AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Special Session: ನಾವು ಹೊಸ ಸಂಸತ್ ​ಭವನಕ್ಕೆ ಹೋಗುತ್ತಿರುವುದು ನಿಜ ಆದರೆ ಹಳೆಯ ಭವನವು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿರುತ್ತದೆ: ನರೇಂದ್ರ ಮೋದಿ

ನಾವು ಹೊಸ ಸಂಸತ್ ಭವನಕ್ಕೆ ಹೋಗುತ್ತಿದ್ದೇವೆ ನಿಜ ಆದರೆ ಹಳೆಯ ಭವನವು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದಿನಿಂದ ಆರಂಭವಾದ ಸಂಸತ್ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಹಳೆ ಸಂಸತ್ ಭವನದಲ್ಲಿ ನಡೆಯಲಿರುವ ಕೊನೆಯ ಅಧಿವೇಶನ ಐತಿಹಾಸಿಕವಾಗಲಿದೆ. ಸ್ವಾತಂತ್ರ್ಯಕ್ಕೂ ಮುನ್ನ ಇದನ್ನು ಇಂಪೀರಿಯಲ್ ಲೆಜಿಸ್ಲೇಟಿವ್ ಕೌನ್ಸಿಲ್ ಎಂದು ಕರೆಯುತ್ತಿದ್ದೆವು, ಸ್ವಾತಂತ್ರ್ಯ ನಂತರ ಸದನ ಎಂದು ಕರೆಯಲು ಶುರು ಮಾಡಿದೆವು. ಭಾರತದ ನಿರ್ಮಾಣದ ನಿರ್ಣ ವಿದೇಶಿ ಶಾಸಕರದ್ದಾಗಿತ್ತು.

Parliament Special Session: ನಾವು ಹೊಸ ಸಂಸತ್ ​ಭವನಕ್ಕೆ ಹೋಗುತ್ತಿರುವುದು ನಿಜ ಆದರೆ ಹಳೆಯ ಭವನವು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿರುತ್ತದೆ: ನರೇಂದ್ರ ಮೋದಿ
ನರೇಂದ್ರ ಮೋದಿ Image Credit source: Sansad TV
ನಯನಾ ರಾಜೀವ್
|

Updated on:Sep 18, 2023 | 12:19 PM

Share

ನಾವು ಹೊಸ ಸಂಸತ್ ಭವನಕ್ಕೆ ಹೋಗುತ್ತಿದ್ದೇವೆ ನಿಜ ಆದರೆ ಹಳೆಯ ಭವನವು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದಿನಿಂದ ಆರಂಭವಾದ ಸಂಸತ್ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು, ಹಳೆ ಸಂಸತ್ ಭವನದಲ್ಲಿ ನಡೆಯಲಿರುವ ಕೊನೆಯ ಅಧಿವೇಶನ ಐತಿಹಾಸಿಕವಾಗಲಿದೆ. ಸ್ವಾತಂತ್ರ್ಯಕ್ಕೂ ಮುನ್ನ ಇದನ್ನು ಇಂಪೀರಿಯಲ್ ಲೆಜಿಸ್ಲೇಟಿವ್ ಕೌನ್ಸಿಲ್ ಎಂದು ಕರೆಯುತ್ತಿದ್ದೆವು, ಸ್ವಾತಂತ್ರ್ಯ ನಂತರ ಸದನ ಎಂದು ಕರೆಯಲು ಶುರು ಮಾಡಿದೆವು. ಭಾರತದ ನಿರ್ಮಾಣದ ನಿರ್ಣ ವಿದೇಶಿ ಶಾಸಕರದ್ದಾಗಿತ್ತು.

ಆದರೆ ಈ ಸಂಸತ್ ಭವನ ನಿರ್ಮಾಣದಲ್ಲಿ ಬೆವರು ಭಾರತೀಯರದ್ದಿದೆ, ಪರಿಶ್ರಮ ನಮ್ಮ ದೇಶದವರದ್ದು, ಹಣ ಕೂಡ ನಮ್ಮ ದೇಶದವರದ್ದು. ಹೀಗಾಗಿ ಈ ಹಳೆಯ ಸಂಸತ್ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ಮೋದಿ ಹೇಳಿದ್ದಾರೆ . ಈ ಅಮೃತ ಕಾಲದಲ್ಲಿ ಹೊಸ ಹುಮ್ಮಸ್ಸು, ಹೊಸ ಉತ್ಸಾಹ, ಹೊಸ ಸಂಕಲ್ಪವನ್ನು ಹೊತ್ತು ಹೊಸ ಸಂಸತ್ ಭವನಕ್ಕೆ ಹೋಗುತ್ತಿದ್ದೇವೆ. ಭಾರತದ ಹೊಸ ಸಾಮರ್ಥ್ಯಕ್ಕೆ ಇಡೀ ವಿಶ್ವವೇ ಬೆರಗಾಗುತ್ತಿದೆ.

ಮತ್ತಷ್ಟು ಓದಿ: Parliament Special Session: 2047ರ ವೇಳೆಗೆ ಭಾರತ ಅಭಿವೃದ್ಧಿ ರಾಷ್ಟ್ರವಾಗಬೇಕು: ಪ್ರಧಾನಿ ಮೋದಿ

ಈ ಅಮೃತಕಾಲದಲ್ಲಿಯೇ ಚಂದ್ರಯಾನವನ್ನು ಯಶಸ್ವಿಯಾಗಿ ಪೂರೈಸಿದ್ದೇವೆ. ಹೊಸ ರೂಪ, ಆಧುನಿಕತೆ, ವಿಜ್ಞಾನ, ತಂತ್ರಜ್ಞಾನ, ವಿಜ್ಞಾನಿಗಳ ಸಾಮರ್ಥ್ಯ, ಸಂಕಲ್ಪ ಶಕ್ತಿಯಿಂದ ಯಶಸ್ವಿಯಾಗಿದ್ದೇವೆ ಎಂದರು.

ಮೊದಲ ಬಾರಿಗೆ ಸಂಸತ್ತಿನ ಸದಸ್ಯನಾಗಿದ್ದಾಗ.. ನಾನು ಸಂಸದನಾಗಿ ಮೊದಲ ಬಾರಿಗೆ ಈ ಕಟ್ಟಡವನ್ನು ಪ್ರವೇಶಿಸಿದಾಗ ನಾನು ಸಹಜವಾಗಿಯೇ ಸಂಸತ್ ಭವನದ ಹೊಸ್ತಿಲಲ್ಲಿ ತಲೆ ಬಾಗಿಸಿದ್ದೆ. ಈ ಪ್ರಜಾಪ್ರಭುತ್ವದ ಮಂದಿರದ ಮೇಲೆ ಭಕ್ತಿಯಿಂದ ಹೆಜ್ಜೆ ಹಾಕಿದ್ದೆ. ಆ ಕ್ಷಣ ನನಗೆ ಭಾವನೆಗಳಿಂದ ತುಂಬಿತ್ತು. ನಾನು ಊಹಿಸಲು ಸಾಧ್ಯವಿಲ್ಲ, ಆದರೆ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಮಲಗುವ ಮಗು ಸಂಸತ್ತನ್ನು ತಲುಪುತ್ತದೆ ಎಂಬುದು ಭಾರತದ ಪ್ರಜಾಪ್ರಭುತ್ವದ ಶಕ್ತಿ. ದೇಶ ನನ್ನನ್ನು ಇಷ್ಟೊಂದು ಗೌರವಿಸುತ್ತದೆ ಎಂದು ನಾನು ಊಹಿಸಿರಲಿಲ್ಲ ಎಂದು ಮೋದಿ ಹೇಳಿದ್ದಾರೆ.

ಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಿದೆ. ಈ ವಿಶೇಷ ಅಧಿವೇಶನ 5 ದಿನಗಳ ಕಾಲ ನಡೆಯಲಿದೆ, ಈ ಅಧಿವೇಶನದಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು, ಇದು ದೇಶದ ರಾಜಕೀಯದ ಮೇಲೆ ಆಳವಾದ ಪರಿಣಾಮ ಬೀರಬಹುದು. ಸಂಸತ್ ಅಧಿವೇಶನದ ಕಲಾಪ ಇಂದು ಹಳೆ ಸಂಸತ್ ಭವನದಲ್ಲಿಯೇ ನಡೆಯುತ್ತಿದೆ. ಅಧಿವೇಶನ ಆರಂಭವಾದ ಕೂಡಲೇ ಮೊದಲು ರಾಷ್ಟ್ರಗೀತೆಯನ್ನು ನುಡಿಸಿ ನಂತರ ರಾಜ್ಯಸಭೆಯ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಾಯಿತು. ಇಂದು ಸಂಸತ್ತಿನಲ್ಲಿ 75 ವರ್ಷಗಳ ಸಂಸದೀಯ ಪಯಣದ ಕುರಿತು ಚರ್ಚೆ ನಡೆಯುತ್ತಿದೆ.

ನೆಹರು ಅವರಿಂದ ಹಿಡಿದು ವಾಜಪೇಯಿವರೆಗೆ ಮಾಜಿ ಪ್ರಧಾನಿಗಳ ಕೊಡುಗೆಗಳನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ಭಾರತದಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸುವಲ್ಲಿ ಮಹಿಳಾ ಸಂಸದರ ಕೊಡುಗೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:44 am, Mon, 18 September 23

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ