AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ವಿನ್ಯಾಸದ ಬೆಲ್ಟ್‌ನಲ್ಲಿ ಸಿಕ್ತು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನ: ಪ್ರಯಾಣಿಕನ ಚತುರತೆಗೆ ಅಧಿಕಾರಿಗಳು ದಂಗು

ಆರೋಪಿಗಳು ತಪ್ಪಿಸಿಕೊಳ್ಳಲು ವಿಮಾನ ನಿಲ್ದಾಣದಲ್ಲಿ ಕೆಲವು ಪ್ರಯಾಣಿಕರಿಂದ ಗಲಾಟೆಯನ್ನು ಸೃಷ್ಟಿಸಿದರು. ಈ ವೇಳೆ ಅಧಿಕಾರಿಗಳು ಗುಂಪನ್ನು ಚದುರಿಸಿ ಒಟ್ಟು 6 ಪ್ರಯಾಣಿಕರನ್ನು ವಶಕ್ಕೆ ಪಡೆದಿದ್ದಾರೆ.

ವಿಶೇಷ ವಿನ್ಯಾಸದ ಬೆಲ್ಟ್‌ನಲ್ಲಿ ಸಿಕ್ತು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನ: ಪ್ರಯಾಣಿಕನ ಚತುರತೆಗೆ ಅಧಿಕಾರಿಗಳು ದಂಗು
ವಿಶೇಷ ವಿನ್ಯಾಸದ ಬೆಲ್ಟ್‌ನಲ್ಲಿ ಸಿತ್ತು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನ
TV9 Web
| Edited By: ಆಯೇಷಾ ಬಾನು|

Updated on:Sep 11, 2022 | 5:04 PM

Share

ಮುಂಬೈ: ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭಾನುವಾರ ಸುಮಾರು 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಸುಡಾನ್ ಪ್ರಯಾಣಿಕರೊಬ್ಬರು ಧರಿಸಿದ್ದ ವಿಶೇಷ ವಿನ್ಯಾಸದ ಬೆಲ್ಟ್‌ನಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಆರೋಪಿಗಳು ತಪ್ಪಿಸಿಕೊಳ್ಳಲು ವಿಮಾನ ನಿಲ್ದಾಣದಲ್ಲಿ ಕೆಲವು ಪ್ರಯಾಣಿಕರಿಂದ ಗಲಾಟೆಯನ್ನು ಸೃಷ್ಟಿಸಿದರು. ಈ ವೇಳೆ ಅಧಿಕಾರಿಗಳು ಗುಂಪನ್ನು ಚದುರಿಸಿ ಒಟ್ಟು 6 ಪ್ರಯಾಣಿಕರನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಈ 6 ಮಂದಿಯನ್ನು ಗಡಿಪಾರು ಮಾಡಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿ ತಿಳಿಸಿದ್ದಾರೆ.

ಇನ್ನು ಇದಕ್ಕೂ ಮುನ್ನ ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 13 ಕೋಟಿ ಮೌಲ್ಯದ 1.3 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದರು. ಪೊಲೀಸ್ ಅಧಿಕಾರಿಗಳು ಘಾನಾದಿಂದ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಆಗಸ್ಟ್ 28 ರಂದು ಆತನನ್ನು ಬಂಧಿಸಲಾಗಿತ್ತು.

ಮೂಲಗಳ ಪ್ರಕಾರ, ಆರೋಪಿಯು ತನ್ನ ಹೊಟ್ಟೆಯಲ್ಲಿ ಕೊಕೇನ್ ಡ್ರಗ್ಸ್ ಅನ್ನು ಬಚ್ಚಿಟ್ಟಿಕೊಂಡಿದ್ದ. ಮಾಹಿತಿ ತಿಳಿದ ಬಳಿಕ ಅಧಿಕಾರಿಗಳು ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಆತನ ಹೊಟ್ಟೆಯಲ್ಲಿದ್ದ 87 ಕ್ಯಾಪ್ಸೂಲ್‌ಗಳನ್ನು ವಶಪಡಿಸಿಕೊಂಡಿದ್ದರು. ಮುಂಬೈ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:48 pm, Sun, 11 September 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ