AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಸ್ನೇಹಿ ಪೊಲೀಸ್ ಠಾಣೆಗಳ ಸ್ಥಾಪನೆಗೆ ಒಡಿಶಾ ಸರ್ಕಾರ ನಿರ್ಧಾರ

ಒಡಿಶಾ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತಲಾ ಒಂದು ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ನಿರ್ಮಿಸಲು ಮುಖ್ಯಮಂತ್ರಿ ನವೀನ್ ಪಟ್ನಾಹಕ್ ಆದೇಶಿಸಿದ್ದಾರೆ

ಮಕ್ಕಳ ಸ್ನೇಹಿ ಪೊಲೀಸ್ ಠಾಣೆಗಳ ಸ್ಥಾಪನೆಗೆ ಒಡಿಶಾ ಸರ್ಕಾರ ನಿರ್ಧಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 26, 2021 | 11:16 PM

Share

ಭುವನೇಶ್ವರ: ಒಡಿಶಾದ ವಿವಿಧೆಡೆ 34 ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ನಿರ್ಮಿಸಲು ಒಡಿಶಾ ಸರ್ಕಾರ ನಿರ್ಧರಿಸಿದೆ. ವಿವಿಧ ಕಾರಣಗಳಿಂದ ಪೊಲೀಸ್ ಠಾಣೆಗೆ ಭೇಟಿ ನೀಡಬೇಕಾಗುವ ಮಕ್ಕಳ ಮೇಲೆ ಮಾನಸಿಕ ಒತ್ತಡ ಹೆಚ್ಚಾಗಬಾರದು ಎಂದು ಹೇಳಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪ್ರತಿ ಪೊಲೀಸ್ ಜಿಲ್ಲೆಗಳಲ್ಲೂ ಒಂದೊಂದು ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ನಿರ್ಮಿಸಲು ಆದೇಶಿಸಿದ್ದಾರೆ. ಒಡಿಶಾದ ಗೃಹ ಇಲಾಖೆಯನ್ನೂ ಮುಖ್ಯಮಂತ್ರಿಯೇ ನಿರ್ವಹಿಸಿದ್ದಾರೆ.

ಪ್ರತಿಯೊಂದು ಮಕ್ಕಳ ಸ್ನೇಹಿ ಪೊಲೀಸ್ ಠಾಣೆಯಲ್ಲಿಯೂ ಮಂಚಗಳು, ಕುರ್ಚಿಗಳು, ಮೇಜು, ಗೊಂಬೆ ಮತ್ತು ಪ್ರಥಮ ಚಿಕಿತ್ಸೆ ಪೆಟ್ಟಿಗೆಗಳನ್ನು ಹೊಂದಿರುತ್ತದೆ. ಗೋಡೆಗಳಲ್ಲಿ ಅಗತ್ಯ ಮಾಹಿತಿ ನೀಡುವ ಪೋಸ್ಟರ್​ಗಳು ಮತ್ತು ಚಿತ್ರಗಳನ್ನೂ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಸಹಾಯ ಪಡೆಯಲು ಅಥವಾ ಕಾನೂನಿನ ಕಾರಣಗಳಿಗಾಗಿ ಪೊಲೀಸ್ ಠಾಣೆಗೆ ಬರುವ ಮಕ್ಕಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯದಲ್ಲಿ 34 ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಟ್ವೀಟ್ ತಿಳಿಸಿದೆ.

ಇಂಥ ಪೊಲೀಸ್ ಠಾಣೆಗಳಲ್ಲಿ ಮಕ್ಕಳ ಪುಸ್ತಕಗಳು, ನಿಯತಕಾಲಿಕೆಗಳು ಮತ್ತು ದಿನಪತ್ರಿಕೆಗಳು ಲಭ್ಯವಿರುತ್ತವೆ. ಇದರ ಜೊತೆಗೆ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡುವ ಪೋಸ್ಟರ್​ಗಳು ಇರುತ್ತವೆ. ಮಕ್ಕಳೊಂದಿಗೆ ಪೊಲೀಸರು ಹೇಗೆ ವರ್ತಿಸಬೇಕು ಎಂಬುದನ್ನು ಸೂಚಿಸುವ ಇಂಥದ್ದನ್ನು ಮಾಡಿ, ಇಂಥದ್ದನ್ನು ಮಾಡಬೇಡಿ ಎಂಬ ಮಾಹಿತಿ ಫಲಕಗಳನ್ನೂ ಅಳವಡಿಸಲಾಗುವುದು. ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮತ್ತು ಇತರ ಸಂಬಂಧಿತ ವ್ಯಕ್ತಿಗಳ ವಿವರವನ್ನೂ ಪೊಲೀಸ್ ಠಾಣೆಯಲ್ಲಿ ಎದ್ದು ಕಾಣುವಂತೆ ಪ್ರದರ್ಶಿಸಲಾಗುವುದು ಎಂದು ಒಡಿಶಾ ಸರ್ಕಾರ ವಿವರಿಸಿದೆ.

ಇದನ್ನೂ ಓದಿ: 275 ಐಸ್​ಕ್ರೀಂ ಕಡ್ಡಿಗಳನ್ನು ಬಳಸಿ ದುರ್ಗಾದೇವಿಯ ಕಲಾಕೃತಿ ತಯಾರಿಸಿದ ಒಡಿಶಾ ಕಲಾವಿದ ಇದನ್ನೂ ಓದಿ: ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ

Published On - 11:14 pm, Tue, 26 October 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ