AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ರೈಲು ಅಪಘಾತ ಸಂಭವಿಸಿದ ಸ್ಥಳದಲ್ಲಿ ದುರಸ್ತಿ ಕಾರ್ಯ ಶುರು, ರೈಲ್ವೆ ಸಚಿವರಿಂದ ಮೇಲ್ವಿಚಾರಣೆ

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ  ಸಂಭವಿಸಿದ ರೈಲು ಅಪಘಾತದ ಬಳಿಕ,  ಈಗ ಹೌರಾ-ಚೆನ್ನೈ ರೈಲು ಮಾರ್ಗವನ್ನು ಸರಿಪಡಿಸುವ ಕೆಲಸವನ್ನು ಮಾಡಲಾಗುತ್ತಿದೆ.

Odisha Train Accident: ರೈಲು ಅಪಘಾತ ಸಂಭವಿಸಿದ ಸ್ಥಳದಲ್ಲಿ ದುರಸ್ತಿ ಕಾರ್ಯ ಶುರು, ರೈಲ್ವೆ ಸಚಿವರಿಂದ ಮೇಲ್ವಿಚಾರಣೆ
ರೈಲು ಅಪಘಾತದ ಸ್ಥಳ, ದುರಸ್ತಿ ಕಾರ್ಯ
ನಯನಾ ರಾಜೀವ್
|

Updated on: Jun 04, 2023 | 9:11 AM

Share

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ  ಸಂಭವಿಸಿದ ರೈಲು ಅಪಘಾತದ ಬಳಿಕ,  ಈಗ ಹೌರಾ-ಚೆನ್ನೈ ರೈಲು ಮಾರ್ಗವನ್ನು ಸರಿಪಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಶನಿವಾರ ಮಧ್ಯಾಹ್ನದ ವೇಳೆಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಮುಗಿದಿದೆ. ಬಳಿಕ ಅಪಘಾತದ ಕೋಚ್‌ಗಳನ್ನು ತೆಗೆದುಹಾಕಲಾಗಿದ್ದು, ಈಗ ಟ್ರ್ಯಾಕ್‌ಗಳನ್ನು ಹಾಕುವ ಮತ್ತು ವಿದ್ಯುತ್ ಕಂಬಗಳು ಮತ್ತು ತಂತಿಗಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ. 1000ಕ್ಕೂ ಹೆಚ್ಚು ರೈಲ್ವೆ ನೌಕರರು ಈ ಕಾರ್ಯದಲ್ಲಿ ತೊಡಗಿದ್ದಾರೆ, ದುರಸ್ತಿ ಕಾರ್ಯಕ್ಕಾಗಿ 7ಕ್ಕೂ ಹೆಚ್ಚು ಪೊಕ್ಲೆನ್ ಯಂತ್ರಗಳು,  ಕ್ರೇನ್ ಇತ್ಯಾದಿಗಳನ್ನು ಅಳವಡಿಸಲಾಗಿದೆ.

ಅಪಘಾತದ ಸ್ಥದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಖುದ್ದಾಗಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಹೌರಾ-ಚೆನ್ನೈ ರೈಲು ಮಾರ್ಗದ ದುರಸ್ತಿ ಕಾರ್ಯ ಬುಧವಾರ ಸಂಜೆಯ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅಶ್ವಿನಿ ವೈಷ್ಣವ್ ಈ ಹಿಂದೆ ತಿಳಿಸಿದ್ದರು. ಬಾಲಸೋರ್‌ನ ಬಹನಾಗಾ ಬಜಾರ್ ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.

ಈ ರೈಲಿನ ಕೆಲವು ಬೋಗಿಗಳು ಹಾದುಹೋಗುತ್ತಿದ್ದ ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ನ ಹಿಂಭಾಗಕ್ಕೂ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ 288 ಜನರು ಸಾವನ್ನಪ್ಪಿದ್ದಾರೆ. 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡ ಸುಮಾರು 56 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Odisha Train Accident: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್​ ಅಪಘಾತ

ಬಾಲಸೋರ್ ರೈಲು ಅಪಘಾತದ ಕುರಿತು ಉನ್ನತ ಮಟ್ಟದ ಸಮಿತಿ ತನಿಖೆಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಅಪಘಾತ ಸ್ಥಳಕ್ಕೆ ತೆರಳಿದ್ದರು. ಅಲ್ಲದೆ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ