Sign In

By signing in or creating an account, you agree with Associated Broadcasting Company's Terms & Conditions and Privacy Policy.

OLECTRA: ಅಸ್ಸಾಂನಿಂದ 151 ಕೋಟಿ ರೂ. ಮೌಲ್ಯದ 100 ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳಿಗೆ ಆರ್ಡರ್

ಇನ್ನು 9 ತಿಂಗಳ ಅವಧಿಯಲ್ಲಿ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​​ಗಳನ್ನು ವಿತರಿಸಲಾಗುವುದು. ಮುಂದಿನ 5 ವರ್ಷಗಳ ಅವಧಿಗೆ ಈ ಬಸ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ ಕಂಪನಿಯೇ ವಹಿಸಿಕೊಳ್ಳಲಿದೆ.

OLECTRA: ಅಸ್ಸಾಂನಿಂದ 151 ಕೋಟಿ ರೂ. ಮೌಲ್ಯದ 100 ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳಿಗೆ ಆರ್ಡರ್
ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್‌
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 03, 2022 | 12:23 PM

ಹೈದರಾಬಾದ್: ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ (OLECTRA) 100 ಎಲೆಕ್ಟ್ರಿಕ್ ಬಸ್‌ಗಳಿಗಾಗಿ ಅಸ್ಸಾಂ ರಾಜ್ಯ ಸಾರಿಗೆ ಸಂಸ್ಥೆಗಳಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದೆ. ಈಶಾನ್ಯ ರಾಜ್ಯಗಳಿಂದ ಬಂದ ಮೊದಲ ಆರ್ಡರ್ ಇದಾಗಿದೆ. ಇನ್ನು 9 ತಿಂಗಳ ಅವಧಿಯಲ್ಲಿ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​​ಗಳನ್ನು (Electric Buses) ವಿತರಿಸಲಾಗುವುದು. ಮುಂದಿನ 5 ವರ್ಷಗಳ ಅವಧಿಗೆ ಈ ಬಸ್‌ಗಳ ನಿರ್ವಹಣೆಗೆ ಈ ಕಂಪನಿಯೇ ಜವಾಬ್ದಾರರಾಗಿರುತ್ತದೆ.

ಅಂದಹಾಗೆ, ಈ 100 ಎಲೆಕ್ಟ್ರಿಕ್ ಬಸ್‌ಗಳ ಪೂರೈಕೆಯ ಮೌಲ್ಯವು ಅಂದಾಜು 151 ಕೋಟಿ ರೂ. ಆಗಿದೆ. ಈ ಬಗ್ಗೆ ಒಲೆಕ್ಟ್ರಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಕೆ.ವಿ ಪ್ರದೀಪ್ ಮಾತನಾಡಿ, “ಈಶಾನ್ಯ ರಾಜ್ಯಗಳು ಮತ್ತು ಅಸ್ಸಾಂನಿಂದ ಮೊದಲ ಆರ್ಡರ್ ಸಿಕ್ಕಿರುವುದಕ್ಕೆ ನಮಗೆ ಬಹಳ ಸಂತೋಷವಾಗಿದೆ. ಈ ಆದೇಶದೊಂದಿಗೆ, ನಮ್ಮ ಬಸ್ಸುಗಳು ಭಾರತದ ಎಲ್ಲಾ ಮೂಲೆಗಳಲ್ಲಿ ಸಂಚರಿಸುತ್ತಿವೆ. ಇಂಗಾಲದ ಹೊರಸೂಸುವಿಕೆಯನ್ನು ಈ ಬಸ್​ಗಳು ಗಣನೀಯವಾಗಿ ಕಡಿಮೆ ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: EV Trans Bus: ಪುಣೆ-ಮುಂಬೈ ಮಾರ್ಗದಲ್ಲಿ ಇವಿ ಟ್ರಾನ್ಸ್​ ಎಲೆಕ್ಟ್ರಿಕ್ ಬಸ್ ಸೇವೆ ಆರಂಭ: ಭಾರತದ ರಸ್ತೆ ಸಾರಿಗೆ ಇತಿಹಾಸದಲ್ಲಿ ಹೊಸ ದಾಖಲೆ

2000ರಲ್ಲಿ ಸ್ಥಾಪಿತವಾದ ಒಲೆಕ್ಟ್ರಾ ಗ್ರೀನ್ಟೆಕ್ ಲಿಮಿಟೆಡ್ MEIL ಗ್ರೂಪ್​ನ ಭಾಗವಾಗಿದೆ. 2015ರಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಪರಿಚಯವನ್ನು ಮಾಡಲಾಯಿತು. ಇದು ವಿದ್ಯುತ್ ಪ್ರಸರಣ ಮತ್ತು ವಿತರಣಾ ಜಾಲಗಳಿಗಾಗಿ ಸಿಲಿಕಾನ್ ರಬ್ಬರ್ ಸಂಯೋಜಿತವಾದ ಭಾರತದಲ್ಲಿನ ಅತಿದೊಡ್ಡ ಉತ್ಪಾದಕವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Sat, 3 September 22

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ