AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ರೈಲು ದುರಂತ ನಡೆದ ಸ್ಥಳದಲ್ಲಿ ನಿರ್ಮಾಣವಾದ ಹೊಸ ಹಳಿಯನ್ನು ದಾಟಿದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

ರೈಲು ಅಪಘಾತದಿಂದ ಅಸ್ಥವ್ಯಸ್ಥವಾಗಿದ್ದ ರೈಲು ಹಳಿಗಳುನ್ನು ಮತ್ತೆ ಮರುಜೋಡಾನೆ ಮಾಡಲಾಗಿದೆ. ಇದೀಗ ಈ ಹಳಿಯಲ್ಲಿ ಮೊದಲ ಹೌರಾ-ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on:Jun 05, 2023 | 2:02 PM

Share

ಬಾಲಸೋರ್: ಒಡಿಶಾದಲ್ಲಿ ನಡೆದ ಭೀಕರ ರೈಲು (Odisha Train Accident) ದುರಂತದಿಂದ ಮತ್ತೆ ರೈಲ್ವೆ ಇಲಾಖೆ ಚೇತರಿಸಿಕೊಂಡಿದೆ, ರೈಲು ಅಪಘಾತದಿಂದ ಅಸ್ಥವ್ಯಸ್ಥವಾಗಿದ್ದ ರೈಲು ಹಳಿಗಳುನ್ನು ಮತ್ತೆ ಮರುಜೋಡಾನೆ ಮಾಡಲಾಗಿದೆ. ಇದೀಗ ಈ ಹಳಿಯಲ್ಲಿ ಮೊದಲ ಹೌರಾ-ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಇಂದು ಬೆಳಿಗ್ಗೆ 9:30 ರ ಸುಮಾರಿಗೆ ಬಹನಾಗಾ ಬಜಾರ್ ನಿಲ್ದಾಣವನ್ನು ದಾಟಿದೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತ ಸ್ಥಳದಲ್ಲಿದ್ದು ವಂದೇ ಭಾರತ್ ಎಕ್ಸ್‌ಪ್ರೆಸ್​​​ ಚಾಲಕರಿಗೆ ಕೈ ಬೀಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪ್ ಲೈನ್ ಮತ್ತು ಡೌನ್ ಲೈನ್ ಟ್ರ್ಯಾಕ್‌ಗಳ ಮರುಸ್ಥಾಪನೆ ಕಾರ್ಯವು ಭಾನುವಾರ ರಾತ್ರಿ ಪೂರ್ಣಗೊಂಡಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.

ಭಾನುವಾರ ರಾತ್ರಿ 10.40ರ ಸುಮಾರಿಗೆ ವೈಜಾಗ್ ಬಂದರಿನಿಂದ ರೂರ್ಕೆಲಾ ಸ್ಟೀಲ್ ಪ್ಲಾಂಟ್‌ಗೆ ಕಲ್ಲಿದ್ದಲು ತುಂಬಿದ ಸರಕು ಸಾಗಣೆ ರೈಲು ಹಳಿ ಮೇಲೆ ಓಡಿದೆ. ಅದೇ ಹಳಿಯಲ್ಲಿ ಗೂಡ್ಸ್ ರೈಲು ಕೂಡ ಸಂಚಾರಿಸಿದೆ. ರೈಲುಗಳು ಅಪಘಾತ ನಡೆದ ಸ್ಥಳದಲ್ಲಿ ಎಲ್ಲ ರೈಲುಗಳು ನಿಧಾನ ವೇಗದಲ್ಲಿ ಹಾದು ಹೋಗುತ್ತವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Odisha Train Accident: ಒಡಿಶಾದ ರೈಲ್ವೆ ಟ್ರ್ಯಾಕ್​ಗಳ​ ಮೇಲೆ ಜನರಂತೆಯೇ ಅನಾಥವಾಗಿ ಬಿದ್ದಿದ್ದವು, ಬೆಂಗಾಲಿ ಕವಿತೆಯ ಸಾಲುಗಳು

ಒಡಿಶಾದ ಬಾಲಸೋರ್​​ನಲ್ಲಿ ಜೂ.2 ನಡೆದ ರೈಲು ಅಪಘಾತವು ಒಂದು. ಈ ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು. 900ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿತ್ತು. ಅಧಿಕಾರಿಗಳು, ಸೇನೆಗಳು, ಜನರು ಅನೇಕರು ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದರು. ಅಲ್ಲಿ ಡಿಕ್ಕಿ ಹೊಡೆದ ರೈಲು ಭಾಗಗಳನ್ನು ತೆಗೆದು ಹೊಸ ಹಳಿಗಳನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಈ ಹಳಿಯಲ್ಲಿ ರೈಲುಗಳು ಸಂಚಾರ ಮಾಡುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Mon, 5 June 23

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ