AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್​​ನಲ್ಲಿ 9 ಬಾಲಕರಿಗೆ ಲೈಂಗಿಕ ಕಿರುಕುಳ, ಸರ್ಕಾರಿ ಎಂಜಿನಿಯರ್ ಅರೆಸ್ಟ್​

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಶಾಲಾ ಹಾಸ್ಟೆಲ್‌ನಲ್ಲಿ ಒಂಬತ್ತು ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ(Sexual Assault) ನೀಡಿದ ಆರೋಪದ ಮೇಲೆ ಒಡಿಶಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಕ್ಕಳು ತಮ್ಮ ಮುಖ್ಯೋಪಾಧ್ಯಾಯರಿಗೆ ದೌರ್ಜನ್ಯದ ಬಗ್ಗೆ ತಿಳಿಸಿದ ನಂತರ ಆರೋಪಿಯನ್ನು ಬ್ಲಾಕ್ ಸಹಾಯಕ ಎಂಜಿನಿಯರ್ ಪ್ರಶಾಂತ್ ಸೇನಾಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸ್ಟೆಲ್​​ನಲ್ಲಿ 9 ಬಾಲಕರಿಗೆ ಲೈಂಗಿಕ ಕಿರುಕುಳ, ಸರ್ಕಾರಿ ಎಂಜಿನಿಯರ್ ಅರೆಸ್ಟ್​
ಬಾಲಕImage Credit source: Google
ನಯನಾ ರಾಜೀವ್
|

Updated on: Nov 06, 2025 | 12:06 PM

Share

ಒಡಿಶಾ, ನವೆಂಬರ್ 6: ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಶಾಲಾ ಹಾಸ್ಟೆಲ್‌ನಲ್ಲಿ ಒಂಬತ್ತು ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ(Sexual Assault) ನೀಡಿದ ಆರೋಪದ ಮೇಲೆ ಒಡಿಶಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಕ್ಕಳು ತಮ್ಮ ಮುಖ್ಯೋಪಾಧ್ಯಾಯರಿಗೆ ದೌರ್ಜನ್ಯದ ಬಗ್ಗೆ ತಿಳಿಸಿದ ನಂತರ ಆರೋಪಿಯನ್ನು ಬ್ಲಾಕ್ ಸಹಾಯಕ ಎಂಜಿನಿಯರ್ ಪ್ರಶಾಂತ್ ಸೇನಾಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಸೇನಾಪತಿ ಭಂಜಭೂಮಿ ಸಂಸ್ಕೃತ ವಿದ್ಯಾಲಯ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಲು ಭೇಟಿ ನೀಡಿದ್ದರು ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳನ್ನು ಒಬ್ಬೊಬ್ಬರಾಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಕರೆಸಿ ಪ್ರಶ್ನಿಸುವ ನೆಪದಲ್ಲಿ ಹಲ್ಲೆ ನಡೆಸಿದ್ದರು ಎಂದು ವರದಿಯಾಗಿದೆ.

ಆ ಸಂಜೆ ನಂತರ, ರಾತ್ರಿ 7 ರಿಂದ 8 ಗಂಟೆಯ ನಡುವೆ, ಅವನು ಹಿಂತಿರುಗಿ ಅದೇ ಹುಡುಗರನ್ನು ಅಪೂರ್ಣವಾಗಿದ್ದ ಶೌಚಾಲಯ ಬ್ಲಾಕ್‌ಗೆ ಕರೆದೊಯ್ದಿದ್ದರು. ಅಲ್ಲಿ ಅವರು ಮಕ್ಕಳನ್ನು ಅನುಚಿತವಾಗಿ ಮುಟ್ಟಿದನು ಮತ್ತು ಮೌನವಾಗಿರಲು ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ:  ಕರ್ನಾಟಕದಲ್ಲಿ ಮತ್ತೊಂದು ಅಮಾನವೀಯ ಕೃತ್ಯ: ಮಾತು ಬಾರದ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ

ಮರುದಿನ ಬೆಳಗ್ಗೆ, ಒಂಬತ್ತು ಹುಡುಗರು ತಮ್ಮ ಮುಖ್ಯೋಪಾಧ್ಯಾಯಿನಿ ಸೆಬಾತಿ ಮೊಹಂತಾ ಅವರಿಗೆ ಮಾಹಿತಿ ನೀಡಿದರು, ಅವರು ತಕ್ಷಣ ಎಫ್‌ಐಆರ್ ದಾಖಲಿಸಿದರು. ಹಾಸ್ಟೆಲ್‌ಗೆ ಬಂದು ಹುಡುಗರಿಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದರು, ಸಂಜೆ, ಅವರನ್ನು ಕತ್ತಲೆಯ ಸ್ಥಳಕ್ಕೆ ಕರೆದು ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ನಾವು ದೂರು ದಾಖಲಿಸಿದ್ದೇವೆ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ ಎಂದು ಮೊಹಂತ ಹೇಳಿದರು.

ವಿಚಾರಣೆಯ ನಂತರ ಸೇನಾಪತಿಯನ್ನು ಬಂಧಿಸಲಾಗಿದೆ ಮತ್ತು ನಂತರ ಸ್ಥಳೀಯ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಪೊಲೀಸರು ತನಿಖೆ ಮುಂದುವರಿಸಿರುವಾಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ