AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಸ್ನೇಹಿ ಪೊಲೀಸ್ ಠಾಣೆಗಳ ಸ್ಥಾಪನೆಗೆ ಒಡಿಶಾ ಸರ್ಕಾರ ನಿರ್ಧಾರ

ಒಡಿಶಾ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತಲಾ ಒಂದು ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ನಿರ್ಮಿಸಲು ಮುಖ್ಯಮಂತ್ರಿ ನವೀನ್ ಪಟ್ನಾಹಕ್ ಆದೇಶಿಸಿದ್ದಾರೆ

ಮಕ್ಕಳ ಸ್ನೇಹಿ ಪೊಲೀಸ್ ಠಾಣೆಗಳ ಸ್ಥಾಪನೆಗೆ ಒಡಿಶಾ ಸರ್ಕಾರ ನಿರ್ಧಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 26, 2021 | 11:16 PM

Share

ಭುವನೇಶ್ವರ: ಒಡಿಶಾದ ವಿವಿಧೆಡೆ 34 ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ನಿರ್ಮಿಸಲು ಒಡಿಶಾ ಸರ್ಕಾರ ನಿರ್ಧರಿಸಿದೆ. ವಿವಿಧ ಕಾರಣಗಳಿಂದ ಪೊಲೀಸ್ ಠಾಣೆಗೆ ಭೇಟಿ ನೀಡಬೇಕಾಗುವ ಮಕ್ಕಳ ಮೇಲೆ ಮಾನಸಿಕ ಒತ್ತಡ ಹೆಚ್ಚಾಗಬಾರದು ಎಂದು ಹೇಳಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪ್ರತಿ ಪೊಲೀಸ್ ಜಿಲ್ಲೆಗಳಲ್ಲೂ ಒಂದೊಂದು ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ನಿರ್ಮಿಸಲು ಆದೇಶಿಸಿದ್ದಾರೆ. ಒಡಿಶಾದ ಗೃಹ ಇಲಾಖೆಯನ್ನೂ ಮುಖ್ಯಮಂತ್ರಿಯೇ ನಿರ್ವಹಿಸಿದ್ದಾರೆ.

ಪ್ರತಿಯೊಂದು ಮಕ್ಕಳ ಸ್ನೇಹಿ ಪೊಲೀಸ್ ಠಾಣೆಯಲ್ಲಿಯೂ ಮಂಚಗಳು, ಕುರ್ಚಿಗಳು, ಮೇಜು, ಗೊಂಬೆ ಮತ್ತು ಪ್ರಥಮ ಚಿಕಿತ್ಸೆ ಪೆಟ್ಟಿಗೆಗಳನ್ನು ಹೊಂದಿರುತ್ತದೆ. ಗೋಡೆಗಳಲ್ಲಿ ಅಗತ್ಯ ಮಾಹಿತಿ ನೀಡುವ ಪೋಸ್ಟರ್​ಗಳು ಮತ್ತು ಚಿತ್ರಗಳನ್ನೂ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಸಹಾಯ ಪಡೆಯಲು ಅಥವಾ ಕಾನೂನಿನ ಕಾರಣಗಳಿಗಾಗಿ ಪೊಲೀಸ್ ಠಾಣೆಗೆ ಬರುವ ಮಕ್ಕಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯದಲ್ಲಿ 34 ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಟ್ವೀಟ್ ತಿಳಿಸಿದೆ.

ಇಂಥ ಪೊಲೀಸ್ ಠಾಣೆಗಳಲ್ಲಿ ಮಕ್ಕಳ ಪುಸ್ತಕಗಳು, ನಿಯತಕಾಲಿಕೆಗಳು ಮತ್ತು ದಿನಪತ್ರಿಕೆಗಳು ಲಭ್ಯವಿರುತ್ತವೆ. ಇದರ ಜೊತೆಗೆ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡುವ ಪೋಸ್ಟರ್​ಗಳು ಇರುತ್ತವೆ. ಮಕ್ಕಳೊಂದಿಗೆ ಪೊಲೀಸರು ಹೇಗೆ ವರ್ತಿಸಬೇಕು ಎಂಬುದನ್ನು ಸೂಚಿಸುವ ಇಂಥದ್ದನ್ನು ಮಾಡಿ, ಇಂಥದ್ದನ್ನು ಮಾಡಬೇಡಿ ಎಂಬ ಮಾಹಿತಿ ಫಲಕಗಳನ್ನೂ ಅಳವಡಿಸಲಾಗುವುದು. ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮತ್ತು ಇತರ ಸಂಬಂಧಿತ ವ್ಯಕ್ತಿಗಳ ವಿವರವನ್ನೂ ಪೊಲೀಸ್ ಠಾಣೆಯಲ್ಲಿ ಎದ್ದು ಕಾಣುವಂತೆ ಪ್ರದರ್ಶಿಸಲಾಗುವುದು ಎಂದು ಒಡಿಶಾ ಸರ್ಕಾರ ವಿವರಿಸಿದೆ.

ಇದನ್ನೂ ಓದಿ: 275 ಐಸ್​ಕ್ರೀಂ ಕಡ್ಡಿಗಳನ್ನು ಬಳಸಿ ದುರ್ಗಾದೇವಿಯ ಕಲಾಕೃತಿ ತಯಾರಿಸಿದ ಒಡಿಶಾ ಕಲಾವಿದ ಇದನ್ನೂ ಓದಿ: ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ

Published On - 11:14 pm, Tue, 26 October 21

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು