AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಜೈಲಿನಲ್ಲಿ 20 ವರ್ಷ ಪರದಾಟ; ಭಾರತಕ್ಕೆ ಮರಳಿ.. ಮನೆಯವರಿಗಾಗಿ ಹುಡುಕಾಟ!

ಭುವನೇಶ್ವರ್: ಇಪ್ಪತ್ತು ವರ್ಷ ಪಾಕಿಸ್ತಾನದ ಜೈಲಿನಲ್ಲಿದ್ದ ಭಾರತೀಯರೊಬ್ಬರು ತಾಯ್ನಾಡಿಗೆ ಮರಳಿದ ನಂತರ ತನ್ನವರಿಗಾಗಿ ಭಾರೀ ಹುಡುಕಾಟ ನಡೆಸಿ, ಕೊನೆಗೂ ಮನೆಯನ್ನು ಸೇರಿಕೊಂಡಿದ್ಧಾರೆ. ಒಡಿಶಾದ ಸುಂದರ್​ಘರ್ ಜಿಲ್ಲೆಯ 50 ವರ್ಷದ ವ್ಯಕ್ತಿಯನ್ನು ಬಿರ್ಜು ಕುಲ್ಲು ಎಂದು ಗುರುತಿಸಲಾಗಿದೆ. ಅಚಾನಕ್​ ಆಗಿ ದೇಶದ ಗಡಿ ದಾಟಿದ್ದ ಬಿರ್ಜು ಕುಲ್ಲುನನ್ನು ಪಾಕ್ ರಕ್ಷಣಾ ಪಡೆ ಬಂಧಿಸಿ, ಲಾಹೋರ್ ಜೈಲಿನಲ್ಲಿ ಇರಿಸಿತ್ತು. 20 ವರ್ಷಗಳನ್ನು ಜೈಲಿನಲ್ಲಿ ಕಳೆಯುವಂತೆ ಮಾಡಿತ್ತು. ಕಳೆದ ಅಕ್ಟೋಬರ್​ನಲ್ಲಿ ಶಿಕ್ಷೆಯ ಅವಧಿ ಪೂರ್ಣಗೊಂಡ ನಂತರ, ಪಾಕ್ ಪಡೆ ಆತನನ್ನು ಭಾರತಕ್ಕೆ […]

ಪಾಕ್ ಜೈಲಿನಲ್ಲಿ 20 ವರ್ಷ ಪರದಾಟ; ಭಾರತಕ್ಕೆ ಮರಳಿ.. ಮನೆಯವರಿಗಾಗಿ ಹುಡುಕಾಟ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 14, 2020 | 3:31 PM

Share

ಭುವನೇಶ್ವರ್: ಇಪ್ಪತ್ತು ವರ್ಷ ಪಾಕಿಸ್ತಾನದ ಜೈಲಿನಲ್ಲಿದ್ದ ಭಾರತೀಯರೊಬ್ಬರು ತಾಯ್ನಾಡಿಗೆ ಮರಳಿದ ನಂತರ ತನ್ನವರಿಗಾಗಿ ಭಾರೀ ಹುಡುಕಾಟ ನಡೆಸಿ, ಕೊನೆಗೂ ಮನೆಯನ್ನು ಸೇರಿಕೊಂಡಿದ್ಧಾರೆ. ಒಡಿಶಾದ ಸುಂದರ್​ಘರ್ ಜಿಲ್ಲೆಯ 50 ವರ್ಷದ ವ್ಯಕ್ತಿಯನ್ನು ಬಿರ್ಜು ಕುಲ್ಲು ಎಂದು ಗುರುತಿಸಲಾಗಿದೆ.

ಅಚಾನಕ್​ ಆಗಿ ದೇಶದ ಗಡಿ ದಾಟಿದ್ದ ಬಿರ್ಜು ಕುಲ್ಲುನನ್ನು ಪಾಕ್ ರಕ್ಷಣಾ ಪಡೆ ಬಂಧಿಸಿ, ಲಾಹೋರ್ ಜೈಲಿನಲ್ಲಿ ಇರಿಸಿತ್ತು. 20 ವರ್ಷಗಳನ್ನು ಜೈಲಿನಲ್ಲಿ ಕಳೆಯುವಂತೆ ಮಾಡಿತ್ತು. ಕಳೆದ ಅಕ್ಟೋಬರ್​ನಲ್ಲಿ ಶಿಕ್ಷೆಯ ಅವಧಿ ಪೂರ್ಣಗೊಂಡ ನಂತರ, ಪಾಕ್ ಪಡೆ ಆತನನ್ನು ಭಾರತಕ್ಕೆ ಹಸ್ತಾಂತರಿಸಿದೆ.

ಹೋಟೆಲ್ ಕೆಲಸಕ್ಕೆಂದು ಹೋಗಿದ್ದ! ಹೋಟೆಲ್ ಕೆಲಸಕ್ಕೆಂದು ಜಾರ್ಖಂಡ್​ಗೆ ಹೋಗಿದ್ದ ಬಿರ್ಜು ನಂತರ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಮನೆಯವರಿಗೆ ಅವನು ಎಲ್ಲಿದ್ದಾನೆ, ಹೇಗಿದ್ದಾನೆ ಎಂಬ ಬಗ್ಗೆ ಯಾವುದೇ ಸುಳಿವಿರಲಿಲ್ಲ. ಆತ ಮರಳಿ ಬರುತ್ತಾನೆ ಎಂಬ ಆಸೆಯನ್ನು ಎಲ್ಲರೂ ಕಳೆದುಕೊಂಡಿದ್ದರು.

ತಾನು ಹೇಗೆ ಗಡಿ ದಾಟಿದೆ ಎಂಬ ಬಗ್ಗೆ ಬಿರ್ಜುಗೆ ಸ್ಪಷ್ಟ ಅರಿವಿಲ್ಲ. ಯೂನಿಫಾರ್ಮ್ ಧರಿಸಿದ್ದವರು ಬಂಧಿಸಿದರು ಎಂದಷ್ಟೇ ಆತ ಮಾಹಿತಿ ನೀಡಿದ್ದಾನೆ ಎಂದು ಸುಂದರ್​ಘರ್ ಪೊಲೀಸರು ಹೇಳಿದ್ದಾರೆ. ಮನೆಯವರಿಗಾಗಿ ಹುಡುಕಾಟ ನಡೆಸುತ್ತಿದ್ದವನಿಗೆ ಪೊಲೀಸರು ಸಹಾಯ ಮಾಡಿದ್ದು, ಇದೀಗ ಮನೆ ತಲುಪಲು ಕಾರಣರಾಗಿದ್ದಾರೆ. ಶುಕ್ರವಾರ ಸುಂದರ್​ಘರ್​ನ ಕುತ್ರಾ ಗ್ರಾಮದಲ್ಲಿ ಆತನಿಗೆ ಭಾವನಾತ್ಮಕ ಸ್ವಾಗತ ದೊರಕಿದೆ.

‘ಬಿರ್ಜು ಮರಳಿ ಬಂದದ್ದು ತುಂಬಾ ಸಂತೋಷವಾಗಿದೆ. ಇದು ನಮಗೆಲ್ಲಾ ಹೊಸ ಬದುಕು’ ಎಂದು ಆತನ ಸಹೋದರಿ ಹೇಳಿದ್ದಾರೆ. ‘ನನ್ನ ಬಂಧುಗಳನ್ನು, ನೆಂಟರನ್ನು, ಗೆಳೆಯರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇನೆ’ ಎಂದು ಬಿರ್ಜು ಕುಲ್ಲು ಹೇಳಿಕೊಂಡಿದ್ಧಾನೆ. ಆತನ ಪುನರ್ವಸತಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡುವುದಾಗಿ ಕುತ್ರಾ ಗ್ರಾಮದ ಅಭಿವೃದ್ಧಿ ಅಧಿಕಾರಿ ಮಾನಸ್ ರಂಜನ್ ರೇ ಇದೇ ವೇಳೆ ತಿಳಿಸಿದ್ದಾರೆ.

Published On - 3:23 pm, Sat, 14 November 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!