AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nab Kishore Das: ಪೊಲೀಸ್ ಅಧಿಕಾರಿಯ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಒಡಿಶಾ ಸಚಿವ ಕಿಶೋರ್ ದಾಸ್ ನಿಧನ

Nab Kishore Das Dies ಪೊಲೀಸ್ ಅಧಿಕಾರಿ ನಡೆಸಿದ್ದ ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ ನಿಧನರಾಗಿದ್ದಾರೆ.

Nab Kishore Das: ಪೊಲೀಸ್ ಅಧಿಕಾರಿಯ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಒಡಿಶಾ ಸಚಿವ ಕಿಶೋರ್ ದಾಸ್ ನಿಧನ
ಒಡಿಶಾ ಸಚಿವ ನಬ ಕಿಶೋರ್ ದಾಸ್
TV9 Web
| Edited By: |

Updated on:Jan 30, 2023 | 7:14 AM

Share

ಭುವನೇಶ್ವರ್: ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಒಡಿಶಾ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ಚಿಕಿತ್ಸೆ ಫ‌ಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ. ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್​ನ ಗಾಂಧಿ ಚೌಕ್​ ಎಂಬಲ್ಲಿ ಇಂದು (ಜನವರಿ 29) ಮಧ್ಯಾಹ್ನ 12:30ಕ್ಕೆ ಪೊಲೀಸ್ ಅಧಿಕಾರಿ ಎಎಸ್​ಐ ಗೋಪಾಲ್ ಚಂದ್ರ ದಾಸ್ ಅವರು ಸಚಿವರ ಎದೆಗೆ ಗುಂಡು ಹಾರಿಸಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸಚಿವ ನಬ ಕಿಶೋರ್ ದಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಭುವನೇಶ್ವರದ ಅಪೋಲೊ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Odisha Minister Attacked: ಒಡಿಶಾ ಸಚಿವ ನಬ ದಾಸ್ ಮೇಲೆ ಗುಂಡಿನ ದಾಳಿ, ಗಂಭೀರ ಗಾಯ 

ಇಂದು ಝಾರ್ಸುಗುಡಾದ ಗಾಂಧಿ ಚೌಕ್‌ನಲ್ಲಿ ಆರೋಗ್ಯ ಸಚಿವ ನಬಾ ದಾಸ್ ಮೇಲೆ ಎಎಸ್‌ಐ ಗುಂಡು ಹಾರಿಸಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಭುವನೇಶ್ವರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಖ್ಯಮಂತ್ರಿ ನವೀನ್​ ಪಟ್ನಾಯಕ್​ ಸೇರಿದಂತೆ ಅನೇಕರು ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆದರೆ, ಗುಂಡು ಸಚಿವ ನಬಾ ಕಿಶೋರ್‌ ದಾಸ್‌ ದೇಹದಿಂದ ಹೊರಬಂದಿದ್ದು, ಹೃದಯ, ಶ್ವಾಸಕೋಶದಲ್ಲಿ ಗಂಭೀರ ಗಾಯದಿಂದ ನಿಧನರಾಗಿದ್ದಾರೆ ಎಂದು ಅಪೋಲೋ ಆಸ್ಪತ್ರೆ ತಿಳಿಸಿದೆ.

ಇನ್ನು ನಬಾ ಕಿಶೋರ್‌ ಮೇಲೆ ಫೈರಿಂಗ್‌ ನಡೆಸಿದ್ದ ಎಎಸ್​ಐ ಗೋಪಾಲ್‌ ದಾಸ್​ ನನ್ನು ಪೊಲೀಸರು ಬಂಧಿಸಿದ್ದು, ಸಚಿವರ ಎದೆಗೆ ಏಕೆ ಗುಂಡು ಹಾರಿಸಿದರೆಂಬ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಸೂಕ್ತ ತನಿಖೆಗೆ ಒಡಿಶಾ ಸರ್ಕಾರ ಸಿಐಡಿ ಪೊಲೀಸರ ವಿಶೇಷ ತಂಡವನ್ನು ರಚಿಸಿದೆ. ಡಿವೈಎಸ್‌ಪಿ ನೇತೃತ್ವದಲ್ಲಿ ಸೈಬರ್ ತಜ್ಞರು, ಬ್ಯಾಲಿಸ್ಟಿಕ್ ತಜ್ಞರು ಮತ್ತು ಕ್ರೈಂ ಬ್ರ್ಯಾಂಚ್‌ ಅಧಿಕಾರಿಗಳನ್ನೊಳಗೊಂಡ 7 ಸದಸ್ಯರ ತಂಡ ರಚನೆ ಮಾಡಲಾಗಿದೆ.

ರಾಷ್ಟ್ರಪತಿ ಸಂತಾಪ

ಒಡಿಶಾ ಸಚಿವ ನಬ ಕಿಶೋರ್ ದಾಸ್ ದುರ್ಮರಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಘಾತ ವ್ಯಕ್ತಪಡಿಸಿದ್ದು, ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

Published On - 8:32 pm, Sun, 29 January 23

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ