AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ವ್ಯಕ್ತಿಯ ಖಾಸಗಿ ಅಂಗವನ್ನು ಕತ್ತರಿಸಿ ಹತ್ಯೆ ಮಾಡಿ, ಅಣೆಕಟ್ಟಿಗೆ ಎಸೆದ ಜನ

ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಗ್ರಾಮಸ್ಥರು ಆ ವ್ಯಕ್ತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಆತನ ಜನನಾಂಗವನ್ನು ಕತ್ತರಿಸಿ, ನಂತರ ಶವವನ್ನು ಹತ್ತಿರದ ಹರಭಂಗಿ ಅಣೆಕಟ್ಟಿಗೆ ಎಸೆದಿದ್ದಾರೆ. ಭಾನುವಾರ ಬೆಳಗ್ಗೆ ಜಲಾಶಯದಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಎರಡು ವಾರಗಳ ಹಿಂದೆ ನಡೆದ ಮಹಿಳೆಯೊಬ್ಬರ ಸಾವಿಗೆ ಈತ ಮಾಡಿದ್ದ ಮಾಟಮಂತ್ರವೇ ಕಾರಣ ಎಂದು ಗ್ರಾಮಸ್ಥರು ಶಂಕಿಸಿದ್ದರು.

ಒಡಿಶಾ: ವ್ಯಕ್ತಿಯ ಖಾಸಗಿ ಅಂಗವನ್ನು ಕತ್ತರಿಸಿ ಹತ್ಯೆ ಮಾಡಿ, ಅಣೆಕಟ್ಟಿಗೆ ಎಸೆದ ಜನ
ಕ್ರೈಂ
ನಯನಾ ರಾಜೀವ್
|

Updated on: Aug 04, 2025 | 7:55 AM

Share

ಒಡಿಶಾ, ಆಗಸ್ಟ್​ 04: ವ್ಯಕ್ತಿಯ ಖಾಸಗಿ ಅಂಗವನ್ನು ಕತ್ತರಿಸಿ ಕೊಲೆ ಮಾಡಿ ಅಣೆಕಟ್ಟಿಗೆ ಎಸೆದಿರುವ ಘಟನೆ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ನಡೆದಿದೆ. ಮಾಟಮಂತ್ರ(Witchcraft )ದ ಶಂಕೆ ವ್ಯಕ್ತವಾಗಿದೆ. ಗುಂಪೊಂದು 35 ವರ್ಷದ ವ್ಯಕ್ತಿಯನ್ನು ಕೊಂದು ಅವರ ಖಾಸಗಿ ಭಾಗಗಳನ್ನು ವಿರೂಪಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗ್ರಾಮಸ್ಥರು ಆ ವ್ಯಕ್ತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಆತನ ಜನನಾಂಗವನ್ನು ಕತ್ತರಿಸಿ, ನಂತರ ಶವವನ್ನು ಹತ್ತಿರದ ಹರಭಂಗಿ ಅಣೆಕಟ್ಟಿಗೆ ಎಸೆದಿದ್ದಾರೆ. ಭಾನುವಾರ ಬೆಳಗ್ಗೆ ಜಲಾಶಯದಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಎರಡು ವಾರಗಳ ಹಿಂದೆ ನಡೆದ ಮಹಿಳೆಯೊಬ್ಬರ ಸಾವಿಗೆ ಈತ ಮಾಡಿದ್ದ ಮಾಟಮಂತ್ರವೇ ಕಾರಣ ಎಂದು ಗ್ರಾಮಸ್ಥರು ಶಂಕಿಸಿದ್ದರು. ಮೋಹನ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಮಲಸಪದಾರ್ ಗ್ರಾಮದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರ: ಭಕ್ತರಿಗೆ ಕೊಳಕು ಚಪ್ಪಲಿಯಿಂದ ಒದ್ದು, ತನ್ನ ಮೂತ್ರ ಕುಡಿಸುವ ನಕಲಿ ಬಾಬಾ

ಜಿ ಉದಯಗಿರಿಯ ಉಪವಿಭಾಗೀಯ ಪೊಲೀಸ್ ಅಧಿಕಾರಿ ಸುರೇಶ್ ಚಂದ್ರ ತ್ರಿಪಾಠಿ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ 14 ಗ್ರಾಮಸ್ಥರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಸ್ಥಳೀಯರಿಂದ ಬೆದರಿಕೆ ಬಂದ ನಂತರ ಆ ವ್ಯಕ್ತಿ ತನ್ನ ಕುಟುಂಬದೊಂದಿಗೆ ಗ್ರಾಮವನ್ನು ತೊರೆದು ಗಂಜಾಂ ಜಿಲ್ಲೆಯ ತನ್ನ ಮಾವನ ಮನೆಗೆ ಹೋಗಿದ್ದ. ತನ್ನ ಜಾನುವಾರುಗಳನ್ನು ನೋಡಿಕೊಳ್ಳಲು ತನ್ನ ಅತ್ತಿಗೆ ಬಳಿ ಕೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆ ವ್ಯಕ್ತಿ ಶನಿವಾರ ತನ್ನ ದನ ಮತ್ತು ಮೇಕೆಗಳನ್ನು ತೆಗೆದುಕೊಂಡು ಹೋಗಲು ಗ್ರಾಮಕ್ಕೆ ಹಿಂತಿರುಗಿದ್ದಾಗ ಆತನನ್ನು ಅಪಹರಿಸಿ ಹತ್ಯೆ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ