Odisha Train Accident: 40 ಪ್ರಯಾಣಿಕರ ಮೃತದೇಹಗಳ ಮೇಲೆ ಒಂದೇ ಒಂದು ಗಾಯದ ಗುರುತು ಕೂಡ ಇರಲಿಲ್ಲ

ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಮೃತಪಟ್ಟವರಲ್ಲಿ 40 ಪ್ರಯಾಣಿಕರ ದೇಹದಲ್ಲಿ ಒಂದೇ ಒಂದು ಗಾಯದ ಗುರುತಿರಲಿಲ್ಲ ಎಂಬುದು ತಿಳಿದುಬಂದಿದೆ

Odisha Train Accident: 40 ಪ್ರಯಾಣಿಕರ ಮೃತದೇಹಗಳ ಮೇಲೆ ಒಂದೇ ಒಂದು ಗಾಯದ ಗುರುತು ಕೂಡ ಇರಲಿಲ್ಲ
ಒಡಿಶಾ ರೈಲು ಅಪಘಾತImage Credit source: The Economic Times
Follow us
|

Updated on: Jun 06, 2023 | 10:07 AM

ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಮೃತಪಟ್ಟವರಲ್ಲಿ 40 ಪ್ರಯಾಣಿಕರ ದೇಹದಲ್ಲಿ ಒಂದೇ ಒಂದು ಗಾಯದ ಗುರುತಿರಲಿಲ್ಲ ಎಂಬುದು ತಿಳಿದುಬಂದಿದೆ. ಇವರೆಲ್ಲರೂ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ. ಮೇಲಿರುವ ಕೇಬಲ್ ರೈಲಿನ ಮೇಲೆ ಬಿದ್ದ ಪರಿಣಾಮ ಕರೆಂಟ್ ವ್ಯಾಪಿಸಿತ್ತು. ಘರ್ಷಣೆ ಹಾಗೂ ವಿದ್ಯುದಾಘಾತದಿಂದ ಅನೇಕ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆ 40 ಮಂದಿ ಮೃತದೇಹದ ಮೇಲೆ ಒಂದು ತೊಟ್ಟು ರಕ್ತವೂ ಇರಲಿಲ್ಲ, ಹೌರಾ ಎಕ್ಸ್​ಪ್ರೆಸ್​ಗೆ ಕೋರಮಂಡಲ್ ಎಕ್ಸ್​ಪ್ರೆಸ್​ ಡಿಕ್ಕಿ ಹೊಡೆದ ಬಳಿಕ ಕೇಬಲ್ ತುಂಡಾಗಿರುವ ಸಾಧ್ಯತೆ ಇದೆ.

ಯಶವಂತಪುರ (ಬೆಂಗಳೂರು)-ಹೌರಾ ಎಕ್ಸ್‌ಪ್ರೆಸ್ ಶುಕ್ರವಾರ ಸಂಜೆ 6.55 ಕ್ಕೆ ಹಳಿತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಬೋಗಿಗಳಿಗೆ ಡಿಕ್ಕಿ ಹೊಡೆದ ನಂತರ ತಂತಿಗಳು ತುಂಡಾಗಿವೆ. ಚೆನ್ನೈಗೆ ತೆರಳುತ್ತಿದ್ದ ರೈಲು ಹಳಿತಪ್ಪಿ ನಿಂತಿದ್ದ ಗೂಡ್ಸ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಹಲವು ಶವಗಳನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆದರೆ ಈ ನಡುವೆ ದೇಹದ ಮೇಲೆ ಯವುದೇ ಗಾಯದ ಗುರುತುಗಳು ಅಥವಾ ಎಲ್ಲಿಯೂ ರಕ್ತಸ್ರಾವವಾಗಿರದ 40 ದೇಹಗಳು ಪತ್ತೆಯಾಗಿವೆ. ಇವುಗಳಲ್ಲಿ ಹೆಚ್ಚಿನ ಸಾವುಗಳು ಬಹುಶಃ ವಿದ್ಯುದಾಘಾತದಿಂದ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಮೃತ ದೇಹಗಳ ಗುರುತನ್ನು ದೃಢೀಕರಿಸಲು ಮತ್ತು ನಕಲಿ ಹಕ್ಕುದಾರರನ್ನು ತಪ್ಪಿಸಲು ಕೆಲವು ಶಂಕಿತ ಪ್ರಕರಣಗಳಲ್ಲಿ ದೇಹಗಳನ್ನು ನಿಜವಾದ ಸಂಬಂಧಿಕರಿಗೆ ಹಸ್ತಾಂತರಿಸುವ ಮೊದಲು ಒಡಿಶಾ ಸರ್ಕಾರ ಸೋಮವಾರ ಡಿಎನ್‌ಎ ಮಾದರಿಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದೆ.

ಮತ್ತಷ್ಟು ಓದಿ: Odisha Train Accident: ಇನ್ನೂ 101 ಶವಗಳ ಗುರುತು ಪತ್ತೆಯಾಗಿಲ್ಲ, ಶವಾಗಾರದಲ್ಲಿ ಸಂಬಂಧಿಕರ ನರಳಾಟ

ಒಡಿಶಾದಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ 3 ದಿನಗಳು ಕಳೆದಿವೆ, ಇನ್ನೂ 101 ಶವಗಳ ಗುರುತು ಪತ್ತೆಯಾಗಿಲ್ಲ. ಆಸ್ಪತ್ರೆಯ ಶವಾಗಾರಗಳು ತುಂಬಿವೆ ಹೀಗಾಗಿ ಬಾಸೋರ್​ನ ಶಾಲೆಯೊಂದನ್ನು ತಾತ್ಕಾಲಿಕ ಶವಾಗಾರವನ್ನಾಗಿ ಮಾಡಲಾಗಿದೆ. ಅಪಘಾತದಲ್ಲಿ 275 ಮಂದಿ ಮೃತಪಟ್ಟಿದ್ದು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಇನ್ನೂ 101 ಮೃತದೇಹಗಳನ್ನು ಗುರುತಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೆಲವು ದೇಹಗಳು ನಜ್ಜುಗುಜ್ಜಾಗಿದೆ, ಇನ್ನೂ ಕೆಲವರ ಮುಖಕ್ಕೆ ಗಂಭೀರ ಗಾಯಗಳಾಗಿವೆ.

ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 200 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ, ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದಾರೆ, ಅದರಲ್ಲಿ ಸುಮಾರು 900 ಜನರನ್ನು ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ