ಪೊಲೀಸ್​ ಎಂದು ಸುಳ್ಳು ಹೇಳಿ ಮಹಿಳೆಯನ್ನು ಮದುವೆಯಾಗಿ ವಂಚಿಸಿದ ವ್ಯಕ್ತಿಯ ಬಂಧನ

ತಾನು ಪೊಲೀಸ್ ಇನ್​ಸ್ಪೆಕ್ಟರ್ ಎಂದು ಸುಳ್ಳು ಹೇಳಿ ಮದುವೆಯಾಗಿ ವಂಚಿಸಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಆರೋಪಿ ಸುಭಾಷ್ ಚಂದ್ರ ಕನ್ಹರ್ ಎಂಬಾತ ಮಹಿಳೆಗೆ ಫೇಸ್ ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದು, ಆಕೆ ಎಕ್ಸೆಪ್ಟ್​ ಮಾಡಿದ್ದಳು, ವ್ಯಕ್ತಿ ತನ್ನನ್ನು ಮನೋಜ್ ಕುಮಾರ್ ಮಿಶ್ರಾ ಎಂದು ಪರಿಚಯಿಸಿಕೊಂಡಿದ್ದ.

ಪೊಲೀಸ್​ ಎಂದು ಸುಳ್ಳು ಹೇಳಿ ಮಹಿಳೆಯನ್ನು ಮದುವೆಯಾಗಿ ವಂಚಿಸಿದ ವ್ಯಕ್ತಿಯ ಬಂಧನ
ಮದುವೆ
Follow us
|

Updated on: Sep 02, 2024 | 8:18 AM

ಪೊಲೀಸ್​ ಇನ್​ಸ್ಪೆಕ್ಟರ್​ ಎಂದು ಹೇಳಿಕೊಂಡು ಮಹಿಳೆಯನ್ನು ವಂಚಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಆರೋಪಿ ಸುಭಾಷ್ ಚಂದ್ರ ಕನ್ಹರ್ ಎಂಬಾತ ಮಹಿಳೆಗೆ ಫೇಸ್ ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದು, ಆಕೆ ಎಕ್ಸೆಪ್ಟ್​ ಮಾಡಿದ್ದಳು, ವ್ಯಕ್ತಿ ತನ್ನನ್ನು ಮನೋಜ್ ಕುಮಾರ್ ಮಿಶ್ರಾ ಎಂದು ಪರಿಚಯಿಸಿಕೊಂಡಿದ್ದ. ಆಕೆಯ ಜತೆ ಸ್ನೇಹ ಬೆಳಸಿದ್ದ, ತಾನು ಪೊಲೀಸ್​ ಇನ್​ಸ್ಪೆಕ್ಟರ್​ ಎಂದು ಹೇಳಿದ್ದಾನೆ. ಅಂತಿಮವಾಗಿ ವಿವಾಹವಾಗಿದ್ದಾರೆ. ಕನ್ಹರ್​ ಮನೆಯನ್ನು ಬಾಡಿಗೆಗೆ ಪಡೆದಿದ್ದ.

ಹಲವು ಬಾರಿ ಮನವಿ ಮಾಡಿದರೂ ಆರೋಪಿಯ ಮೂಲ ಮನೆಗೆ ಮಹಿಳೆಯನ್ನು ಕರೆದುಕೊಂಡು ಹೋಗದ ಹಿನ್ನೆಲೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ವ್ಯಕ್ತಿಯ ವಾಹನ ಸಂಖ್ಯೆಯನ್ನು ತನಿಖೆ ಮಾಡಿದ್ದು, ಅದರ ನಂತರ ಒಡಿಶಾದ ಭದ್ರಕ್‌ನಲ್ಲಿರುವ ಅವನ ಮೂಲ ವಿಳಾಸವನ್ನು ಪತ್ತೆಹಚ್ಚಲು ಸಾಧ್ಯವಾಯಿತು ಮತ್ತು ಪ್ರಕ್ರಿಯೆಯಲ್ಲಿ ಅವನ ನಿಜವಾದ ಗುರುತನ್ನು ತಿಳಿಯಲು ಸಾಧ್ಯವಾಯಿತು ಎಂದು ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ತಪಸ್ ಪ್ರಧಾನ್ ಹೇಳಿದ್ದಾರೆ.

ಮತ್ತಷ್ಟು ಓದಿ: ಪತಿಯನ್ನು ಕೊಂದು ಬಾತ್ ರೂಂನಲ್ಲಿ ಶವ ಹೂತಿಟ್ಟ ಹೆಂಡತಿ; ಕೊಲೆಯ ರಹಸ್ಯ ಬಯಲಾಗಿದ್ದು ಹೇಗೆ?

ತಾನು ವಂಚನೆಗೆ ಒಳಗಾಗಿದ್ದೇನೆ ಎಂದು ತಿಳಿದು ಆಘಾತಕ್ಕೊಳಗಾದ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ನಂತರ, ವ್ಯಕ್ತಿಯನ್ನು ಬಂಧಿಸಲಾಯಿತು. ಕನ್ಹರ್ ಸಂತ್ರಸ್ತೆಯನ್ನು ಮದುವೆಯಾಗುವ ಮುನ್ನ ಇತರ ಇಬ್ಬರು ಮಹಿಳೆಯರನ್ನು ಮದುವೆಯಾಗಿದ್ದ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಕನ್ಹರ್ ಅವರ ವಯಸ್ಸು 55 ಮತ್ತು ಅವರಿಗೆ 25 ವರ್ಷದ ಮಗನಿದ್ದಾನೆ ಎಂದು ಎಸಿಪಿ ಹೇಳಿದ್ದಾರೆ.

ಮಹಿಳೆಯ ಬಳಿ ಹೆಚ್ಚು ಹಣವಿದ್ದ ಹಿನ್ನೆಲೆಯಲ್ಲಿ ಆಕೆಯನ್ನು ಬಲೆಗೆ ಬೀಳಿಸಿಕೊಂಡಿದ್ದಾನೆ. ಆರೋಪಿಯು ಭದ್ರಕ್‌ಗೆ ಸೇರಿದವನಾಗಿದ್ದು, ಫೇಸ್‌ಬುಕ್‌ನಲ್ಲಿ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದ. ತನ್ನನ್ನು ರೂರ್ಕೆಲಾದಲ್ಲಿ ಪೋಸ್ಟ್ ಮಾಡಿದ ಪೊಲೀಸ್ ಇನ್​ಸ್ಪೆಕ್ಟರ್​ ಎಂದು ಪರಿಚಯಿಸಿಕೊಂಡಿದ್ದ ಎಂಬುದಾಗಿ ಮಹಿಳೆ ತಿಳಿಸಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ