AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಎಂದು ಸುಳ್ಳು ಹೇಳಿ ಮಹಿಳೆಯನ್ನು ಮದುವೆಯಾಗಿ ವಂಚಿಸಿದ ವ್ಯಕ್ತಿಯ ಬಂಧನ

ತಾನು ಪೊಲೀಸ್ ಇನ್​ಸ್ಪೆಕ್ಟರ್ ಎಂದು ಸುಳ್ಳು ಹೇಳಿ ಮದುವೆಯಾಗಿ ವಂಚಿಸಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಆರೋಪಿ ಸುಭಾಷ್ ಚಂದ್ರ ಕನ್ಹರ್ ಎಂಬಾತ ಮಹಿಳೆಗೆ ಫೇಸ್ ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದು, ಆಕೆ ಎಕ್ಸೆಪ್ಟ್​ ಮಾಡಿದ್ದಳು, ವ್ಯಕ್ತಿ ತನ್ನನ್ನು ಮನೋಜ್ ಕುಮಾರ್ ಮಿಶ್ರಾ ಎಂದು ಪರಿಚಯಿಸಿಕೊಂಡಿದ್ದ.

ಪೊಲೀಸ್​ ಎಂದು ಸುಳ್ಳು ಹೇಳಿ ಮಹಿಳೆಯನ್ನು ಮದುವೆಯಾಗಿ ವಂಚಿಸಿದ ವ್ಯಕ್ತಿಯ ಬಂಧನ
ಮದುವೆ
ನಯನಾ ರಾಜೀವ್
|

Updated on: Sep 02, 2024 | 8:18 AM

Share

ಪೊಲೀಸ್​ ಇನ್​ಸ್ಪೆಕ್ಟರ್​ ಎಂದು ಹೇಳಿಕೊಂಡು ಮಹಿಳೆಯನ್ನು ವಂಚಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಆರೋಪಿ ಸುಭಾಷ್ ಚಂದ್ರ ಕನ್ಹರ್ ಎಂಬಾತ ಮಹಿಳೆಗೆ ಫೇಸ್ ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದು, ಆಕೆ ಎಕ್ಸೆಪ್ಟ್​ ಮಾಡಿದ್ದಳು, ವ್ಯಕ್ತಿ ತನ್ನನ್ನು ಮನೋಜ್ ಕುಮಾರ್ ಮಿಶ್ರಾ ಎಂದು ಪರಿಚಯಿಸಿಕೊಂಡಿದ್ದ. ಆಕೆಯ ಜತೆ ಸ್ನೇಹ ಬೆಳಸಿದ್ದ, ತಾನು ಪೊಲೀಸ್​ ಇನ್​ಸ್ಪೆಕ್ಟರ್​ ಎಂದು ಹೇಳಿದ್ದಾನೆ. ಅಂತಿಮವಾಗಿ ವಿವಾಹವಾಗಿದ್ದಾರೆ. ಕನ್ಹರ್​ ಮನೆಯನ್ನು ಬಾಡಿಗೆಗೆ ಪಡೆದಿದ್ದ.

ಹಲವು ಬಾರಿ ಮನವಿ ಮಾಡಿದರೂ ಆರೋಪಿಯ ಮೂಲ ಮನೆಗೆ ಮಹಿಳೆಯನ್ನು ಕರೆದುಕೊಂಡು ಹೋಗದ ಹಿನ್ನೆಲೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ವ್ಯಕ್ತಿಯ ವಾಹನ ಸಂಖ್ಯೆಯನ್ನು ತನಿಖೆ ಮಾಡಿದ್ದು, ಅದರ ನಂತರ ಒಡಿಶಾದ ಭದ್ರಕ್‌ನಲ್ಲಿರುವ ಅವನ ಮೂಲ ವಿಳಾಸವನ್ನು ಪತ್ತೆಹಚ್ಚಲು ಸಾಧ್ಯವಾಯಿತು ಮತ್ತು ಪ್ರಕ್ರಿಯೆಯಲ್ಲಿ ಅವನ ನಿಜವಾದ ಗುರುತನ್ನು ತಿಳಿಯಲು ಸಾಧ್ಯವಾಯಿತು ಎಂದು ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ತಪಸ್ ಪ್ರಧಾನ್ ಹೇಳಿದ್ದಾರೆ.

ಮತ್ತಷ್ಟು ಓದಿ: ಪತಿಯನ್ನು ಕೊಂದು ಬಾತ್ ರೂಂನಲ್ಲಿ ಶವ ಹೂತಿಟ್ಟ ಹೆಂಡತಿ; ಕೊಲೆಯ ರಹಸ್ಯ ಬಯಲಾಗಿದ್ದು ಹೇಗೆ?

ತಾನು ವಂಚನೆಗೆ ಒಳಗಾಗಿದ್ದೇನೆ ಎಂದು ತಿಳಿದು ಆಘಾತಕ್ಕೊಳಗಾದ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ನಂತರ, ವ್ಯಕ್ತಿಯನ್ನು ಬಂಧಿಸಲಾಯಿತು. ಕನ್ಹರ್ ಸಂತ್ರಸ್ತೆಯನ್ನು ಮದುವೆಯಾಗುವ ಮುನ್ನ ಇತರ ಇಬ್ಬರು ಮಹಿಳೆಯರನ್ನು ಮದುವೆಯಾಗಿದ್ದ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಕನ್ಹರ್ ಅವರ ವಯಸ್ಸು 55 ಮತ್ತು ಅವರಿಗೆ 25 ವರ್ಷದ ಮಗನಿದ್ದಾನೆ ಎಂದು ಎಸಿಪಿ ಹೇಳಿದ್ದಾರೆ.

ಮಹಿಳೆಯ ಬಳಿ ಹೆಚ್ಚು ಹಣವಿದ್ದ ಹಿನ್ನೆಲೆಯಲ್ಲಿ ಆಕೆಯನ್ನು ಬಲೆಗೆ ಬೀಳಿಸಿಕೊಂಡಿದ್ದಾನೆ. ಆರೋಪಿಯು ಭದ್ರಕ್‌ಗೆ ಸೇರಿದವನಾಗಿದ್ದು, ಫೇಸ್‌ಬುಕ್‌ನಲ್ಲಿ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದ. ತನ್ನನ್ನು ರೂರ್ಕೆಲಾದಲ್ಲಿ ಪೋಸ್ಟ್ ಮಾಡಿದ ಪೊಲೀಸ್ ಇನ್​ಸ್ಪೆಕ್ಟರ್​ ಎಂದು ಪರಿಚಯಿಸಿಕೊಂಡಿದ್ದ ಎಂಬುದಾಗಿ ಮಹಿಳೆ ತಿಳಿಸಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’