AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ವ್ಯಕ್ತಿಯ ಖಾಸಗಿ ಅಂಗವನ್ನು ಕತ್ತರಿಸಿ ಹತ್ಯೆ ಮಾಡಿ, ಅಣೆಕಟ್ಟಿಗೆ ಎಸೆದ ಜನ

ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಗ್ರಾಮಸ್ಥರು ಆ ವ್ಯಕ್ತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಆತನ ಜನನಾಂಗವನ್ನು ಕತ್ತರಿಸಿ, ನಂತರ ಶವವನ್ನು ಹತ್ತಿರದ ಹರಭಂಗಿ ಅಣೆಕಟ್ಟಿಗೆ ಎಸೆದಿದ್ದಾರೆ. ಭಾನುವಾರ ಬೆಳಗ್ಗೆ ಜಲಾಶಯದಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಎರಡು ವಾರಗಳ ಹಿಂದೆ ನಡೆದ ಮಹಿಳೆಯೊಬ್ಬರ ಸಾವಿಗೆ ಈತ ಮಾಡಿದ್ದ ಮಾಟಮಂತ್ರವೇ ಕಾರಣ ಎಂದು ಗ್ರಾಮಸ್ಥರು ಶಂಕಿಸಿದ್ದರು.

ಒಡಿಶಾ: ವ್ಯಕ್ತಿಯ ಖಾಸಗಿ ಅಂಗವನ್ನು ಕತ್ತರಿಸಿ ಹತ್ಯೆ ಮಾಡಿ, ಅಣೆಕಟ್ಟಿಗೆ ಎಸೆದ ಜನ
ಕ್ರೈಂ
ನಯನಾ ರಾಜೀವ್
|

Updated on: Aug 04, 2025 | 7:55 AM

Share

ಒಡಿಶಾ, ಆಗಸ್ಟ್​ 04: ವ್ಯಕ್ತಿಯ ಖಾಸಗಿ ಅಂಗವನ್ನು ಕತ್ತರಿಸಿ ಕೊಲೆ ಮಾಡಿ ಅಣೆಕಟ್ಟಿಗೆ ಎಸೆದಿರುವ ಘಟನೆ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ನಡೆದಿದೆ. ಮಾಟಮಂತ್ರ(Witchcraft )ದ ಶಂಕೆ ವ್ಯಕ್ತವಾಗಿದೆ. ಗುಂಪೊಂದು 35 ವರ್ಷದ ವ್ಯಕ್ತಿಯನ್ನು ಕೊಂದು ಅವರ ಖಾಸಗಿ ಭಾಗಗಳನ್ನು ವಿರೂಪಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗ್ರಾಮಸ್ಥರು ಆ ವ್ಯಕ್ತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಆತನ ಜನನಾಂಗವನ್ನು ಕತ್ತರಿಸಿ, ನಂತರ ಶವವನ್ನು ಹತ್ತಿರದ ಹರಭಂಗಿ ಅಣೆಕಟ್ಟಿಗೆ ಎಸೆದಿದ್ದಾರೆ. ಭಾನುವಾರ ಬೆಳಗ್ಗೆ ಜಲಾಶಯದಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಎರಡು ವಾರಗಳ ಹಿಂದೆ ನಡೆದ ಮಹಿಳೆಯೊಬ್ಬರ ಸಾವಿಗೆ ಈತ ಮಾಡಿದ್ದ ಮಾಟಮಂತ್ರವೇ ಕಾರಣ ಎಂದು ಗ್ರಾಮಸ್ಥರು ಶಂಕಿಸಿದ್ದರು. ಮೋಹನ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಮಲಸಪದಾರ್ ಗ್ರಾಮದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರ: ಭಕ್ತರಿಗೆ ಕೊಳಕು ಚಪ್ಪಲಿಯಿಂದ ಒದ್ದು, ತನ್ನ ಮೂತ್ರ ಕುಡಿಸುವ ನಕಲಿ ಬಾಬಾ

ಜಿ ಉದಯಗಿರಿಯ ಉಪವಿಭಾಗೀಯ ಪೊಲೀಸ್ ಅಧಿಕಾರಿ ಸುರೇಶ್ ಚಂದ್ರ ತ್ರಿಪಾಠಿ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ 14 ಗ್ರಾಮಸ್ಥರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಸ್ಥಳೀಯರಿಂದ ಬೆದರಿಕೆ ಬಂದ ನಂತರ ಆ ವ್ಯಕ್ತಿ ತನ್ನ ಕುಟುಂಬದೊಂದಿಗೆ ಗ್ರಾಮವನ್ನು ತೊರೆದು ಗಂಜಾಂ ಜಿಲ್ಲೆಯ ತನ್ನ ಮಾವನ ಮನೆಗೆ ಹೋಗಿದ್ದ. ತನ್ನ ಜಾನುವಾರುಗಳನ್ನು ನೋಡಿಕೊಳ್ಳಲು ತನ್ನ ಅತ್ತಿಗೆ ಬಳಿ ಕೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆ ವ್ಯಕ್ತಿ ಶನಿವಾರ ತನ್ನ ದನ ಮತ್ತು ಮೇಕೆಗಳನ್ನು ತೆಗೆದುಕೊಂಡು ಹೋಗಲು ಗ್ರಾಮಕ್ಕೆ ಹಿಂತಿರುಗಿದ್ದಾಗ ಆತನನ್ನು ಅಪಹರಿಸಿ ಹತ್ಯೆ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್