಿವಾಹವನ್ನು ತಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿಗಳು

ತನಿಖೆಗೆ ಸೂಚನೆ ಈ ಘಟನೆ ಬೆಳಕಿಗೆ ಬಂದ ತಕ್ಷಣ, ಕಾಶಿಪುರ ಬಿಡಿಒ ವಿಜಯ್ ಸೋಯ್ ಅವರು ಬ್ಲಾಕ್ ಅಧಿಕಾರಿಗಳಿಗೆ ಗ್ರಾಮಕ್ಕೆ ಹೋಗಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ತನಿಖೆಯ ನಂತರವೇ ಸತ್ಯ ಹೊರಬರಲಿದೆ. ತನಿಖೆಯಲ್ಲಿ ಯಾರಾದರೂ ತಪ್ಪಿತಸ್ಥರೆಂದು ಈ ಅಧಿಕಾರಿಗಳು ಕಂಡುಕೊಂಡರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ. ಇಂದಿಗೂ ದೇಶದ ವಿವಿಧ ಭಾಗಗಳಲ್ಲಿ ಜಾತಿ ಆಧಾರಿತ ತಾರತಮ್ಯದ ಚಿತ್ರಣ ಕಂಡುಬರುತ್ತಿದೆ.

ಜಾತಿವಾದ ಮತ್ತು ದುಷ್ಟ ಪದ್ಧತಿಗಳು ಸಮಾಜದಲ್ಲಿ ಆಳವಾಗಿ ಬೇರೂರಿವೆ

ಜಾತಿವಾದ ಮತ್ತು ದುಷ್ಟ ಪದ್ಧತಿಗಳು ಸಮಾಜದಲ್ಲಿ ಆಳವಾಗಿ ಬೇರೂರಿವೆ. ಪ್ರೇಮ ವಿವಾಹದಂತಹ ವೈಯಕ್ತಿಕ ನಿರ್ಧಾರದ ನಂತರ ಶುದ್ಧೀಕರಣಕ್ಕೆ ಒತ್ತಡ ಹೇರುವುದು ಸಂವಿಧಾನಬಾಹಿರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಪ್ರಸ್ತುತ, ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!