AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪಿರುವೆ ಚಟ್ನಿ ಕೊರೊನಾಕ್ಕೆ ಲಸಿಕೆ ಆಗುತ್ತಾ? ಆಯುಷ್​ ಸಚಿವಾಲಯದಿಂದ ಶೀಘ್ರದಲ್ಲೇ ಸ್ಪಷ್ಟನೆ

ಕೆಂಪಿರುವೆ ಚಟ್ನಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುತ್ತದೆ ಎಂದು ಕಳೆದ ಜೂನ್​ ತಿಂಗಳಲ್ಲಿ ಇಂಜಿನಿಯರ್​ ಮತ್ತು ಸಂಶೋಧಕ ನಯಾಧರ್ ಪಡಿಯಾಲ್ ಪ್ರತಿಪಾದಿಸಿದ್ದರು. ಒಡಿಶಾ ಮತ್ತು ಛತ್ತೀಸ್​ಘಡ್​ ರಾಜ್ಯಗಳಲ್ಲಿ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಔಷಧಿಯಾಗಿ ಕೆಂಪಿರುವೆ ಮತ್ತು ಹಸಿಮೆಣಸನ್ನು ಹಾಕಿ ಮಾಡಲಾದ ಚಟ್ನಿ ಸೇವಿಸಲಾಗುತ್ತದೆ.

ಕೆಂಪಿರುವೆ ಚಟ್ನಿ ಕೊರೊನಾಕ್ಕೆ ಲಸಿಕೆ ಆಗುತ್ತಾ? ಆಯುಷ್​ ಸಚಿವಾಲಯದಿಂದ ಶೀಘ್ರದಲ್ಲೇ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Jan 02, 2021 | 1:06 PM

Share

ಭುವನೇಶ್ವರ: ಕೆಂಪಿರುವೆ ಮತ್ತು ಅವುಗಳ ಮೊಟ್ಟೆಯಿಂದ ತಯಾರಿಸಲಾಗುವ ಚಟ್ನಿ ಕೊರೊನಾಕ್ಕೆ ಮದ್ದಾಗಲಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಕುರಿತು ಶೀಘ್ರದಲ್ಲಿಯೇ ಆಯುಷ್​ ಸಚಿವಾಲಯ ಸ್ಪಷ್ಟನೆ ನೀಡಲಿದೆ. ಈ ಕುರಿತು ಒಡಿಶಾ ಹೈಕೋರ್ಟ್ ಆಯುಷ್​ ಸಚಿವಾಲಯ ಹಾಗೂ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿಗೆ ನಿರ್ದೇಶನ ನೀಡಿದ್ದು, 3 ತಿಂಗಳೊಳಗೆ ಮಾಹಿತಿ ನೀಡುವಂತೆ ತಿಳಿಸಿದೆ.

ಕೆಂಪಿರುವೆ ಚಟ್ನಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುತ್ತದೆ ಎಂದು ಕಳೆದ ಜೂನ್​ ತಿಂಗಳಲ್ಲಿ ಇಂಜಿನಿಯರ್​ ಮತ್ತು ಸಂಶೋಧಕ ನಯಾಧರ್ ಪಡಿಯಾಲ್ ಪ್ರತಿಪಾದಿಸಿದ್ದರು. ಒಡಿಶಾ ಮತ್ತು ಛತ್ತೀಸ್​ಗಡ ರಾಜ್ಯಗಳಲ್ಲಿ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಔಷಧಿಯಾಗಿ ಕೆಂಪಿರುವೆ ಮತ್ತು ಹಸಿಮೆಣಸನ್ನು ಹಾಕಿ ಮಾಡಲಾದ ಚಟ್ನಿ ಸೇವಿಸಲಾಗುತ್ತದೆ. ಆದ್ದರಿಂದ ಇದು ಕೊರೊನಾಕ್ಕೂ ರಾಮಬಾಣ ಎಂದು ಹೇಳಿದ್ದರು.

ಕೆಂಪಿರುವೆ ಚಟ್ನಿಯಲ್ಲಿ ಫಾರ್ಮಿಕ್ ಆ್ಯಸಿಡ್, ಪ್ರೋಟೀನ್, ಕ್ಯಾಲ್ಸಿಯಂ, ವಿಟಮಿನ್​ ಬಿ12, ಜಿಂಕ್ ಮತ್ತು ಕಬ್ಬಿಣಾಂಶ ಅಧಿಕವಾಗಿರುತ್ತದೆ. ಇದು ಆರೋಗ್ಯ ವರ್ಧನೆಗೆ ಸಹಕಾರಿ ಮತ್ತು ಕೊವಿಡ್​ ಕಾಯಿಲೆಗೆ ಪರಿಣಾಮಕಾರಿ ಮದ್ದು ಎಂಬ ವಿಷಯದ ಕುರಿತು ನ್ಯಾಯಾಲಯದಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದರು. ಇದೀಗ ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡಲು ಆಯುಷ್ ಸಚಿವಾಲಯಕ್ಕೆ ಒಡಿಶಾ ಹೈಕೋರ್ಟ್ ಸೂಚನೆ ನೀಡಿದೆ.

ಕೊರೊನಾದಿಂದ ಕಂಗೆಟ್ಟ ವರ್ಷದಲ್ಲಿ ಸೋಂಕಿಗಿಂತಲೂ ವೇಗವಾಗಿ ಹರಡಿದ್ದು ಕೋವಿಡ್-19 ರೋಗದ ಬಗ್ಗೆ ತಪ್ಪು ಮಾಹಿತಿ

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!