AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha: ಕಾಲಿನಲ್ಲಿ ಕ್ಯಾಮೆರಾ, ಮೈಕ್ರೋಚಿಪ್‌ ಹೊಂದಿದ್ದ ಪಾರಿವಾಳ ಪತ್ತೆ, ತನಿಖೆಗೆ ಆದೇಶ

ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಮೀನುಗಾರಿಕಾ ದೋಣಿಯ ಮೇಲೆ ಕುಳಿತಿದ್ದ ಶಂಕಿತ ಪಾರಿವಾಳವೊಂದು ಪತ್ತೆಯಾಗಿದೆ.

Odisha: ಕಾಲಿನಲ್ಲಿ ಕ್ಯಾಮೆರಾ, ಮೈಕ್ರೋಚಿಪ್‌ ಹೊಂದಿದ್ದ ಪಾರಿವಾಳ ಪತ್ತೆ, ತನಿಖೆಗೆ ಆದೇಶ
ಶಂಕಿತ ಪಾರಿವಾಳ
ಅಕ್ಷಯ್​ ಪಲ್ಲಮಜಲು​​
|

Updated on:Mar 09, 2023 | 11:16 AM

Share

ಭುವನೇಶ್ವರ: ಒಡಿಶಾ(Odisha) ಜಗತ್‌ಸಿಂಗ್‌ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಮೀನುಗಾರಿಕಾ ದೋಣಿಯ ಮೇಲೆ ಕುಳಿತಿದ್ದ ಶಂಕಿತ ಪಾರಿವಾಳವೊಂದು ಪತ್ತೆಯಾಗಿದೆ. ಈ ಪಾರಿವಾಳದ ಕಾಲಿಗೆ ಕ್ಯಾಮೆರಾ ಮತ್ತು ಮೈಕ್ರೋಚಿಪ್‌ನಂತೆ ಕಾಣುವ ಸಾಧನಗಳನ್ನು ಅಳವಡಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪಾರಿವಾಳದ ರೆಕ್ಕೆಗಳ ಮೇಲೆ ಅನ್ಯ ಭಾಷೆಯಲ್ಲಿ ಕೆಲವೊಂದು ಬರಹಗಳನ್ನು ಬರೆದಿದ್ದಾರೆ ಎಂದು ವರದಿಯಾಗಿದೆ. ಈ ಪಾರಿವಾಳವನ್ನು ಬೇಹುಗಾರಿಕೆಗೆ ಬಳಸಿಕೊಳ್ಳಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರ ಪ್ರಕಾರ, ಕೆಲವು ದಿನಗಳ ಹಿಂದೆ ಒಡಿಶಾ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ತಮ್ಮ ಟ್ರಾಲರ್ ಮೇಲೆ ಕುಳಿತಿದ್ದ ಪಾರಿವಾಳದ ಕಾಲುಗಳಿದ್ದ ಸಾಧನ ಮತ್ತು ರೆಕ್ಕೆಯ ಮೇಲೆ ಬರೆದಿದ್ದ ಬರಹವನ್ನು ಗಮನಿಸಿ ಅದನ್ನು ಹಿಡಿದು ಮರೈನ್ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಪಾರಿವಾಳದ ಕಾಲುಗಳಲ್ಲಿ ಇದ್ದ ಕ್ಯಾಮೆರಾ ಮತ್ತು ಮೈಕ್ರೋಚಿಪ್‌ನಂತೆ ಕಾಣುವ ಸಾಧನಗಳನ್ನು ಕಂಡುಹಿಡಿಯಲು ಪೊಲೀಸರು ಸೈಬರ್ ತಜ್ಞರ ಸಹಾಯವನ್ನು ಪಡೆದಕೊಂಡಿದ್ದಾರೆ, ವಶಪಡಿಸಿಕೊಂಡ ವಸ್ತುಗಳನ್ನು ಸೈಬರ್ ತಜ್ಞರ ಮುಂದೆ ಹಾಜರುಪಡಿಸುತ್ತೇವೆ ಎಂದು ಪರದೀಪ್ ಎಎಸ್ಪಿ, ನಿಮಾಯ್ ಚರಣ್ ಸೇಥಿ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ. ಅದರ ಕಾಲುಗಳಿಗೆ ಕಟ್ಟಿರುವ ಸಾಧನಗಳನ್ನು ಪರೀಕ್ಷಿಸಲು ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದ ಸಹಾಯವನ್ನೂ ಪಡೆಯುತ್ತೇವೆ ಎಂದು ಜಗತ್‌ಸಿಂಗ್‌ಪುರ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಪಿಆರ್ ಹೇಳಿದ್ದಾರೆ. ಹಕ್ಕಿಯ ರೆಕ್ಕೆಗಳಲ್ಲಿ ಏನು ಬರೆಯಲಾಗಿದೆ ಎಂಬುದನ್ನು ಕಂಡುಹಿಡಿಯಲು ತಜ್ಞರ ಸಹಾಯವನ್ನು ಸಹ ಪಡೆಯಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: ಆಧುನಿಕ ಶಹಜಹಾನ್; ಪತ್ನಿಗಾಗಿ ಒಡಿಶಾದಲ್ಲಿ 7 ಕೋಟಿ ರೂ. ದೇಗುಲ ಕಟ್ಟಿಸಿದ ಉದ್ಯಮಿ

10 ದಿನಗಳ ಹಿಂದೆ ಕೋನಾರ್ಕ್‌ನಿಂದ ಕರಾವಳಿಯಿಂದ 35 ಕಿಲೋಮೀಟರ್ ಮೀನುಗಾರಿಗೆ ಮಾಡುತ್ತಿದ್ದಾಗ ಟ್ರಾಲರ್‌ ಮೇಲೆ ಪಾರಿವಾಳ ಪತ್ತೆಯಾಗಿದೆ ಎಂದು ಮೀನುಗಾರಿಕಾ ಟ್ರಾಲರ್‌ನ ಉದ್ಯೋಗಿ ಪಿತಾಂಬರ್ ಬೆಹೆರಾ ಪಿಟಿಐಗೆ ತಿಳಿಸಿದ್ದಾರೆ. ಹಕ್ಕಿಯ ಕಾಲುಗಳಿಗೆ ಕೆಲವು ಸಾಧನಗಳನ್ನು ಇರುವುದನ್ನು ನಾವು ನೋಡಿದ್ದೇವೆ. ಅದರ ರೆಕ್ಕೆಗಳ ಮೇಲೆ ಏನೋ ಬರೆಯಲಾಗಿತ್ತು. ನಮಗೆ ಆ ಭಾಷೆ ಅರ್ಥವಾಗಿಲ್ಲ ಎಂದು ಬೆಹೆರಾ ಹೇಳಿದರು.

Published On - 11:16 am, Thu, 9 March 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್