AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ವಿನ್ಯಾಸದ ಬೆಲ್ಟ್‌ನಲ್ಲಿ ಸಿಕ್ತು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನ: ಪ್ರಯಾಣಿಕನ ಚತುರತೆಗೆ ಅಧಿಕಾರಿಗಳು ದಂಗು

ಆರೋಪಿಗಳು ತಪ್ಪಿಸಿಕೊಳ್ಳಲು ವಿಮಾನ ನಿಲ್ದಾಣದಲ್ಲಿ ಕೆಲವು ಪ್ರಯಾಣಿಕರಿಂದ ಗಲಾಟೆಯನ್ನು ಸೃಷ್ಟಿಸಿದರು. ಈ ವೇಳೆ ಅಧಿಕಾರಿಗಳು ಗುಂಪನ್ನು ಚದುರಿಸಿ ಒಟ್ಟು 6 ಪ್ರಯಾಣಿಕರನ್ನು ವಶಕ್ಕೆ ಪಡೆದಿದ್ದಾರೆ.

ವಿಶೇಷ ವಿನ್ಯಾಸದ ಬೆಲ್ಟ್‌ನಲ್ಲಿ ಸಿಕ್ತು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನ: ಪ್ರಯಾಣಿಕನ ಚತುರತೆಗೆ ಅಧಿಕಾರಿಗಳು ದಂಗು
ವಿಶೇಷ ವಿನ್ಯಾಸದ ಬೆಲ್ಟ್‌ನಲ್ಲಿ ಸಿತ್ತು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನ
TV9 Web
| Edited By: |

Updated on:Sep 11, 2022 | 5:04 PM

Share

ಮುಂಬೈ: ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭಾನುವಾರ ಸುಮಾರು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಸುಡಾನ್ ಪ್ರಯಾಣಿಕರೊಬ್ಬರು ಧರಿಸಿದ್ದ ವಿಶೇಷ ವಿನ್ಯಾಸದ ಬೆಲ್ಟ್‌ನಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಆರೋಪಿಗಳು ತಪ್ಪಿಸಿಕೊಳ್ಳಲು ವಿಮಾನ ನಿಲ್ದಾಣದಲ್ಲಿ ಕೆಲವು ಪ್ರಯಾಣಿಕರಿಂದ ಗಲಾಟೆಯನ್ನು ಸೃಷ್ಟಿಸಿದರು. ಈ ವೇಳೆ ಅಧಿಕಾರಿಗಳು ಗುಂಪನ್ನು ಚದುರಿಸಿ ಒಟ್ಟು 6 ಪ್ರಯಾಣಿಕರನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಈ 6 ಮಂದಿಯನ್ನು ಗಡಿಪಾರು ಮಾಡಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿ ತಿಳಿಸಿದ್ದಾರೆ.

ಇನ್ನು ಇದಕ್ಕೂ ಮುನ್ನ ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 13 ಕೋಟಿ ಮೌಲ್ಯದ 1.3 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದರು. ಪೊಲೀಸ್ ಅಧಿಕಾರಿಗಳು ಘಾನಾದಿಂದ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಆಗಸ್ಟ್ 28 ರಂದು ಆತನನ್ನು ಬಂಧಿಸಲಾಗಿತ್ತು.

ಮೂಲಗಳ ಪ್ರಕಾರ, ಆರೋಪಿಯು ತನ್ನ ಹೊಟ್ಟೆಯಲ್ಲಿ ಕೊಕೇನ್ ಡ್ರಗ್ಸ್ ಅನ್ನು ಬಚ್ಚಿಟ್ಟಿಕೊಂಡಿದ್ದ. ಮಾಹಿತಿ ತಿಳಿದ ಬಳಿಕ ಅಧಿಕಾರಿಗಳು ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಆತನ ಹೊಟ್ಟೆಯಲ್ಲಿದ್ದ 87 ಕ್ಯಾಪ್ಸೂಲ್‌ಗಳನ್ನು ವಶಪಡಿಸಿಕೊಂಡಿದ್ದರು. ಮುಂಬೈ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:48 pm, Sun, 11 September 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ