AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ರೈಲು ದುರಂತ ನಡೆದ ಸ್ಥಳದಲ್ಲಿ ನಿರ್ಮಾಣವಾದ ಹೊಸ ಹಳಿಯನ್ನು ದಾಟಿದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

ರೈಲು ಅಪಘಾತದಿಂದ ಅಸ್ಥವ್ಯಸ್ಥವಾಗಿದ್ದ ರೈಲು ಹಳಿಗಳುನ್ನು ಮತ್ತೆ ಮರುಜೋಡಾನೆ ಮಾಡಲಾಗಿದೆ. ಇದೀಗ ಈ ಹಳಿಯಲ್ಲಿ ಮೊದಲ ಹೌರಾ-ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on:Jun 05, 2023 | 2:02 PM

Share

ಬಾಲಸೋರ್: ಒಡಿಶಾದಲ್ಲಿ ನಡೆದ ಭೀಕರ ರೈಲು (Odisha Train Accident) ದುರಂತದಿಂದ ಮತ್ತೆ ರೈಲ್ವೆ ಇಲಾಖೆ ಚೇತರಿಸಿಕೊಂಡಿದೆ, ರೈಲು ಅಪಘಾತದಿಂದ ಅಸ್ಥವ್ಯಸ್ಥವಾಗಿದ್ದ ರೈಲು ಹಳಿಗಳುನ್ನು ಮತ್ತೆ ಮರುಜೋಡಾನೆ ಮಾಡಲಾಗಿದೆ. ಇದೀಗ ಈ ಹಳಿಯಲ್ಲಿ ಮೊದಲ ಹೌರಾ-ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಇಂದು ಬೆಳಿಗ್ಗೆ 9:30 ರ ಸುಮಾರಿಗೆ ಬಹನಾಗಾ ಬಜಾರ್ ನಿಲ್ದಾಣವನ್ನು ದಾಟಿದೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತ ಸ್ಥಳದಲ್ಲಿದ್ದು ವಂದೇ ಭಾರತ್ ಎಕ್ಸ್‌ಪ್ರೆಸ್​​​ ಚಾಲಕರಿಗೆ ಕೈ ಬೀಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪ್ ಲೈನ್ ಮತ್ತು ಡೌನ್ ಲೈನ್ ಟ್ರ್ಯಾಕ್‌ಗಳ ಮರುಸ್ಥಾಪನೆ ಕಾರ್ಯವು ಭಾನುವಾರ ರಾತ್ರಿ ಪೂರ್ಣಗೊಂಡಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.

ಭಾನುವಾರ ರಾತ್ರಿ 10.40ರ ಸುಮಾರಿಗೆ ವೈಜಾಗ್ ಬಂದರಿನಿಂದ ರೂರ್ಕೆಲಾ ಸ್ಟೀಲ್ ಪ್ಲಾಂಟ್‌ಗೆ ಕಲ್ಲಿದ್ದಲು ತುಂಬಿದ ಸರಕು ಸಾಗಣೆ ರೈಲು ಹಳಿ ಮೇಲೆ ಓಡಿದೆ. ಅದೇ ಹಳಿಯಲ್ಲಿ ಗೂಡ್ಸ್ ರೈಲು ಕೂಡ ಸಂಚಾರಿಸಿದೆ. ರೈಲುಗಳು ಅಪಘಾತ ನಡೆದ ಸ್ಥಳದಲ್ಲಿ ಎಲ್ಲ ರೈಲುಗಳು ನಿಧಾನ ವೇಗದಲ್ಲಿ ಹಾದು ಹೋಗುತ್ತವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Odisha Train Accident: ಒಡಿಶಾದ ರೈಲ್ವೆ ಟ್ರ್ಯಾಕ್​ಗಳ​ ಮೇಲೆ ಜನರಂತೆಯೇ ಅನಾಥವಾಗಿ ಬಿದ್ದಿದ್ದವು, ಬೆಂಗಾಲಿ ಕವಿತೆಯ ಸಾಲುಗಳು

ಒಡಿಶಾದ ಬಾಲಸೋರ್​​ನಲ್ಲಿ ಜೂ.2 ನಡೆದ ರೈಲು ಅಪಘಾತವು ಒಂದು. ಈ ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು. 900ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿತ್ತು. ಅಧಿಕಾರಿಗಳು, ಸೇನೆಗಳು, ಜನರು ಅನೇಕರು ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದರು. ಅಲ್ಲಿ ಡಿಕ್ಕಿ ಹೊಡೆದ ರೈಲು ಭಾಗಗಳನ್ನು ತೆಗೆದು ಹೊಸ ಹಳಿಗಳನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಈ ಹಳಿಯಲ್ಲಿ ರೈಲುಗಳು ಸಂಚಾರ ಮಾಡುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Mon, 5 June 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More