AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

OLECTRA: ಅಸ್ಸಾಂನಿಂದ 151 ಕೋಟಿ ರೂ. ಮೌಲ್ಯದ 100 ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳಿಗೆ ಆರ್ಡರ್

ಇನ್ನು 9 ತಿಂಗಳ ಅವಧಿಯಲ್ಲಿ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​​ಗಳನ್ನು ವಿತರಿಸಲಾಗುವುದು. ಮುಂದಿನ 5 ವರ್ಷಗಳ ಅವಧಿಗೆ ಈ ಬಸ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ ಕಂಪನಿಯೇ ವಹಿಸಿಕೊಳ್ಳಲಿದೆ.

OLECTRA: ಅಸ್ಸಾಂನಿಂದ 151 ಕೋಟಿ ರೂ. ಮೌಲ್ಯದ 100 ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳಿಗೆ ಆರ್ಡರ್
ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್‌
TV9 Web
| Edited By: |

Updated on:Sep 03, 2022 | 12:23 PM

Share

ಹೈದರಾಬಾದ್: ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ (OLECTRA) 100 ಎಲೆಕ್ಟ್ರಿಕ್ ಬಸ್‌ಗಳಿಗಾಗಿ ಅಸ್ಸಾಂ ರಾಜ್ಯ ಸಾರಿಗೆ ಸಂಸ್ಥೆಗಳಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದೆ. ಈಶಾನ್ಯ ರಾಜ್ಯಗಳಿಂದ ಬಂದ ಮೊದಲ ಆರ್ಡರ್ ಇದಾಗಿದೆ. ಇನ್ನು 9 ತಿಂಗಳ ಅವಧಿಯಲ್ಲಿ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​​ಗಳನ್ನು (Electric Buses) ವಿತರಿಸಲಾಗುವುದು. ಮುಂದಿನ 5 ವರ್ಷಗಳ ಅವಧಿಗೆ ಈ ಬಸ್‌ಗಳ ನಿರ್ವಹಣೆಗೆ ಈ ಕಂಪನಿಯೇ ಜವಾಬ್ದಾರರಾಗಿರುತ್ತದೆ.

ಅಂದಹಾಗೆ, ಈ 100 ಎಲೆಕ್ಟ್ರಿಕ್ ಬಸ್‌ಗಳ ಪೂರೈಕೆಯ ಮೌಲ್ಯವು ಅಂದಾಜು 151 ಕೋಟಿ ರೂ. ಆಗಿದೆ. ಈ ಬಗ್ಗೆ ಒಲೆಕ್ಟ್ರಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಕೆ.ವಿ ಪ್ರದೀಪ್ ಮಾತನಾಡಿ, “ಈಶಾನ್ಯ ರಾಜ್ಯಗಳು ಮತ್ತು ಅಸ್ಸಾಂನಿಂದ ಮೊದಲ ಆರ್ಡರ್ ಸಿಕ್ಕಿರುವುದಕ್ಕೆ ನಮಗೆ ಬಹಳ ಸಂತೋಷವಾಗಿದೆ. ಈ ಆದೇಶದೊಂದಿಗೆ, ನಮ್ಮ ಬಸ್ಸುಗಳು ಭಾರತದ ಎಲ್ಲಾ ಮೂಲೆಗಳಲ್ಲಿ ಸಂಚರಿಸುತ್ತಿವೆ. ಇಂಗಾಲದ ಹೊರಸೂಸುವಿಕೆಯನ್ನು ಈ ಬಸ್​ಗಳು ಗಣನೀಯವಾಗಿ ಕಡಿಮೆ ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: EV Trans Bus: ಪುಣೆ-ಮುಂಬೈ ಮಾರ್ಗದಲ್ಲಿ ಇವಿ ಟ್ರಾನ್ಸ್​ ಎಲೆಕ್ಟ್ರಿಕ್ ಬಸ್ ಸೇವೆ ಆರಂಭ: ಭಾರತದ ರಸ್ತೆ ಸಾರಿಗೆ ಇತಿಹಾಸದಲ್ಲಿ ಹೊಸ ದಾಖಲೆ

2000ರಲ್ಲಿ ಸ್ಥಾಪಿತವಾದ ಒಲೆಕ್ಟ್ರಾ ಗ್ರೀನ್ಟೆಕ್ ಲಿಮಿಟೆಡ್ MEIL ಗ್ರೂಪ್​ನ ಭಾಗವಾಗಿದೆ. 2015ರಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಪರಿಚಯವನ್ನು ಮಾಡಲಾಯಿತು. ಇದು ವಿದ್ಯುತ್ ಪ್ರಸರಣ ಮತ್ತು ವಿತರಣಾ ಜಾಲಗಳಿಗಾಗಿ ಸಿಲಿಕಾನ್ ರಬ್ಬರ್ ಸಂಯೋಜಿತವಾದ ಭಾರತದಲ್ಲಿನ ಅತಿದೊಡ್ಡ ಉತ್ಪಾದಕವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Sat, 3 September 22

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​