AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಸ್ನೇಹಿ ಪೊಲೀಸ್ ಠಾಣೆಗಳ ಸ್ಥಾಪನೆಗೆ ಒಡಿಶಾ ಸರ್ಕಾರ ನಿರ್ಧಾರ

ಒಡಿಶಾ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತಲಾ ಒಂದು ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ನಿರ್ಮಿಸಲು ಮುಖ್ಯಮಂತ್ರಿ ನವೀನ್ ಪಟ್ನಾಹಕ್ ಆದೇಶಿಸಿದ್ದಾರೆ

ಮಕ್ಕಳ ಸ್ನೇಹಿ ಪೊಲೀಸ್ ಠಾಣೆಗಳ ಸ್ಥಾಪನೆಗೆ ಒಡಿಶಾ ಸರ್ಕಾರ ನಿರ್ಧಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 26, 2021 | 11:16 PM

Share

ಭುವನೇಶ್ವರ: ಒಡಿಶಾದ ವಿವಿಧೆಡೆ 34 ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ನಿರ್ಮಿಸಲು ಒಡಿಶಾ ಸರ್ಕಾರ ನಿರ್ಧರಿಸಿದೆ. ವಿವಿಧ ಕಾರಣಗಳಿಂದ ಪೊಲೀಸ್ ಠಾಣೆಗೆ ಭೇಟಿ ನೀಡಬೇಕಾಗುವ ಮಕ್ಕಳ ಮೇಲೆ ಮಾನಸಿಕ ಒತ್ತಡ ಹೆಚ್ಚಾಗಬಾರದು ಎಂದು ಹೇಳಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪ್ರತಿ ಪೊಲೀಸ್ ಜಿಲ್ಲೆಗಳಲ್ಲೂ ಒಂದೊಂದು ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ನಿರ್ಮಿಸಲು ಆದೇಶಿಸಿದ್ದಾರೆ. ಒಡಿಶಾದ ಗೃಹ ಇಲಾಖೆಯನ್ನೂ ಮುಖ್ಯಮಂತ್ರಿಯೇ ನಿರ್ವಹಿಸಿದ್ದಾರೆ.

ಪ್ರತಿಯೊಂದು ಮಕ್ಕಳ ಸ್ನೇಹಿ ಪೊಲೀಸ್ ಠಾಣೆಯಲ್ಲಿಯೂ ಮಂಚಗಳು, ಕುರ್ಚಿಗಳು, ಮೇಜು, ಗೊಂಬೆ ಮತ್ತು ಪ್ರಥಮ ಚಿಕಿತ್ಸೆ ಪೆಟ್ಟಿಗೆಗಳನ್ನು ಹೊಂದಿರುತ್ತದೆ. ಗೋಡೆಗಳಲ್ಲಿ ಅಗತ್ಯ ಮಾಹಿತಿ ನೀಡುವ ಪೋಸ್ಟರ್​ಗಳು ಮತ್ತು ಚಿತ್ರಗಳನ್ನೂ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಸಹಾಯ ಪಡೆಯಲು ಅಥವಾ ಕಾನೂನಿನ ಕಾರಣಗಳಿಗಾಗಿ ಪೊಲೀಸ್ ಠಾಣೆಗೆ ಬರುವ ಮಕ್ಕಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯದಲ್ಲಿ 34 ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಟ್ವೀಟ್ ತಿಳಿಸಿದೆ.

ಇಂಥ ಪೊಲೀಸ್ ಠಾಣೆಗಳಲ್ಲಿ ಮಕ್ಕಳ ಪುಸ್ತಕಗಳು, ನಿಯತಕಾಲಿಕೆಗಳು ಮತ್ತು ದಿನಪತ್ರಿಕೆಗಳು ಲಭ್ಯವಿರುತ್ತವೆ. ಇದರ ಜೊತೆಗೆ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡುವ ಪೋಸ್ಟರ್​ಗಳು ಇರುತ್ತವೆ. ಮಕ್ಕಳೊಂದಿಗೆ ಪೊಲೀಸರು ಹೇಗೆ ವರ್ತಿಸಬೇಕು ಎಂಬುದನ್ನು ಸೂಚಿಸುವ ಇಂಥದ್ದನ್ನು ಮಾಡಿ, ಇಂಥದ್ದನ್ನು ಮಾಡಬೇಡಿ ಎಂಬ ಮಾಹಿತಿ ಫಲಕಗಳನ್ನೂ ಅಳವಡಿಸಲಾಗುವುದು. ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮತ್ತು ಇತರ ಸಂಬಂಧಿತ ವ್ಯಕ್ತಿಗಳ ವಿವರವನ್ನೂ ಪೊಲೀಸ್ ಠಾಣೆಯಲ್ಲಿ ಎದ್ದು ಕಾಣುವಂತೆ ಪ್ರದರ್ಶಿಸಲಾಗುವುದು ಎಂದು ಒಡಿಶಾ ಸರ್ಕಾರ ವಿವರಿಸಿದೆ.

ಇದನ್ನೂ ಓದಿ: 275 ಐಸ್​ಕ್ರೀಂ ಕಡ್ಡಿಗಳನ್ನು ಬಳಸಿ ದುರ್ಗಾದೇವಿಯ ಕಲಾಕೃತಿ ತಯಾರಿಸಿದ ಒಡಿಶಾ ಕಲಾವಿದ ಇದನ್ನೂ ಓದಿ: ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ

Published On - 11:14 pm, Tue, 26 October 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ