AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch: ಪ್ರತಿಭಟನಾ ವೇದಿಕೆಯಿಂದ ಕೆಳಗಿಳಿಯಿರಿ ಎಂದು ಬೃಂದಾ ಕಾರಟ್​​ಗೆ ಹೇಳಿದ ಕುಸ್ತಿಪಟು ಬಜರಂಗ್ ಪುನಿಯಾ

ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪುನಿಯಾ ರಾಜಕಾರಣಿ ಬೃಂದಾ ಕಾರಟ್ ಅವರಲ್ಲಿ ದಯವಿಟ್ಟು  ವೇದಿಕೆಯಿಂದ ಕೆಳಗಿಳಿಯಿರಿ ಎಂದು ನೇರಾ ನೇರ ಹೇಳಿದ್ದಾರೆ.

Watch: ಪ್ರತಿಭಟನಾ ವೇದಿಕೆಯಿಂದ ಕೆಳಗಿಳಿಯಿರಿ ಎಂದು ಬೃಂದಾ ಕಾರಟ್​​ಗೆ ಹೇಳಿದ ಕುಸ್ತಿಪಟು ಬಜರಂಗ್ ಪುನಿಯಾ
ವೇದಿಕೆಯಿಂದ ಕೆಳಗಿಳಿಯುವಂತೆ ಬೃಂದಾ ಕಾರಟ್​​ಗೆ ಹೇಳಿದ ಪೂನಿಯಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jan 19, 2023 | 6:01 PM

Share

ಅಥ್ಲೀಟ್‌ಗಳ ಮೇಲೆ ಲೈಂಗಿಕ ಶೋಷಣೆ ನಡೆಸಿದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (Wrestling Federation of India) ಮುಖ್ಯಸ್ಥರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಕುಸ್ತಿಪಟುಗಳು ಎರಡನೇ ದಿನವೂ ಜಂತರ್ ಮಂತರ್​​ನಲ್ಲಿ ಧರಣಿ ಸತ್ಯಾಗ್ರಹವನ್ನು ಮುಂದುವರೆಸಿದ್ದಾರೆ. ಇಂದು ಗುರುವಾರ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕಿ ಬೃಂದಾ ಕಾರಟ್ (Brinda Karat) ದೆಹಲಿಯ ಜಂತರ್ ಮಂತರ್ ತಲುಪಿದ್ದಾರೆ. ಈ ಹೊತ್ತಲ್ಲಿ ಒಲಿಂಪಿಯನ್ ಬಜರಂಗ್ ಪುನಿಯಾ (Bajrang Punia),  ರಾಜಕಾರಣಿ ಬೃಂದಾ ಕಾರಟ್ ಅವರಲ್ಲಿ ದಯವಿಟ್ಟು  ವೇದಿಕೆಯಿಂದ ಕೆಳಗಿಳಿಯಿರಿ ಎಂದು ನೇರಾ ನೇರ ಹೇಳಿದ್ದಾರೆ. ಎಎನ್ಐ ಸುದ್ದಿಸಂಸ್ಥೆ ಹಂಚಿಕೊಂಡ ವಿಡಿಯೊದಲ್ಲಿ, 2022 ರ ಕಾಮನ್‌ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಪುನಿಯಾ, “ಪ್ರತಿಭಟನೆಯು ರಾಜಕೀಯ ರೂಪವನ್ನು ಪಡೆಯುವುದನ್ನು ನಾವು ಬಯಸುವುದಿಲ್ಲ” ಎಂದು ಹೇಳುವುದನ್ನು ಕೇಳಬಹುದು.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಪುನಿಯಾ ಇತರರು ಜಂತರ್ ಮಂತರ್‌ನಲ್ಲಿ ಎರಡನೇ ದಿನವೂ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.

ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ (ಡಬ್ಲ್ಯುಎಫ್‌ಐ) ಅಚ್ಚುಮೆಚ್ಚಿನ ತರಬೇತುದಾರರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಮತ್ತು ಅವರಿಗೆ ಕಿರುಕುಳ ನೀಡುತ್ತಾರೆ ಎಂದು ವಿನೇಶ್ ಆರೋಪಿಸಿದ್ದಾರೆ. ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಟೋಕಿಯೊ ಒಲಿಂಪಿಕ್ಸ್ 2020 ರಲ್ಲಿ ಸೋಲಿನ ನಂತರ ಹುಡುಗಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ತನ್ನನ್ನು ಅವರು “ಖೋಟಾ ಸಿಕ್ಕಾ” ಎಂದು ಕರೆದಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ; ದೆಹಲಿಯ ಜಂತರ್‌ಮಂತರ್‌ನಲ್ಲಿ ಖ್ಯಾತ ಕುಸ್ತಿಪಟುಗಳಿಂದ ಪ್ರತಿಭಟನೆ

ಏತನ್ಮಧ್ಯೆ, ಚಾಂಪಿಯನ್ ಕುಸ್ತಿಪಟು ಮತ್ತು ಬಿಜೆಪಿ ನಾಯಕಿ ಬಬಿತಾ ಫೋಗಟ್ ಗುರುವಾರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಆಟಗಾರರಿಗೆ ಸರ್ಕಾರ ತಮ್ಮೊಂದಿಗೆ ಇದೆ ಎಂದು ಭರವಸೆ ನೀಡಿದರು. “ಅವರ ಸಮಸ್ಯೆಗಳನ್ನು ಇಂದು ಪರಿಹರಿಸಲು ನಾನು ಪ್ರಯತ್ನಿಸುತ್ತೇನೆ” ಎಂದು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಬಿತಾ ಫೋಗಟ್ ಹೇಳಿದರು.

ಬಿಜೆಪಿಯ ಲೋಕಸಭಾ ಸಂಸದರಾದ ಬ್ರಿಜ್ ಭೂಷಣ್ ತಮ್ಮ ಮೇಲಿನ ಆರೋಪಗಳನ್ನು ತಿರಸ್ಕರಿಸಿದ್ದು ಆರೋಪಗಳನ್ನು ಮಾಡಿದ ಕುಸ್ತಿಪಟುಗಳು ಫೆಡರೇಶನ್ ಅನ್ನು ಮೊದಲೇ ಸಂಪರ್ಕಿಸಬೇಕಿತ್ತು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Thu, 19 January 23

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!