AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ

Odisha SCB hospital ICU massive fire breakout, 10 patients killed: ಒಡಿಶಾದ ಕಟಕ್​ನ ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ರಕ್ಷಿಸಲು ಯತ್ನಿಸಿದ ಕೆಲ ಆಸ್ಪತ್ರೆ ಸಿಬ್ಬಂದಿಗೂ ಗಾಯಗಳಾಗಿವೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಒಡಿಶಾದ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ
ಎಸ್​ಸಿಬಿ ಆಸ್ಪತ್ರೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 16, 2026 | 8:09 AM

Share

ಕಟಕ್, ಮಾರ್ಚ್ 16: ಒಡಿಶಾದ ಕಟಕ್ ನಗರದಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದ್ದು, 10 ರೋಗಿಗಳು ಬಲಿಯಾಗಿದ್ದಾರೆ. 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ (SCB Medical College & Hospital) ಈ ದುರಂತ ಸಂಭವಿಸಿರುವುದು ವರದಿಯಾಗಿದೆ. ಮಧ್ಯರಾತ್ರಿಯ ನಂತರ 2:30ರಿಂದ 3 ಗಂಟೆಯ ಸಮಯದಲ್ಲಿ ಈ ಅಗ್ನಿ ಅಪಘಾತವಾಗಿರುವುದು (Fire Accident) ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರಬಹುದು ಎಂದು ಸದ್ಯ ಶಂಕಿಸಲಾಗಿದೆ.

ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳು ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಘಟನೆಯಲ್ಲಿ ಐಸಿಯುನಲ್ಲಿದ್ದ 10 ರೋಗಿಗಳು ಬಲಿಯಾಗಿದ್ದಾರೆ. ಅವರನ್ನು ರಕ್ಷಿಸಲು ಯತ್ನಿಸಿದ ಸಿಬ್ಬಂದಿ ಪೈಕಿ 11 ಮಂದಿಗೆ ಗಾಯಗಳಾಗಿವೆ.

ಘಟನೆ ಬಗ್ಗೆ ಎಎನ್​ಐ ಸುದ್ದಿಸಂಸ್ಥೆ ವರದಿ

ಬೆಂಕಿ ಅವಘಡ ಸಂಭವಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕೂಡ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಐಸಿಯುನಲ್ಲಿದ್ದ ಇತರ ರೋಗಿಗಳನ್ನು ಆಸ್ಪತ್ರೆಯ ಬೇರೆ ವಾರ್ಡ್​ಗಳಿಗೆ ಶಿಫ್ಟ್ ಮಾಡಲಾಗಿದೆ. ಒಟ್ಟು 23 ರೋಗಿಗಳನ್ನು ಬೇರೆಡೆ ವರ್ಗಾಯಿಸಲಾಗಿದೆ. ಹೀಗೆ ಬೇರೆಡೆ ಸಾಗಿಸುವ ಹಂತದಲ್ಲಿ 7 ಮಂದಿ ರೋಗಿಗಳು ಅಸುನೀಗಿದ್ದಾರೆ. ಮೂರು ರೋಗಿಗಳು ನಂತರ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಏಪ್ರಿಲ್ 1ರಿಂದ ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಶುಲ್ಕದಲ್ಲಿ ಏರಿಕೆ; ಇಲ್ಲಿದೆ ಹೊಸ ದರ

ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಣೆ

ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಆರೋಗ್ಯ ಸಚಿವ ಮುಕೇಶ್ ಮಹಾಲಿಂಗ್ ಅವರು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಮೃತಪಟ್ಟಿರುವ ರೋಗಿಗಳ ಸಂಬಂಧಿಕರಿಗೆ 25 ಲಕ್ಷ ರೂ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ. ಹಾಗೆಯೇ, ಗಾಯಗೊಂಡಿರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!