AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ತೋಟದಲ್ಲಿ ಬೆಳೆದ ಮಾವಿನ ಹಣ್ಣಿನ ಚಿತ್ರಗಳನ್ನು ಎಲ್ಲೆಡೆ ಹಂಚಿಕೊಂಡ ಮಾಲೀಕ, ಮರುದಿನವೇ 2.5 ಲಕ್ಷ ಮೌಲ್ಯದ ಹಣ್ಣುಗಳು ಕಳವು

ಮಾವು(Mango) ಮಾರಾಟಕ್ಕಿದೆ ಎಂದಾಗಲಿ, ಮರದ ಚಿತ್ರಗಳನ್ನು ಹಾಕಿ ಈ ಹಣ್ಣಿಗೆ ಒಳ್ಳೆಯ ಬೆಲೆ ಇದೆ ಎಂದು ಬರೆಯುವುದಾಗಲೀ ಮಾಡಬೇಡಿ, ನೀವು ಬೆಳೆದ ಹಣ್ಣುಗಳು ಕೂಡ ಕಳವಾಗಬಹುದು.

ತಮ್ಮ ತೋಟದಲ್ಲಿ ಬೆಳೆದ ಮಾವಿನ ಹಣ್ಣಿನ ಚಿತ್ರಗಳನ್ನು ಎಲ್ಲೆಡೆ ಹಂಚಿಕೊಂಡ ಮಾಲೀಕ, ಮರುದಿನವೇ 2.5 ಲಕ್ಷ ಮೌಲ್ಯದ ಹಣ್ಣುಗಳು ಕಳವು
ಮಾವು
ನಯನಾ ರಾಜೀವ್
|

Updated on: Jun 20, 2023 | 8:52 AM

Share

ಮಾವು(Mango) ಮಾರಾಟಕ್ಕಿದೆ ಎಂದಾಗಲಿ, ಮರದ ಚಿತ್ರಗಳನ್ನು ಹಾಕಿ ಈ ಹಣ್ಣಿಗೆ ಒಳ್ಳೆಯ ಬೆಲೆ ಇದೆ ಎಂದು ಬರೆಯುವುದಾಗಲೀ ಮಾಡಬೇಡಿ, ನೀವು ಬೆಳೆದ ಹಣ್ಣುಗಳು ಕೂಡ ಕಳವಾಗಬಹುದು. ಒಡಿಶಾದ ನುವಾಪಾಡಾ ಜಿಲ್ಲೆಯಲ್ಲಿ ನಡೆದ ಘಟನೆ ಇದಾಗಿದ್ದು, ಮಾಲೀಕರು ಸಾಮಾಜಿಕ ಜಾಲತಾಣಗಳಲ್ಲಿ ಹಣ್ಣಿನ ಫೋಟೊಗಳನ್ನು ಹಾಕಿದ ಮರುದಿನವೇ 2.5 ಲಕ್ಷ ರೂಪಾಯಿ ಬೆಲೆಬಾಳುವ ಹಣ್ಣುಗಳ ಕಳ್ಳತನವಾಗಿದೆ.

ರೈತ ಲಕ್ಷ್ಮೀನಾರಾಯಣ ಎಂಬುವವರು ತಮ್ಮ ಜಮೀನಿನಲ್ಲಿ 38ಕ್ಕೂ ಹೆಚ್ಚು ಬಗೆಯ ಮಾವುಗಳನ್ನು ಬೆಳೆಸಿದ್ದರು. ಮಾವು ಬೆಳೆ ಉತ್ತಮವಾಗಿದೆ ಈ ಬಾರಿ ಒಳ್ಳೆಯ ಲಾಭ ಪಡೆಯಬಹುದು ಎನ್ನುವ ಹಂಬಲದಲ್ಲಿದ್ದರು. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಹಂಚಿಕೊಂಡಿದ್ದರು.

ಮತ್ತಷ್ಟು ಓದಿ: Ramanagara News: ಅಕಾಲಿಕ ಮಳೆಯಿಂದ ಮಾವು ಬೆಳೆ ನಾಶ; ಸಂಕಷ್ಟದಲ್ಲಿ ಬೆಳೆಗಾರರು

ಅಷ್ಟೇ ಅಲ್ಲದೆ ಮರದ ಫೋಟೊವನ್ನು ಕೂಡ ಹಾಕಿ ಈ ಮರದ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇದೆ ಎಂದೂ ಕೂಡ ಬರೆದಿದ್ದರು. ಇದನ್ನು ನೋಡಿದ ಕಳ್ಳರು ಅದೇ ಮರಗಳಿಂದ ಹಣ್ಣನ್ನು ಕದ್ದಿದ್ದಾರೆ.

ಅವರ ಜಮೀನಿನಲ್ಲಿ ಒಂದೇ ದಿನದಲ್ಲಿ ಜಮೀನಿನಲ್ಲಿದ್ದ ನಾಲ್ಕು ಮರಗಳಲ್ಲಿನ ಹಣ್ಣನ್ನು ಕದ್ದು ಪರಾರಿಯಾಗಿದ್ದಾರೆ. ಈ ಕಳ್ಳತನವು ಕೃಷಿ ಉತ್ಪನ್ನಗಳ ಸುರಕ್ಷತೆ ಹಾಗೂ ಸ್ಥಳೀಯ ಆರ್ಥಿಕತೆಯ ಮೇಲೆ ಬೀರಬಹುದಾದ ಪರಿಣಾಮದ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ