Odisha Train Accident: ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ

ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಗಂಟೆಗಳು ಕಳೆದೇ ಬಿಟ್ಟಿತ್ತು.

Odisha Train Accident: ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ
ಶವಗಳು
Follow us
|

Updated on:Jun 06, 2023 | 8:47 AM

ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಗಂಟೆಗಳು ಕಳೆದೇ ಬಿಟ್ಟಿತ್ತು. ತಮ್ಮವರು ಬದುಕಿರುವುದು ಹಾಗಿರಲಿ ಗುರುತು ಸಿಕ್ಕಿದರೆ ಸಾಕಪ್ಪಾ ಎನ್ನುವಂತಿದ್ದವು ಸಂಬಂಧಿಕರ ಕಣ್ಣುಗಳು. ಒಂದೆಡೆ ತಮ್ಮವರ ಹುಡುಕಾಡಿ ಹುಡುಕಾಡಿ ಕಣ್ಣೀರು ಬತ್ತಿ ಹೋಗಿವೆ, ಕಣ್ಣುಗಳು ಮಂಜಾಗುತ್ತಿವೆ, ಇನ್ನೊಂದೆಡೆ ಶವಗಳಿಂದ ಬರುತ್ತಿದ್ದ ದುರ್ನಾತ, ಎಲ್ಲವನ್ನೂ ಸಹಿಸಿಕೊಂಡು ಜನರು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು.

ಹಾಗೆಯೇ ತಂದೆಯೊಬ್ಬರು ತನ್ನ ಮಗ ಸತ್ತಿದ್ದಾನೆ ಎಂದು ನಂಬಲು ಸಾಧ್ಯವೇ ಇಲ್ಲ ಎಂದು ಹೇಳುತ್ತಿದ್ದರು, ಆದರೆ ಅಲ್ಲಿದ್ದವರು ಆತ ದುಃಖದಲ್ಲಿ ಹಾಗೆ ಹೇಳುತ್ತಿರಬಹುದು ಎಂದುಕೊಂಡಿದ್ದಾರೆ. ಆದರೆ ಅವರ ನಂಬಿಕೆ ನಿಜವಾಯಿತು ಆ ಶವಗಳ ಮಧ್ಯೆ ಮಗನನ್ನು ಜೀವಂತವಾಗಿ ಹೊರತೆಗೆದಿದ್ದಾರೆ.

ಬಾಲಾಸೋರ್​ನ ಶಾಲೆಯೊಂದನ್ನು ತಾತ್ಕಾಲಿಕ ಶವಾಗಾರವನ್ನಾಗಿ ಮಾಡಲಾಗಿದೆ. ಬಿಸ್ವಜಿತ್ ಮಲಿಕ್ ಅವರ ತಂದೆ ತಕ್ಷಣವೇ ಆಂಬ್ಯುಲೆನ್ಸ್‌ನಲ್ಲಿ 230 ಕಿಮೀ ದೂರದಲ್ಲಿರುವ ಮಗನನ್ನು ಹುಡುಕಲು ಬಂದಿದ್ದರು. ಅವರು ತಮ್ಮ ಮಗನನ್ನು ಶವಾಗಾರದಿಂದ ಹೊರತೆಗೆದು ಆಸ್ಪತ್ರೆಗೆ ಸೇರಿಸಿದರು.

ಮತ್ತಷ್ಟು ಓದಿ:Odisha Train Accident: ಎಲ್ಲಿದ್ದೀಯೋ ಕಂದ, ಕಣ್ಣಂಚಲ್ಲಿ ನೀರು, ಶವಗಳ ರಾಶಿಯ ನಡುವೆ ಮುಸುಕು ತೆಗೆದು ಮಗನಿಗಾಗಿ ತಂದೆಯ ಹುಡುಕಾಟ

ಎಸ್ ಎಸ್ ಕೆಎಂ ಆಸ್ಪತ್ರೆಯ ಟ್ರಾಮಾ ಕೇರ್ ಯೂನಿಟ್ ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಬಿಸ್ವಜಿತ್ ಸೋಮವಾರ ಮತ್ತೊಂದು ಸುತ್ತಿನ ಶಸ್ತ್ರಚಿಕಿತ್ಸೆಗೆ ಒಳಗಾಗುವ ನಿರೀಕ್ಷೆಯಿದೆ. ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ, ಆದರೆ ಅವರ ಸ್ಥಿತಿ ಸ್ಥಿರವಾಗಿದೆ. ಹೌರಾದಲ್ಲಿ ಹೆಲ್ಲರಾಮ್ ಅಂಗಡಿ ನಡೆಸುತ್ತಿದ್ದಾರೆ. ಆತ ತನ್ನ ಮಗ ಬಿಸ್ವಜಿತ್ ನನ್ನು ಶಾಲಿಮಾರ್ ಸ್ಟೇಷನ್ ನಲ್ಲಿ ಡ್ರಾಪ್ ಮಾಡಿದ್ದರು.

ಅಪಘಾತದ ನಂತರ ಬಿಸ್ವಜೀತ್ ಜೊತೆ ಮಾತನಾಡಿದ್ದರು ನೋವಿನಿಂದ ನರಳುತ್ತಿದ್ದರು ಎಂದು ಹೇಳಲಾಗಿದೆ, ಮಗನನ್ನು ಹುಡುಕಲು ತಕ್ಷಣವೇ ಅವರು ಊರಿನಿಂದ ಹೊರಟಿದ್ದರು.  ಮಾಧ್ಯಮ ವರದಿಗಳ ಪ್ರಕಾರ ಬಿಸ್ವಜಿತ್ ಕೋಲ್ಕತ್ತಾ ತಲುಪುವವರೆಗೂ ಪ್ರಜ್ಞೆ ಬಂದಿರಲಿಲ್ಲ. ಬೆಳಗ್ಗೆ 8:30ರ ಸುಮಾರಿಗೆ ಅವರನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಬಿಸ್ವಜೀತ್ ಅವರ ಪಾದದ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಒಡಿಶಾದಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿದೆ, ಅದರಲ್ಲಿ ಇಲ್ಲಿಯವರೆಗೆ 257 ಮಂದಿ ಮೃತಪಟ್ಟಿದ್ದೂ ಸಾವಿರಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ ಎನ್ನುವ ಮಾಹಿತಿ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:47 am, Tue, 6 June 23

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!