AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುತ್ತಿರುವ ಬೆಂಕಿ ಅವಘಡ; 1441 ಸ್ಕೂಟರ್​​ಗಳನ್ನು ವಾಪಸ್​ ಪಡೆಯುವುದಾಗಿ ಹೇಳಿದ ಓಲಾ ಎಲೆಕ್ಟ್ರಿಕ್​ ಕಂಪನಿ

ಕೇವಲ ಓಲಾ ಅಷ್ಟೇ ಅಲ್ಲ. ಇತ್ತೀಚೆಗೆ ನಡೆದ ಬೆಂಕಿ ಅವಘಡಗಳ ಕಾರಣದಿಂದ ಒಕಿನಾವಾ ಅಟೋಟೆಕ್​ ತನ್ನ 3000 ಎಲೆಕ್ಟ್ರಿಕ್​ ಸ್ಕೂಟರ್​ಗಳನ್ನು ವಾಪಸ್ ಪಡೆದಿದೆ. ಹಾಗೇ, ಪ್ಯೂರ್​ ಇವಿ ಕೂಡ 2000 ದ್ವಿಚಕ್ರ ವಾಹನಗಳನ್ನು ಹಿಂಪಡೆದಿದೆ.

ಹೆಚ್ಚುತ್ತಿರುವ ಬೆಂಕಿ ಅವಘಡ; 1441 ಸ್ಕೂಟರ್​​ಗಳನ್ನು ವಾಪಸ್​ ಪಡೆಯುವುದಾಗಿ ಹೇಳಿದ ಓಲಾ ಎಲೆಕ್ಟ್ರಿಕ್​ ಕಂಪನಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 24, 2022 | 6:36 PM

Share

ಎಲೆಕ್ಟ್ರಿಕ್​ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹೊತ್ತಲ್ಲೇ, ಸಾಲುಸಾಲು ಎಲೆಕ್ಟ್ರಿಕ್​ ಸ್ಕೂಟರ್​ಗಳಲ್ಲಿ ಬೆಂಕಿ ಕಾಣಿಸಿಕೊಂಡು, ವಾಹನಗಳೆಲ್ಲ ಹೊತ್ತಿ ಉರಿದ ಘಟನೆಗಳು ದೇಶದ ವಿವಿಧ ಭಾಗಗಳಲ್ಲಿ ನಡೆದಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮತ್ತು ಭವಿಷ್ಯದಲ್ಲಿ ಇಂಧನ ಕೊರತೆಯಾಗುವುದನ್ನು ತಪ್ಪಿಸುವ ಸಲುವಾಗಿ ಎಲೆಕ್ಟ್ರಿಕ್​ ವಾಹನಗಳನ್ನು ತಯಾರಿಸಲಾಗಿದೆ. ಇದು ಮಾರುಕಟ್ಟೆಗೆ ಬಂದ ಮೊದಮೊದಲು ಜನರು ಇದರ ಬಗ್ಗೆ ಆಸಕ್ತಿ ತೋರಿಸಿರಲಿಲ್ಲ. ಆದರೆ ಈಗೀಗ ಎಲೆಕ್ಟ್ರಿಕ್​ ವಾಹನಗಳನ್ನು ಕೊಳ್ಳುವವರ ಸಂಖ್ಯೆ ಏರುತ್ತಿದೆ. ಜನರು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಆದರೆ ಎಲೆಕ್ಟ್ರಿಕ್​ ಸ್ಕೂಟರ್​​ಗಳಿಗೆ ಪದೇಪದೆ ಬೆಂಕಿ ತಗುಲುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬ್ಯಾಟರಿ ಗುಣಮಟ್ಟವೇ ಬೆಂಕಿ ಉಂಟಾಗಲು ಕಾರಣ ಎಂದು ತಜ್ಞರು ಹೇಳಿದ್ದರೆ, ಕೇಂದ್ರ ಸರ್ಕಾರವೂ ಕೂಡ ಸೂಕ್ತ ತನಿಖೆಗೆ ಆದೇಶಿಸಿದೆ.

ಈ ಮಧ್ಯೆ ಓಲಾ ಎಲೆಕ್ಟ್ರಿಕ್​ ಕಂಪನಿ ಈಗಾಗಲೇ ಮಾರುಕಟ್ಟೆಗೆ ಬಿಡುಗಡೆ ಮಾಡಿದ ತನ್ನ 1441 ಸ್ಕೂಟರ್​ಗಳನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿದೆ. ವಾಹನಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದರಿಂದಲೇ ಸ್ಕೂಟರ್​ಗಳನ್ನು ಹಿಂಪಡೆಯುತ್ತಿರುವುದಾಗಿ ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ. ಹಾಗೇ, ಪುಣೆಯಲ್ಲಿ ಮಾರ್ಚ್​ 26ರಂದು ನಡೆದ ಘಟನೆಗೆ ಕಾರಣವೇನು ಎಂಬ ಬಗ್ಗೆ ಕೂಲಂಕಷ ಪರಿಶೀಲನೆ ನಡೆಸುತ್ತಿರುವುದಾಗಿಯೂ ಓಲಾ ಹೇಳಿದೆ. ಪುಣೆಯ ದಾನೋರಿ ಏರಿಯಾದಲ್ಲಿ ಮಾರ್ಚ್​ 26ರಂದು ನಿಂತಿದ್ದ ಓಲಾ ಎಲೆಕ್ಟ್ರಿಕ್​ ಸ್ಕೂಟರ್​​ನಲ್ಲಿ ಒಮ್ಮೆಲೇ ಬೆಂಕಿ ಕಾಣಿಸಿಕೊಂಡು, ಧಗಧಗನೇ ಹೊತ್ತಿ ಉರಿದಿತ್ತು. ನಾವು ಕೂಡಲೇ ಈ ಬಗ್ಗೆ ತನಿಖೆ ಪ್ರಾರಂಭ ಮಾಡುವುದಾಗಿ ಅಂದೇ ಓಲಾ ಹೇಳಿತ್ತು.

ಎಲೆಕ್ಟ್ರಿಕ್​ ಸ್ಕೂಟರ್​​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳುವ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೂಕ್ಷ್ಮವಾಗಿ ಪರೀಕ್ಷೆಯ ಅಗತ್ಯವಿದೆ. ಹೀಗಾಗಿ ಒಂದು ನಿರ್ಧಿಷ್ಟ ಬ್ಯಾಚ್​​ನಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗಿರುವ ಸುಮಾರು 1441 ಸ್ಕೂಟರ್​ಗಳನ್ನು ಹಿಂಪಡೆಯುತ್ತಿದ್ದೇವೆ. ಅವುಗಳಲ್ಲಿ ಏನು ಸಮಸ್ಯೆಯಿದೆ? ಯಾವ ಕಾರಣಕ್ಕಾಗಿ ಬೆಂಕಿ ಕಾಣಿಸಿಕೊಳ್ಳುತ್ತಿದೆ ಎಂಬುದನ್ನು ಸಮಗ್ರವಾಗಿ ಪರಿಶೀಲನೆ ಮಾಡಲಾಗುವುದು ಎಂದು ಓಲಾ ಪ್ರಕಟಣೆಯಲ್ಲಿ ತಿಳಿಸಿದೆ. ಹೀಗೆ ಹಿಂಪಡೆದ ಸ್ಕೂಟರ್​ಗಳನ್ನೆಲ್ಲ ನಮ್ಮ ಇಂಜಿನಿಯರ್​​ಗಳು ಪರಿಶೀಲನೆ ಮಾಡಲಿದ್ದಾರೆ. ಬ್ಯಾಟರಿ ವ್ಯವಸ್ಥೆಯಿಂದ ಹಿಡಿದು, ಪ್ರತಿಯೊಂದನ್ನೂ ಪರೀಕ್ಷಿಸಲಾಗುವುದು ಎಂದೂ ಹೇಳಿದೆ.

ಕೇವಲ ಓಲಾ ಅಷ್ಟೇ ಅಲ್ಲ. ಇತ್ತೀಚೆಗೆ ನಡೆದ ಬೆಂಕಿ ಅವಘಡಗಳ ಕಾರಣದಿಂದ ಒಕಿನಾವಾ ಅಟೋಟೆಕ್​ ತನ್ನ 3000 ಎಲೆಕ್ಟ್ರಿಕ್​ ಸ್ಕೂಟರ್​ಗಳನ್ನು ವಾಪಸ್ ಪಡೆದಿದೆ. ಹಾಗೇ, ಪ್ಯೂರ್​ ಇವಿ ಕೂಡ 2000 ದ್ವಿಚಕ್ರ ವಾಹನಗಳನ್ನು ಹಿಂಪಡೆದಿದೆ. ಕೇಂದ್ರ ಸರ್ಕಾರ ಕೂಡ ಒಂದು ತಜ್ಞರ ಸಮಿತಿ ರಚಿಸಿ, ತಪಾಸಣೆ ನಡೆಸಲು ಸೂಚಿಸಿದೆ. ಅಷ್ಟೇ ಅಲ್ಲ, ಕಂಪನಿಗಳು ನಿರ್ಲಕ್ಷ್ಯ ತೋರಿದರೆ ದಂಡ ವಿಧಿಸುವುದಾಗಿಎಚ್ಚರಿಕೆಯನ್ನೂ ನೀಡಿದೆ.

ಇದನ್ನೂ ಓದಿ: Video: ಟ್ರಕ್​​ನಲ್ಲಿ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಎಲೆಕ್ಟ್ರಿಕ್​ ಸ್ಕೂಟರ್​​ಗಳಿಗೆ ಬೆಂಕಿ; ಧಗಧಗನೆ ಹೊತ್ತಿ ಉರಿದ 20 ವಾಹನಗಳು !

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್