AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕೆ ಪತ್ರಕರ್ತನನ್ನು ಥಳಿಸಿ, ಆಸ್ಪತ್ರೆಯ ಬೆಡ್​ಗೆ ಕಟ್ಟಿಹಾಕಿದ ಪೊಲೀಸರು

ಪೊಲೀಸರಿಂದ ಹಲ್ಲೆಗೊಳಗಾಗಿದ್ದರಿಂದ ಪತ್ರಕರ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಅವರ ಕಾಲುಗಳನ್ನು ಕೈಕೋಳದಿಂದ ಬಂಧಿಸಿ, ಆಸ್ಪತ್ರೆಯ ಬೆಡ್‌ಗೆ ಕಬ್ಬಿಣದ ಸರಪಳಿಯಿಂದ ಕಟ್ಟಲಾಗಿತ್ತು.

ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕೆ ಪತ್ರಕರ್ತನನ್ನು ಥಳಿಸಿ, ಆಸ್ಪತ್ರೆಯ ಬೆಡ್​ಗೆ ಕಟ್ಟಿಹಾಕಿದ ಪೊಲೀಸರು
ರೋಗಿಯನ್ನು ಆಸ್ಪತ್ರೆಯ ಬೆಡ್​ಗೆ ಕಟ್ಟಿ ಹಾಕಿರುವ ಪೊಲೀಸರು
TV9 Web
| Edited By: |

Updated on: Apr 08, 2022 | 6:37 PM

Share

ಭುವನೇಶ್ವರ: ಭುವನೇಶ್ವರದಲ್ಲಿ ಆಘಾತಕಾರಿ ಘಟನೆಯೊಂದು (Shocking News) ನಡೆದಿದ್ದು, ಭ್ರಷ್ಟಾಚಾರದ ಬಗ್ಗೆ ಸುದ್ದಿ ಪ್ರಕಟಿಸಿದ್ದಕ್ಕಾಗಿ ಒಡಿಶಾದ ಬಾಲಸೋರ್ ಜಿಲ್ಲೆಯ ಪತ್ರಕರ್ತನನ್ನು ಇಲ್ಲಿನ ನೀಲಗಿರಿ ಪೊಲೀಸ್ ಠಾಣೆಯ ಪೊಲೀಸರು ಆಸ್ಪತ್ರೆಯ ಹಾಸಿಗೆಗೆ ಕಟ್ಟಿಹಾಕಿದ್ದಾರೆ. ಬಾಲಸೋರ್‌ನ ಸ್ಥಳೀಯ ಮಾಧ್ಯಮ ಸಂಸ್ಥೆಯೊಂದರ ವರದಿಗಾರ ಲೋಕನಾಥ್ ದಲೇಯ್ ಎಂಬಾತನನ್ನು ಪೋಲೀಸರಿಗೆ ಥಳಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಮೂಲಗಳ ಪ್ರಕಾರ, ಗೃಹರಕ್ಷಕ ದಳದ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬುಧವಾರ ಬೆಳಗ್ಗೆ ನೀಲಗಿರಿ ಪೊಲೀಸರು ಠಾಣೆಗೆ ಕರೆದಿದ್ದರು. ನಂತರ ಪೊಲೀಸ್ ಠಾಣೆಯಲ್ಲಿ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಪೊಲೀಸರಿಂದ ಹಲ್ಲೆಗೊಳಗಾಗಿದ್ದರಿಂದ ಪತ್ರಕರ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಅವರ ಕಾಲುಗಳನ್ನು ಕೈಕೋಳದಿಂದ ಬಂಧಿಸಿ, ಆಸ್ಪತ್ರೆಯ ಬೆಡ್‌ಗೆ ಕಬ್ಬಿಣದ ಸರಪಳಿಯಿಂದ ಕಟ್ಟಲಾಗಿತ್ತು. ಪತ್ರಕರ್ತ ಆಸ್ಪತ್ರೆಯ ಬೆಡ್ ಮೇಲೆ ಬೇಡಿ ಹಾಕಿಕೊಂಡು ಮಲಗಿರುವ ಪತ್ರಕರ್ತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಏ. 4ರಂದು ಗೃಹ ರಕ್ಷಕ ದಳದ ಸಿಬ್ಬಂದಿ ನಿರಂಜನ್ ರಾಣಾ ನೀಲಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕರ್ತವ್ಯದಲ್ಲಿದ್ದಾಗ ಪತ್ರಕರ್ತ ತನ್ನನ್ನು ಅಶ್ಲೀಲ ಭಾಷೆಯಲ್ಲಿ ನಿಂದಿಸಿ, ಹೊಡೆದು, ಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಪತ್ರಕರ್ತನನ್ನು ಪೊಲೀಸ್ ಠಾಣೆಗೆ ಕರೆಸಲಾಯಿತು. ನಂತರ ಸ್ಥಳೀಯ ಪೊಲೀಸರು ಪತ್ರಕರ್ತನನ್ನು ಥಳಿಸಿದ್ದಾರೆ.

ಪೊಲೀಸರ ವಿರುದ್ಧ ವರದಿ ಮಾಡಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಈ ರೀತಿ ಮಾಡಲಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ. ನೀಲಗಿರಿ ಪೊಲೀಸ್ ಠಾಣೆಯ ಎರಡನೇ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಒಡಿಶಾದ ಹಿರಿಯ ಪತ್ರಕರ್ತನ ವಿರುದ್ಧ ನಡೆದ ಪೊಲೀಸ್ ದೌರ್ಜನ್ಯವನ್ನು ಪತ್ರಕರ್ತರು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ, ಇದಕ್ಕೆ ಕಾರಣರಾದ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಈ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿದೆ. ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ ಭೇದಗಳನ್ನು ಗೌರವಿಸಬೇಕು. ಆದರೆ ಅಪರಾಧಿಯಂತೆ ಪತ್ರಕರ್ತನಿಗೆ ಕೈಕೋಳ ಹಾಕುವುದು ಸ್ವಸ್ಥ ಸಮಾಜದಲ್ಲಿ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.

ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಈ ಕೃತ್ಯದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಧರ್ಮೇಂದ್ರ ಪ್ರಧಾನ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Crime News: ರಾತ್ರಿ ಬಸ್​ನಲ್ಲಿ ಮೈ-ಕೈ ಮುಟ್ಟಿದವನಿಗೆ ಪಿನ್​ನಲ್ಲಿ ಚುಚ್ಚಿ, ಪೊಲೀಸ್ ಠಾಣೆಗೆ ಎಳೆದೊಯ್ದ ಮಹಿಳೆ

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ; ಬಳಿಕ ಮನೆ ಬಳಿ ಶವ ಎಸೆದು ಪರಾರಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ