AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Accident: ವಾಶ್​​ ರೂಂಗೆ ಹೋಗಿದ್ದರಿಂದ ಉಳಿಯಿತು ಪ್ರಾಣ, ಕಾಣಿಸಿತು ಮೃತದೇಹಗಳ ರಾಶಿ; ಪ್ರತ್ಯಕ್ಷದರ್ಶಿಗಳ ಭಯಾನಕ ಅನುಭವ

ಒಡಿಶಾ ರೈಲು ದುರಂತದ ಭೀಕರತೆ ಬಗ್ಗೆ ಪ್ರತ್ಯಕ್ಷದರ್ಶಿಗಳು, ಅಪಘಾತದಲ್ಲಿ ಬದುಕುಳಿದ ಪ್ರಯಾಣಿಕರು ನೀಡಿರುವ ಮಾಹಿತಿ ಇಲ್ಲಿದೆ.

Train Accident: ವಾಶ್​​ ರೂಂಗೆ ಹೋಗಿದ್ದರಿಂದ ಉಳಿಯಿತು ಪ್ರಾಣ, ಕಾಣಿಸಿತು ಮೃತದೇಹಗಳ ರಾಶಿ; ಪ್ರತ್ಯಕ್ಷದರ್ಶಿಗಳ ಭಯಾನಕ ಅನುಭವ
ರೈಲು ಅಪಘಾತದಲ್ಲಿ ಸ್ವಲ್ಪದರಲ್ಲೇ ಬದುಕುಳಿದ ಪ್ರತ್ಯಕ್ಷದರ್ಶಿಗಳಾದ ವಂದನಾ ಹಾಗೂ ನಿವಾಸ್ ಕುಮಾರ್
Ganapathi Sharma
|

Updated on:Jun 03, 2023 | 1:36 PM

Share

ಭುವನೇಶ್ವರ: ‘ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ವಸ್ತುಗಳು, ಜನರ ಚೀರಾಟ, ಆರ್ತನಾದ, ಮತ್ತೊಂದೆಡೆ ಮೃತದೇಹಗಳ ರಾಶಿ. ಇವುಗಳನ್ನು ನೋಡಿ ಒಂದು ಕ್ಷಣ ಸ್ತಂಭೀಭೂತರಾಗಿ ಹೋದೆವು’. ಒಡಿಶಾದ ಬಾಲಸೋರ್​ ಬಳಿ ಸಂಭವಿಸಿದ ಭೀಕರ ರೈಲು ಅಪಘಾತ(Odisha Train Accident) ಹೃದಯ ವಿದ್ರಾವಕ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಗಳ ನೋವಿನ ನುಡಿಗಳಿವು. ಶುಕ್ರವಾರ ಸಂಜೆ 6.30- 7 ರ ಸುಮಾರಿಗೆ ರೈಲಿನಲ್ಲಿ ಇಡೀ ಪ್ರಯಾಣಿಕರ ಕಲರವ. ಕೆಲವೆಡೆ ಹಿರಿಯರ ಮಾತುಗಳು, ಕೆಲವೆಡೆ ಮಕ್ಕಳ ನಗು. ಊಟಕ್ಕೆ ಏನು ಆರ್ಡರ್ ಮಾಡಬೇಕೆಂಬ ಚರ್ಚೆ. ಒಟ್ಟಿನಲ್ಲಿ ಶಾಲಿಮಾರ್‌ನಿಂದ ಚೆನ್ನೈ ಸೆಂಟ್ರಲ್‌ಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನ ಒಳಗೆ ಸಂಭ್ರಮದ ವಾತಾವರಣವಿತ್ತು. ಇನ್ನೇನು ಕೆಲವೇ ಕ್ಷಣಗಳಲ್ಲಿ ನಡೆಯಬಾರದ ಬಲು ದೊಡ್ಡ ದುರಂತವೊಂದು ಘಟಿಸಲಿದೆ ಎಂಬ ತೃಣಮಾತ್ರದ ಸುಳಿವೂ ಇರದಿದ್ದ ಪ್ರಯಾಣಿಕರೆಲ್ಲ ಹಾಯಾಗಿ ಪ್ರಯಾಣವನ್ನು ಆಸ್ವಾದಿಸುತ್ತಿದ್ದರು. ಆದರೆ, ಕೆಲವೇ ಕ್ಷಣಗಳಲ್ಲಿ ನಡೆದದ್ದೇ ಬೇರೆ. ಭೀಕರ ದುರಂತದ ಬಗ್ಗೆ ರೈಲಿನಲ್ಲಿದ್ದ 19 ವರ್ಷದ ಯುವಕ ನಿವಾಸ್ ಕುಮಾರ್ ವಿವರಿಸಿದ್ದು ಹೀಗೆ.

ಅಪಘಾತ ಸಂಭವಿಸಿದ್ದು ಹೇಗೆ?

ಮಾಧ್ಯಮ ಪ್ರತಿನಿಧಿಗಳು ಈ ಪ್ರಶ್ನೆ ಕೇಳುತ್ತಿದ್ದಂತೆಯೇ ನಿವಾಸ್ ಕುಮಾರ್ ಮುಖದಲ್ಲಿ ಅವ್ಯಕ್ತವಾದ ಆತಂಕದ ಗೆರೆಯೊಂದು ಸುಳಿದಂತಾಯಿತು. ಗಂಟಲು ಒಣಗಿತು. ಒಂದು ಕ್ಷಣ ಕಣ್ಣು ಮುಚ್ಚಿದ ಆತ ನಂತರ ವಿವರಿಸತೊಡಗಿದ.

ಅಜ್ಜನ ಜೊತೆ ಹೌರಾದಿಂದ ಬಿಹಾರಕ್ಕೆ ಹೋಗುತ್ತಿದ್ದೆ. ಸ್ವಲ್ಪ ಸಮಯದ ಹಿಂದೆ, ಎಲ್ಲವೂ ತುಂಬಾ ಚೆನ್ನಾಗಿತ್ತು. ಮಕ್ಕಳು ಆಡುತ್ತಿದ್ದರು, ಜನರು ಮಾತನಾಡುತ್ತಿದ್ದರು. ಯಾರೋ ಶಾಂತವಾಗಿ ಮಲಗಿದ್ದರು. ಇದ್ದಕ್ಕಿದ್ದಂತೆ ಒಂದು ಚಂಡಮಾರುತ ಬಂದಪ್ಪಳಿಸಿದಂತೆ ಭಾಸವಾಯಿತು. ನಂತರ ದೊಡ್ಡ ಶಬ್ದ ಕೇಳಿಸಿತು. ಕಿವಿಗಳು ಮರಗಟ್ಟಿದವು ಮತ್ತು ಕಣ್ಣುಗಳು ಮುಚ್ಚಿಹೋದವು. ಸ್ವಲ್ಪ ಹೊತ್ತಿನ ನಂತರ ಕಣ್ಣು ತೆರೆದಾಗ ಭಯಾನಕ ದೃಶ್ಯ ಕಾಣಿಸಿತು. ಸುತ್ತಲೂ ಮೃತದೇಹಗಳ ರಾಶಿ ಬಿದ್ದಿತ್ತು. ಮಕ್ಕಳ ಕಿಲಕಿಲ ನಗುವಿನ ಬದಲು ಜನರ ಕಿರುಚಾಟದ ಸದ್ದು ಕೇಳಿಸುತ್ತಿತ್ತು. ಕೆಲವೆಡೆ ಹಿರಿಯರ ಕನ್ನಡಕ, ಕೆಲವೆಡೆ ಮಕ್ಕಳ ಬಟ್ಟೆ, ಆಟಿಕೆಗಳು ಚೆಲ್ಲಾಪಿಲ್ಲಿಯಾಗಿದ್ದವು. ಆಂಬುಲೆನ್ಸ್‌ನ ಸೈರನ್, ಜನರ ಕಿರುಚಾಟ ಕಿವಿಯಲ್ಲಿ ಪ್ರತಿಧ್ವನಿಸುತ್ತಿತ್ತು. ಅಪಘಾತ ಸಂಭವಿಸಿದ ತಕ್ಷಣ ಪ್ರಜ್ಞೆ ತಪ್ಪಿಹೋಯಿತು ಎಂದು ನಿವಾಸ್ ನೋವಿನಿಂದ ಹೇಳಿದರು.

ಇದನ್ನೂ ಓದಿ: Odisha Train Accident: ಒಡಿಶಾ ರೈಲು ದುರಂತ; ದೇವರಂತೆಯೇ ಬಂದು ಸುಮಾರು 300 ಜನರ ರಕ್ಷಣೆಗೆ ಕಾರಣನಾದ ಸ್ಥಳೀಯ ವ್ಯಕ್ತಿ

ನಂತರ ನನ್ನನ್ನು ರೈಲಿನಿಂದ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು. ಅಪಘಾತದಲ್ಲಿ ಸ್ವಲ್ಪದರಲ್ಲೇ ಪಾರಾದೆ ಎಂದು ನಿಟ್ಟುಸಿರು ಬಿಡುತ್ತಾರವರು.

ವಾಶ್ ರೂಂನಲ್ಲಿದ್ದ ವಂದನಾ ಸ್ವಲ್ಪದರಲ್ಲೇ ಬಚಾವ್

ಅಪಘಾತದ ಸಂದರ್ಭ ವಾಶ್ ರೂಂನಲ್ಲಿದ್ದುದರಿಂದ ವಂದನಾ ಎಂಬ ಪ್ರಯಾಣಿಕರು ಪವಾಡಸದೃಶರಾಗಿ ಅಪಘಾತದ ಸಂದರ್ಭ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಅಪಘಾತದ ಸಮಯದಲ್ಲಿ ತಾನು ವಾಶ್ ರೂಂನಲ್ಲಿದ್ದೆ. ಹೀಗಾಗಿ ನನ್ನ ಪ್ರಾಣ ಉಳಿಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Odisha Train Accident: ಒಡಿಶಾ ಭೀಕರ ರೈಲು ದುರಂತ ಸಂಭವಿಸಿದ್ದು ಹೇಗೆ? ಪ್ರತ್ಯಕ್ಷದರ್ಶಿಗಳು ಹೇಳೋದೇನು?

ವಾಶ್‌ರೂಮ್‌ನಿಂದ ಹೊರ ಬಂದ ಕೂಡಲೇ ಹೊರಗಿನ ದೃಶ್ಯ ನೋಡಿ ಸಂಪೂರ್ಣ ಬೆಚ್ಚಿಬಿದ್ದೆ. ರೈಲು ಸಂಪೂರ್ಣ ವಾಲಿತ್ತು. ಸಾಮಗ್ರಿಗಳೆಲ್ಲ ಅಲ್ಲೊಂದು ಇಲ್ಲೊಂದು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಜನರು ಒಬ್ಬರ ಮೇಲೊಬ್ಬರು ಬಿದ್ದಿದ್ದರು. ಏನಾಯಿತು ಎಂದು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಸುತ್ತಲೂ ಮೃತದೇಹಗಳನ್ನು ಕಂಡು ಆಘಾತವಾಯಿತು. ನಂತರ ನನ್ನನ್ನು ಸುರಕ್ಷಿತವಾಗಿ ಹೊರ ತೆಗೆಯಲಾಯಿತು ಎಂದು ವಂದನಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Sat, 3 June 23

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ