Vinesh Phogat: ಶಂಭು ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆಗೆ ವಿನೇಶ್ ಫೋಗಟ್ ಬೆಂಬಲ

ಇವರು ಇಲ್ಲಿ ಕುಳಿತು 200 ದಿನಗಳು ಕಳೆದಿವೆ, ಇದನ್ನು ನೋಡುವುದು ನೋವುಂಟುಮಾಡುತ್ತದೆ, ಅವರೆಲ್ಲರೂ ಈ ದೇಶದ ನಾಗರಿಕರು, ರೈತರು ದೇಶವನ್ನು ನಡೆಸುತ್ತಾರೆ, ಅವರಿಲ್ಲದೆ ಏನೂ ಸಾಧ್ಯವಿಲ್ಲ. ಅವರು ನಮಗೆ ಆಹಾರವನ್ನು ನೀಡದಿದ್ದರೆ ಕ್ರೀಡಾಪಟುಗಳಿಗೂ ಏನೂ ಮಾಡಲು ಆಗುವುದಿಲ್ಲ. ನಾವು ಅನೇಕ ಬಾರಿ ಅಸಹಾಯಕರಾಗಿದ್ದೇವೆ. ಏನನ್ನೂ ಮಾಡಲು ಸಾಧ್ಯವಾಗುವುದಿಲ್ಲ ಎಂದು ರೈತರ ಪ್ರತಿಭಟನೆಯಲ್ಲಿ ಭಾಗಿಯಾದ ವಿನೇಶ್ ಫೋಗಟ್ ಹೇಳಿದ್ದಾರೆ.

Vinesh Phogat: ಶಂಭು ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆಗೆ ವಿನೇಶ್ ಫೋಗಟ್ ಬೆಂಬಲ
ವಿನೇಶ್ ಫೋಗಟ್
Follow us
|

Updated on:Aug 31, 2024 | 1:12 PM

ದೆಹಲಿ ಆಗಸ್ಟ್ 31: ಒಲಿಂಪಿಯನ್ ವಿನೇಶ್ ಫೋಗಟ್ (Vinesh Phogat) ಅವರು ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಖಾತರಿಗಾಗಿ ಆಗ್ರಹಿಸಿ ರೈತರು ಪ್ರತಿಭಟನೆ (Farmers Protest) ನಡೆಸುತ್ತಿದ್ದು ಆಗಸ್ಟ್ 31 ರ ಶನಿವಾರದಂದು ಈ ಪ್ರತಿಭಟನೆ 200 ನೇ ದಿನಕ್ಕೆ ಕಾಲಿಟ್ಟಿದೆ. ಖಾನೌರಿ, ಶಂಭು ಮತ್ತು ರತನ್‌ಪುರ ಗಡಿಗಳಲ್ಲಿಯೂ ಪ್ರತಿಭಟನೆ ನಡೆಯಲಿದೆ. ಎಲ್ಲಾ ಬೆಳೆಗಳಿಗೆ ಎಂಎಸ್‌ಪಿಗೆ ಕಾನೂನು ಗ್ಯಾರಂಟಿ ಕೇಳುತ್ತಿರುವ ರೈತರು, ಇತರ ನಿರ್ಣಾಯಕ ಸಮಸ್ಯೆಗಳೊಂದಿಗೆ ಫೆಬ್ರವರಿ 13 ರಿಂದ ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಗೆ ಅವರ ಮೆರವಣಿಗೆಯನ್ನು ತಡೆದ ನಂತರ ರೈತರು ಇಲ್ಲಿ ಪ್ರತಿಭಟನೆಗೆ ಕುಳಿತಿದ್ದಾರೆ.

ಖ್ಯಾತ ಕ್ರೀಡಾಪಟು ಮತ್ತು ರೈತ ಚಳವಳಿಯ ಬೆಂಬಲಿಗರಾದ ವಿನೇಶ್ ಫೋಗಟ್ ಅವರನ್ನು ದಿನದ ಕಾರ್ಯಕ್ರಮಗಳಲ್ಲಿ ರೈತರು ಸನ್ಮಾನಿಸಿದರು.

“ಇವರು ಇಲ್ಲಿ ಕುಳಿತು 200 ದಿನಗಳು ಕಳೆದಿವೆ, ಇದನ್ನು ನೋಡುವುದು ನೋವುಂಟುಮಾಡುತ್ತದೆ, ಅವರೆಲ್ಲರೂ ಈ ದೇಶದ ನಾಗರಿಕರು, ರೈತರು ದೇಶವನ್ನು ನಡೆಸುತ್ತಾರೆ, ಅವರಿಲ್ಲದೆ ಏನೂ ಸಾಧ್ಯವಿಲ್ಲ. ಅವರು ನಮಗೆ ಆಹಾರವನ್ನು ನೀಡದಿದ್ದರೆ ಕ್ರೀಡಾಪಟುಗಳಿಗೂ ಏನೂ ಮಾಡಲು ಆಗುವುದಿಲ್ಲ. ನಾವು ಅನೇಕ ಬಾರಿ ಅಸಹಾಯಕರಾಗಿದ್ದೇವೆ. ಏನನ್ನೂ ಮಾಡಲು ಸಾಧ್ಯವಾಗುವುದಿಲ್ಲ, ನಾವು ಅಂತಹ ದೊಡ್ಡ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುತ್ತೇವೆ. ಆದರೆ ಅವರು ದುಃಖಿತರಾಗಿರುವುದನ್ನು ನೋಡಿದಾಗಲೂ ನಮ್ಮಿಂದ ಅವರ ಕುಟುಂಬಕ್ಕಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ. ರೈತರ ಸಮಸ್ಯೆ ಆಲಿಸಬೇಕು ಎಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಕಳೆದ ಬಾರಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದ ಅವರು ಕೊಟ್ಟ ಭರವಸೆಯನ್ನು ಈಡೇರಿಸಬೇಕು. ಜನರು ಹೀಗೆ ಬೀದಿಯಲ್ಲಿ ಕುಳಿತರೆ ದೇಶ ಪ್ರಗತಿಯಾಗುವುದಿಲ್ಲ ಎಂದು ವಿನೇಶ್ ಹೇಳಿದ್ದಾರೆ.

ವಿನೇಶ್ ಅವರು ಮಹಿಳೆಯರ 50 ಕೆಜಿ ವಿಭಾಗದಲ್ಲಿ ಫೈನಲ್‌ಗೆ ತಲುಪಿದ ನಂತರ ತೂತ ಜಾಸ್ತಿ ಎಂಬ ಕಾರಣದಿಂದಾಗಿ ಅವರು ಫೈನಲ್ ಪಂದ್ಯಕ್ಕೆ ಅನರ್ಹರಾಗಿದ್ದರು. ಚಿನ್ನ ಅಥವಾ ಬೆಳ್ಳಿ ಪದಕ ನಿರೀಕ್ಷೆಯಲ್ಲಿದ್ದ ವಿನೇಶ್ ಅನರ್ಹತೆಯಿಂದಾಗಿ ಬರಿಗೈಯಲ್ಲಿ ಭಾರತಕ್ಕೆ ಮರಳಿದರು. ಇದಾದ ನಂತರ ವಿನೇಶ್ ಕುಸ್ತಿಯಿಂದ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸಿದ್ದರು.

ಅಮೃತಸರ ಜಿಲ್ಲೆಯ ರೈತ ಮುಖಂಡ ಬಲದೇವ್ ಸಿಂಗ್ ಬಗ್ಗಾ ಅವರು ಸರ್ಕಾರದೊಂದಿಗೆ ಸಂವಹನ ನಡೆಸುವ ಪ್ರಯತ್ನಗಳಿಗೆ ಉತ್ತರವಿಲ್ಲ ಎಂದು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

‘ರೈತ ಸಂಘಟನೆಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಹಲವು ಬಾರಿ ಪತ್ರ ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮೋದಿ ಅಧಿಕಾರಕ್ಕೆ 11ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಬದಲು ಸರ್ಕಾರ ರೈತರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ” ಬಲದೇವ್ ಸಿಂಗ್ ಬಗ್ಗಾ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ.

ಕಿಸಾನ್ ಮಜ್ದೂರ್ ಮೋರ್ಚಾದ ಸಂಚಾಲಕ ಸರ್ವನ್ ಸಿಂಗ್ ಪಂಧೇರ್ ಅವರು ಆಗಸ್ಟ್ 31 ರಂದು ಶಂಭು ಮತ್ತು ಖಾನೌರಿ ಪಾಯಿಂಟ್‌ಗಳಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ರೈತರು ಸೇರಬೇಕೆಂದು ಮನವಿ ಮಾಡಿದರು.  “ನಾವು ಮತ್ತೊಮ್ಮೆ ನಮ್ಮ ಬೇಡಿಕೆಗಳನ್ನು ಸರ್ಕಾರಕ್ಕೆ ಪ್ರಸ್ತುತಪಡಿಸುತ್ತೇವೆ. ಹೊಸ ಘೋಷಣೆಗಳನ್ನು ಮಾಡಲಾಗುವುದು” ಎಂದು ಪಂಧೇರ್ ಹೇಳಿದ್ದಾರೆಂದು ಇಂಡಿಯಾ ಟುಡೇ ಉಲ್ಲೇಖಿಸಿದೆ.

ಇದನ್ನೂ ಓದಿ: ದೆಹಲಿಯ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಧರ್ಮೇಂದ್ರ ನೇಮಕ

ಕಂಗನಾ ರಣಾವತ್ ವಿರುದ್ಧ ಕ್ರಮ ಕೈಗೊಳ್ಳಿ

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ವಿರುದ್ಧವೂ ಕಠಿಣ ಕ್ರಮಕ್ಕೆ ರೈತರು ಒತ್ತಾಯಿಸಿದ್ದಾರೆ. ಕಂಗನಾ ರಣಾವತ್ ಅವರ ಹಿಂದಿನ ಹೇಳಿಕೆಗಳು ರೈತ ಸಮುದಾಯವನ್ನು ಕೆರಳಿಸಿದ್ದು ಆಕೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಅವರು ಬಿಜೆಪಿಯನ್ನು ಒತ್ತಾಯಿಸಿದ್ದಾರೆ. ಹೆಚ್ಚುವರಿಯಾಗಿ, ಮುಂಬರುವ ಹರ್ಯಾಣ ಚುನಾವಣೆಗೆ ತಮ್ಮ ಕಾರ್ಯತಂತ್ರವನ್ನು ಅನಾವರಣಗೊಳಿಸುವ ಬಗ್ಗೆ ರೈತರು ಸುಳಿವು ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Sat, 31 August 24

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?