AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪಿರುವೆ ಚಟ್ನಿ ಕೊರೊನಾಕ್ಕೆ ಲಸಿಕೆ ಆಗುತ್ತಾ? ಆಯುಷ್​ ಸಚಿವಾಲಯದಿಂದ ಶೀಘ್ರದಲ್ಲೇ ಸ್ಪಷ್ಟನೆ

ಕೆಂಪಿರುವೆ ಚಟ್ನಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುತ್ತದೆ ಎಂದು ಕಳೆದ ಜೂನ್​ ತಿಂಗಳಲ್ಲಿ ಇಂಜಿನಿಯರ್​ ಮತ್ತು ಸಂಶೋಧಕ ನಯಾಧರ್ ಪಡಿಯಾಲ್ ಪ್ರತಿಪಾದಿಸಿದ್ದರು. ಒಡಿಶಾ ಮತ್ತು ಛತ್ತೀಸ್​ಘಡ್​ ರಾಜ್ಯಗಳಲ್ಲಿ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಔಷಧಿಯಾಗಿ ಕೆಂಪಿರುವೆ ಮತ್ತು ಹಸಿಮೆಣಸನ್ನು ಹಾಕಿ ಮಾಡಲಾದ ಚಟ್ನಿ ಸೇವಿಸಲಾಗುತ್ತದೆ.

ಕೆಂಪಿರುವೆ ಚಟ್ನಿ ಕೊರೊನಾಕ್ಕೆ ಲಸಿಕೆ ಆಗುತ್ತಾ? ಆಯುಷ್​ ಸಚಿವಾಲಯದಿಂದ ಶೀಘ್ರದಲ್ಲೇ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Jan 02, 2021 | 1:06 PM

Share

ಭುವನೇಶ್ವರ: ಕೆಂಪಿರುವೆ ಮತ್ತು ಅವುಗಳ ಮೊಟ್ಟೆಯಿಂದ ತಯಾರಿಸಲಾಗುವ ಚಟ್ನಿ ಕೊರೊನಾಕ್ಕೆ ಮದ್ದಾಗಲಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಕುರಿತು ಶೀಘ್ರದಲ್ಲಿಯೇ ಆಯುಷ್​ ಸಚಿವಾಲಯ ಸ್ಪಷ್ಟನೆ ನೀಡಲಿದೆ. ಈ ಕುರಿತು ಒಡಿಶಾ ಹೈಕೋರ್ಟ್ ಆಯುಷ್​ ಸಚಿವಾಲಯ ಹಾಗೂ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿಗೆ ನಿರ್ದೇಶನ ನೀಡಿದ್ದು, 3 ತಿಂಗಳೊಳಗೆ ಮಾಹಿತಿ ನೀಡುವಂತೆ ತಿಳಿಸಿದೆ.

ಕೆಂಪಿರುವೆ ಚಟ್ನಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುತ್ತದೆ ಎಂದು ಕಳೆದ ಜೂನ್​ ತಿಂಗಳಲ್ಲಿ ಇಂಜಿನಿಯರ್​ ಮತ್ತು ಸಂಶೋಧಕ ನಯಾಧರ್ ಪಡಿಯಾಲ್ ಪ್ರತಿಪಾದಿಸಿದ್ದರು. ಒಡಿಶಾ ಮತ್ತು ಛತ್ತೀಸ್​ಗಡ ರಾಜ್ಯಗಳಲ್ಲಿ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಔಷಧಿಯಾಗಿ ಕೆಂಪಿರುವೆ ಮತ್ತು ಹಸಿಮೆಣಸನ್ನು ಹಾಕಿ ಮಾಡಲಾದ ಚಟ್ನಿ ಸೇವಿಸಲಾಗುತ್ತದೆ. ಆದ್ದರಿಂದ ಇದು ಕೊರೊನಾಕ್ಕೂ ರಾಮಬಾಣ ಎಂದು ಹೇಳಿದ್ದರು.

ಕೆಂಪಿರುವೆ ಚಟ್ನಿಯಲ್ಲಿ ಫಾರ್ಮಿಕ್ ಆ್ಯಸಿಡ್, ಪ್ರೋಟೀನ್, ಕ್ಯಾಲ್ಸಿಯಂ, ವಿಟಮಿನ್​ ಬಿ12, ಜಿಂಕ್ ಮತ್ತು ಕಬ್ಬಿಣಾಂಶ ಅಧಿಕವಾಗಿರುತ್ತದೆ. ಇದು ಆರೋಗ್ಯ ವರ್ಧನೆಗೆ ಸಹಕಾರಿ ಮತ್ತು ಕೊವಿಡ್​ ಕಾಯಿಲೆಗೆ ಪರಿಣಾಮಕಾರಿ ಮದ್ದು ಎಂಬ ವಿಷಯದ ಕುರಿತು ನ್ಯಾಯಾಲಯದಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದರು. ಇದೀಗ ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡಲು ಆಯುಷ್ ಸಚಿವಾಲಯಕ್ಕೆ ಒಡಿಶಾ ಹೈಕೋರ್ಟ್ ಸೂಚನೆ ನೀಡಿದೆ.

ಕೊರೊನಾದಿಂದ ಕಂಗೆಟ್ಟ ವರ್ಷದಲ್ಲಿ ಸೋಂಕಿಗಿಂತಲೂ ವೇಗವಾಗಿ ಹರಡಿದ್ದು ಕೋವಿಡ್-19 ರೋಗದ ಬಗ್ಗೆ ತಪ್ಪು ಮಾಹಿತಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?