AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಂ, ಅಲ್ಲಾ ಎರಡೂ ಒಂದೇ; ವಿವಾದ ಸೃಷ್ಟಿಸಿದ ಜಮಿಯತ್ ಉಲೆಮಾ ಇ ಹಿಂದ್ ಅಧ್ಯಕ್ಷ

ನಿಮ್ಮ ಓಂನನ್ನೇ ನಾವು ಅಲ್ಲಾ ಎಂದು ಕರೆಯುತ್ತೇವೆ. ನೀವು ಈಶ್ವರ ಎಂದು ಕರೆಯುವವನನ್ನು ಪಾರ್ಸಿಯಲ್ಲಿ ಖುದಾ ಎಂದು ಕರೆಯಲಾಗುತ್ತದೆ ಎಂದು ಜಮಿಯತ್ ಉಲೇಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಸೈಯದ್ ಅರ್ಷದ್ ಮದನಿ ಹೇಳಿದ್ದಾರೆ.

ಓಂ, ಅಲ್ಲಾ ಎರಡೂ ಒಂದೇ; ವಿವಾದ ಸೃಷ್ಟಿಸಿದ ಜಮಿಯತ್ ಉಲೆಮಾ ಇ ಹಿಂದ್ ಅಧ್ಯಕ್ಷ
ಜಮಿಯತ್ ಉಲೇಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಸೈಯದ್ ಅರ್ಷದ್ ಮದನಿ
TV9 Web
| Edited By: |

Updated on: Feb 12, 2023 | 3:12 PM

Share

ನವದೆಹಲಿ: ಹಿಂದೂ ದೇವರ (Hindu God) ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಜಮಿಯತ್ ಉಲೇಮಾ-ಇ-ಹಿಂದ್ (Jamiat Ulema-e-Hind) ಮುಖ್ಯಸ್ಥ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಹಿಂದೂ ಧರ್ಮದ ಪವಿತ್ರ ಸಂಕೇತವಾದ ಓಂ ಮತ್ತು ಮುಸ್ಲಿಮರ ಅಲ್ಲಾ ಒಂದೇ ಎಂದು ಹೇಳುವ ಮೂಲಕ ಜಮಿಯತ್ ಉಲೇಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಸೈಯದ್ ಅರ್ಷದ್ ಮದನಿ ವಿವಾದಕ್ಕೆ ಕಾರಣರಾಗಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಜಮೀಯತ್ ಉಲೇಮಾ-ಇ-ಹಿಂದ್‌ನ 3 ದಿನಗಳ ಸರ್ವಸದಸ್ಯರ ಅಧಿವೇಶನದಲ್ಲಿ ಮಾತನಾಡಿದ ಅವರು, ಶ್ರೀರಾಮನಾಗಲಿ, ಬ್ರಹ್ಮನಾಗಲಿ ಯಾರೂ ಇಲ್ಲದಿದ್ದಾಗ ಧರ್ಮಗುರುಗಳು ಯಾರನ್ನು ಪೂಜಿಸುತ್ತಿದ್ದರು? ಆಗ ಕೆಲವರು ಓಂ ಆರಾಧನೆ ಮಾಡುತ್ತಿದ್ದರು ಎಂದು ಹೇಳಿದ್ದರು. ನಂತರ ನಾನು ಅವರಿಗೆ ಹೇಳಿದ್ದೇನೆಂದರೆ, ನಿಮ್ಮ ಓಂನನ್ನೇ ನಾವು ಅಲ್ಲಾ ಎಂದು ಕರೆಯುತ್ತೇವೆ. ನೀವು ಈಶ್ವರ ಎಂದು ಕರೆಯುವವನನ್ನು ಪಾರ್ಸಿಯಲ್ಲಿ ಖುದಾ ಎಂದು ಕರೆಯಲಾಗುತ್ತದೆ. ಇಂಗ್ಲಿಷ್ ಮಾತನಾಡುವ ಜನರು ಆತನನ್ನೇ ದೇವರು ಎಂದು ಕರೆಯುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Divorce: ಮುಸ್ಲಿಂ ಮಹಿಳೆಯರು ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯವನ್ನು ಮಾತ್ರ ಸಂಪರ್ಕಿಸಬೇಕು: ಮದ್ರಾಸ್ ಹೈಕೋರ್ಟ್​

ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಭಾರತ ಎಷ್ಟು ಸೇರಿದೆಯೋ ಅಷ್ಟೇ ಭಾರತವೂ ನಮಗೂ ಸೇರಿದ್ದು ಎಂದು ಶುಕ್ರವಾರ ಅವರು ಹೇಳಿದ್ದರು.

ಭಾರತ ನಮ್ಮ ದೇಶ. ಈ ದೇಶವು ನರೇಂದ್ರ ಮೋದಿ ಮತ್ತು ಮೋಹನ್ ಭಾಗವತ್ ಅವರಿಗೆ ಸೇರಿದ್ದಂತೆ ಮಹಮೂದ್ ಮದನಿಗೆ ಕೂಡ ಸೇರಿದೆ. ಮಹಮೂದ್ ಅವರಿಗಿಂತ ಒಂದು ಇಂಚು ಮುಂದಿಲ್ಲ ಅಥವಾ ಅವರು ಮಹಮೂದ್‌ಗಿಂತ ಒಂದು ಇಂಚು ಮುಂದಿಲ್ಲ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: Muslim Women: ಮಸೀದಿಗಳಲ್ಲಿ ಪ್ರಾರ್ಥಿಸಲು ಮಹಿಳೆಯರಿಗೆ ನಿರ್ಬಂಧವಿಲ್ಲ; ಸುಪ್ರೀಂಕೋರ್ಟ್​ಗೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮಾಹಿತಿ

ಜಮಿಯತ್ ಉಲಾಮಾ-ಇ-ಹಿಂದ್ ಮುಖ್ಯಸ್ಥರು ಭಾರತವು ಮುಸ್ಲಿಮರ ಮೊದಲ ತಾಯ್ನಾಡು. ಇಸ್ಲಾಂ ಈ ದೇಶದ ಅತ್ಯಂತ ಹಳೆಯ ಧರ್ಮ ಎಂದು ಹೇಳುವ ಮೂಲಕ ಅವರು ವಿವಾದ ಸೃಷ್ಟಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ