AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪಿರುವೆ ಚಟ್ನಿ ಕೊರೊನಾಕ್ಕೆ ಲಸಿಕೆ ಆಗುತ್ತಾ? ಆಯುಷ್​ ಸಚಿವಾಲಯದಿಂದ ಶೀಘ್ರದಲ್ಲೇ ಸ್ಪಷ್ಟನೆ

ಕೆಂಪಿರುವೆ ಚಟ್ನಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುತ್ತದೆ ಎಂದು ಕಳೆದ ಜೂನ್​ ತಿಂಗಳಲ್ಲಿ ಇಂಜಿನಿಯರ್​ ಮತ್ತು ಸಂಶೋಧಕ ನಯಾಧರ್ ಪಡಿಯಾಲ್ ಪ್ರತಿಪಾದಿಸಿದ್ದರು. ಒಡಿಶಾ ಮತ್ತು ಛತ್ತೀಸ್​ಘಡ್​ ರಾಜ್ಯಗಳಲ್ಲಿ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಔಷಧಿಯಾಗಿ ಕೆಂಪಿರುವೆ ಮತ್ತು ಹಸಿಮೆಣಸನ್ನು ಹಾಕಿ ಮಾಡಲಾದ ಚಟ್ನಿ ಸೇವಿಸಲಾಗುತ್ತದೆ.

ಕೆಂಪಿರುವೆ ಚಟ್ನಿ ಕೊರೊನಾಕ್ಕೆ ಲಸಿಕೆ ಆಗುತ್ತಾ? ಆಯುಷ್​ ಸಚಿವಾಲಯದಿಂದ ಶೀಘ್ರದಲ್ಲೇ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Jan 02, 2021 | 1:06 PM

Share

ಭುವನೇಶ್ವರ: ಕೆಂಪಿರುವೆ ಮತ್ತು ಅವುಗಳ ಮೊಟ್ಟೆಯಿಂದ ತಯಾರಿಸಲಾಗುವ ಚಟ್ನಿ ಕೊರೊನಾಕ್ಕೆ ಮದ್ದಾಗಲಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಕುರಿತು ಶೀಘ್ರದಲ್ಲಿಯೇ ಆಯುಷ್​ ಸಚಿವಾಲಯ ಸ್ಪಷ್ಟನೆ ನೀಡಲಿದೆ. ಈ ಕುರಿತು ಒಡಿಶಾ ಹೈಕೋರ್ಟ್ ಆಯುಷ್​ ಸಚಿವಾಲಯ ಹಾಗೂ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿಗೆ ನಿರ್ದೇಶನ ನೀಡಿದ್ದು, 3 ತಿಂಗಳೊಳಗೆ ಮಾಹಿತಿ ನೀಡುವಂತೆ ತಿಳಿಸಿದೆ.

ಕೆಂಪಿರುವೆ ಚಟ್ನಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುತ್ತದೆ ಎಂದು ಕಳೆದ ಜೂನ್​ ತಿಂಗಳಲ್ಲಿ ಇಂಜಿನಿಯರ್​ ಮತ್ತು ಸಂಶೋಧಕ ನಯಾಧರ್ ಪಡಿಯಾಲ್ ಪ್ರತಿಪಾದಿಸಿದ್ದರು. ಒಡಿಶಾ ಮತ್ತು ಛತ್ತೀಸ್​ಗಡ ರಾಜ್ಯಗಳಲ್ಲಿ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಔಷಧಿಯಾಗಿ ಕೆಂಪಿರುವೆ ಮತ್ತು ಹಸಿಮೆಣಸನ್ನು ಹಾಕಿ ಮಾಡಲಾದ ಚಟ್ನಿ ಸೇವಿಸಲಾಗುತ್ತದೆ. ಆದ್ದರಿಂದ ಇದು ಕೊರೊನಾಕ್ಕೂ ರಾಮಬಾಣ ಎಂದು ಹೇಳಿದ್ದರು.

ಕೆಂಪಿರುವೆ ಚಟ್ನಿಯಲ್ಲಿ ಫಾರ್ಮಿಕ್ ಆ್ಯಸಿಡ್, ಪ್ರೋಟೀನ್, ಕ್ಯಾಲ್ಸಿಯಂ, ವಿಟಮಿನ್​ ಬಿ12, ಜಿಂಕ್ ಮತ್ತು ಕಬ್ಬಿಣಾಂಶ ಅಧಿಕವಾಗಿರುತ್ತದೆ. ಇದು ಆರೋಗ್ಯ ವರ್ಧನೆಗೆ ಸಹಕಾರಿ ಮತ್ತು ಕೊವಿಡ್​ ಕಾಯಿಲೆಗೆ ಪರಿಣಾಮಕಾರಿ ಮದ್ದು ಎಂಬ ವಿಷಯದ ಕುರಿತು ನ್ಯಾಯಾಲಯದಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದರು. ಇದೀಗ ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡಲು ಆಯುಷ್ ಸಚಿವಾಲಯಕ್ಕೆ ಒಡಿಶಾ ಹೈಕೋರ್ಟ್ ಸೂಚನೆ ನೀಡಿದೆ.

ಕೊರೊನಾದಿಂದ ಕಂಗೆಟ್ಟ ವರ್ಷದಲ್ಲಿ ಸೋಂಕಿಗಿಂತಲೂ ವೇಗವಾಗಿ ಹರಡಿದ್ದು ಕೋವಿಡ್-19 ರೋಗದ ಬಗ್ಗೆ ತಪ್ಪು ಮಾಹಿತಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ