AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train: ಒಡಿಶಾದಲ್ಲಿ ಹಳಿ ತಪ್ಪಿದ ಖಾಸಗಿ ರೈಲು

ಒಡಿಶಾದಲ್ಲಿ ಖಾಸಗಿ ಗೂಡ್ಸ್​ ರೈಲೊಂದು ಹಳಿ ತಪ್ಪಿದೆ.  ಯಾವುದೇ ಸಾವು ನೋವಿನ ಕುರಿತು ವರದಿಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಒಡಿಶಾದಲ್ಲಿ ತ್ರಿವಳಿ ರೈಲುಗಳ ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

Odisha Train: ಒಡಿಶಾದಲ್ಲಿ ಹಳಿ ತಪ್ಪಿದ ಖಾಸಗಿ ರೈಲು
ಗೂಡ್ಸ್​ ರೈಲುImage Credit source: Odisha TV
ನಯನಾ ರಾಜೀವ್
|

Updated on:Jun 05, 2023 | 12:02 PM

Share

ಒಡಿಶಾದಲ್ಲಿ ಖಾಸಗಿ ಗೂಡ್ಸ್​ ರೈಲೊಂದು ಹಳಿ ತಪ್ಪಿದೆ.  ಯಾವುದೇ ಸಾವು ನೋವಿನ ಕುರಿತು ವರದಿಯಾಗಿದೆ. ಖಾಸಗಿ ಕಾರ್ಖಾನೆಯೊಂದರ ರೈಲು ಇದಾಗಿದ್ದು, ಸುಣ್ಣದ ಕಲ್ಲುಗಳನ್ನು ಸಾಗಿಸುತ್ತಿತ್ತು ಎನ್ನಲಾಗಿದೆ.ಈ ರೈಲು ಹಾಗೂ ರೈಲ್ವೆ ಇಲಾಖೆಗೆ ಯಾವುದೇ ಸಂಬಂಧವಿಲ್ಲ ಎಂಬುದು ತಿಳಿದುಬಂದಿದೆ.

DUNGRI ಲೈಮ್‌ಸ್ಟೋನ್ ಮೈನ್ಸ್ ಮತ್ತು ACC BARGARH (ಈಗ ಅದಾನಿ ಗ್ರೂಪ್‌) ಸಿಮೆಂಟ್ ಪ್ಲಾಂಟ್ ನಡುವೆ ಖಾಸಗಿ ನ್ಯಾರೋ ಗೇಜ್ ರೈಲು ಮಾರ್ಗವಿದೆ ಅಲ್ಲಿ ಈ ರೈಲು ಸಂಚರಿಸುತ್ತಿತ್ತು, ಲೈನ್, ವ್ಯಾಗನ್, ಲೊಕೊ ಎಲ್ಲವೂ ಖಾಸಗಿಯಾಗಿದ್ದು ಇದು ಭಾರತೀಯ ರೈಲ್ವೆ ವ್ಯವಸ್ಥೆಯೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ. ಆ ರೈಲು ಮಾರ್ಗದಲ್ಲಿ ಇಂದು ಮುಂಜಾನೆ ಹಳಿ ತಪ್ಪಿದೆ.

ಕಳೆದ ಎರಡು ದಿನಗಳ ಹಿಂದೆ ಒಡಿಶಾದಲ್ಲಿ ತ್ರಿವಳಿ ರೈಲುಗಳ ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಖಾಸಗಿ ಗೂಡ್ಸ್​ ರೈಲೊಂದು ಹಳಿ ತಪ್ಪಿರುವ ಘಟನೆ ಬರ್ಘಾ ಜಿಲ್ಲೆಯಲ್ಲಿ ನಡೆದಿದೆ. ಐದು ಬೋಗಿಗಳು ಹಳಿ ತಪ್ಪಿವೆ. ಸಾವು ನೋವಿನ ಬಗ್ಗೆ ಇನ್ನೂ ವರದಿಯಾಗಿಲ್ಲ ಜೂ.2ರಂದು ಬಹನಾಗದಲ್ಲಿ 3 ರೈಲುಗಳ ನಡುವೆ ಡಿಕ್ಕಿಯಾಗಿತ್ತು.

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದಲ್ಲಿ 3 ರೈಲುಗಳ ನಡುವೆ ಡಿಕ್ಕಿಯಾಗಿ 257 ಮಂದಿ ಸಾವನ್ನಪ್ಪಿದ್ದರು. ಖಾಸಗಿ ಕಾರ್ಖಾನೆಯೊಂದರ ರೈಲು ಇದಾಗಿದ್ದು, ಸುಣ್ಣದ ಕಲ್ಲುಗಳನ್ನು ಸಾಗಿಸುತ್ತಿತ್ತು ಎನ್ನಲಾಗಿದೆ.

ಸೋಮವಾರ, ಮೂರು ರೈಲುಗಳ ಘರ್ಷಣೆಯಿಂದ ಹಾನಿಗೊಳಗಾದ ಹಳಿಗಳನ್ನು ಸರಿಪಡಿಸಿದ ನಂತರ ಬಗನಗಾ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲು ಸೇವೆಗಳು ಪುನರಾರಂಭಗೊಂಡವು. ಭಾರೀ ಘರ್ಷಣೆಯ ಸುಮಾರು 51 ಗಂಟೆಗಳ ನಂತರ, ಮುಖ್ಯ ಮಾರ್ಗದ ಎರಡೂ ಟ್ರ್ಯಾಕ್‌ಗಳಲ್ಲಿ ಸೇವೆಗಳು ಪುನರಾರಂಭಗೊಂಡವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:21 am, Mon, 5 June 23

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ