Watch: ಪ್ರತಿಭಟನಾ ವೇದಿಕೆಯಿಂದ ಕೆಳಗಿಳಿಯಿರಿ ಎಂದು ಬೃಂದಾ ಕಾರಟ್​​ಗೆ ಹೇಳಿದ ಕುಸ್ತಿಪಟು ಬಜರಂಗ್ ಪುನಿಯಾ

ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪುನಿಯಾ ರಾಜಕಾರಣಿ ಬೃಂದಾ ಕಾರಟ್ ಅವರಲ್ಲಿ ದಯವಿಟ್ಟು  ವೇದಿಕೆಯಿಂದ ಕೆಳಗಿಳಿಯಿರಿ ಎಂದು ನೇರಾ ನೇರ ಹೇಳಿದ್ದಾರೆ.

Watch: ಪ್ರತಿಭಟನಾ ವೇದಿಕೆಯಿಂದ ಕೆಳಗಿಳಿಯಿರಿ ಎಂದು ಬೃಂದಾ ಕಾರಟ್​​ಗೆ ಹೇಳಿದ ಕುಸ್ತಿಪಟು ಬಜರಂಗ್ ಪುನಿಯಾ
ವೇದಿಕೆಯಿಂದ ಕೆಳಗಿಳಿಯುವಂತೆ ಬೃಂದಾ ಕಾರಟ್​​ಗೆ ಹೇಳಿದ ಪೂನಿಯಾ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jan 19, 2023 | 6:01 PM

ಅಥ್ಲೀಟ್‌ಗಳ ಮೇಲೆ ಲೈಂಗಿಕ ಶೋಷಣೆ ನಡೆಸಿದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (Wrestling Federation of India) ಮುಖ್ಯಸ್ಥರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಕುಸ್ತಿಪಟುಗಳು ಎರಡನೇ ದಿನವೂ ಜಂತರ್ ಮಂತರ್​​ನಲ್ಲಿ ಧರಣಿ ಸತ್ಯಾಗ್ರಹವನ್ನು ಮುಂದುವರೆಸಿದ್ದಾರೆ. ಇಂದು ಗುರುವಾರ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕಿ ಬೃಂದಾ ಕಾರಟ್ (Brinda Karat) ದೆಹಲಿಯ ಜಂತರ್ ಮಂತರ್ ತಲುಪಿದ್ದಾರೆ. ಈ ಹೊತ್ತಲ್ಲಿ ಒಲಿಂಪಿಯನ್ ಬಜರಂಗ್ ಪುನಿಯಾ (Bajrang Punia),  ರಾಜಕಾರಣಿ ಬೃಂದಾ ಕಾರಟ್ ಅವರಲ್ಲಿ ದಯವಿಟ್ಟು  ವೇದಿಕೆಯಿಂದ ಕೆಳಗಿಳಿಯಿರಿ ಎಂದು ನೇರಾ ನೇರ ಹೇಳಿದ್ದಾರೆ. ಎಎನ್ಐ ಸುದ್ದಿಸಂಸ್ಥೆ ಹಂಚಿಕೊಂಡ ವಿಡಿಯೊದಲ್ಲಿ, 2022 ರ ಕಾಮನ್‌ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಪುನಿಯಾ, “ಪ್ರತಿಭಟನೆಯು ರಾಜಕೀಯ ರೂಪವನ್ನು ಪಡೆಯುವುದನ್ನು ನಾವು ಬಯಸುವುದಿಲ್ಲ” ಎಂದು ಹೇಳುವುದನ್ನು ಕೇಳಬಹುದು.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಪುನಿಯಾ ಇತರರು ಜಂತರ್ ಮಂತರ್‌ನಲ್ಲಿ ಎರಡನೇ ದಿನವೂ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.

ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ (ಡಬ್ಲ್ಯುಎಫ್‌ಐ) ಅಚ್ಚುಮೆಚ್ಚಿನ ತರಬೇತುದಾರರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಮತ್ತು ಅವರಿಗೆ ಕಿರುಕುಳ ನೀಡುತ್ತಾರೆ ಎಂದು ವಿನೇಶ್ ಆರೋಪಿಸಿದ್ದಾರೆ. ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಟೋಕಿಯೊ ಒಲಿಂಪಿಕ್ಸ್ 2020 ರಲ್ಲಿ ಸೋಲಿನ ನಂತರ ಹುಡುಗಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ತನ್ನನ್ನು ಅವರು “ಖೋಟಾ ಸಿಕ್ಕಾ” ಎಂದು ಕರೆದಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ; ದೆಹಲಿಯ ಜಂತರ್‌ಮಂತರ್‌ನಲ್ಲಿ ಖ್ಯಾತ ಕುಸ್ತಿಪಟುಗಳಿಂದ ಪ್ರತಿಭಟನೆ

ಏತನ್ಮಧ್ಯೆ, ಚಾಂಪಿಯನ್ ಕುಸ್ತಿಪಟು ಮತ್ತು ಬಿಜೆಪಿ ನಾಯಕಿ ಬಬಿತಾ ಫೋಗಟ್ ಗುರುವಾರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಆಟಗಾರರಿಗೆ ಸರ್ಕಾರ ತಮ್ಮೊಂದಿಗೆ ಇದೆ ಎಂದು ಭರವಸೆ ನೀಡಿದರು. “ಅವರ ಸಮಸ್ಯೆಗಳನ್ನು ಇಂದು ಪರಿಹರಿಸಲು ನಾನು ಪ್ರಯತ್ನಿಸುತ್ತೇನೆ” ಎಂದು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಬಿತಾ ಫೋಗಟ್ ಹೇಳಿದರು.

ಬಿಜೆಪಿಯ ಲೋಕಸಭಾ ಸಂಸದರಾದ ಬ್ರಿಜ್ ಭೂಷಣ್ ತಮ್ಮ ಮೇಲಿನ ಆರೋಪಗಳನ್ನು ತಿರಸ್ಕರಿಸಿದ್ದು ಆರೋಪಗಳನ್ನು ಮಾಡಿದ ಕುಸ್ತಿಪಟುಗಳು ಫೆಡರೇಶನ್ ಅನ್ನು ಮೊದಲೇ ಸಂಪರ್ಕಿಸಬೇಕಿತ್ತು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Thu, 19 January 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು